AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಆರ್ಯನ್​ಗೆ ಜಾಮೀನು: ಒಂದೇ ಮಾತಲ್ಲಿ ರಮ್ಯಾ ಪ್ರತಿಕ್ರಿಯೆ; ಖುಷಿಪಟ್ಟ ಸೆಲೆಬ್ರಿಟಿಗಳು ಯಾರೆಲ್ಲ?

Ramya Divya Spandana: ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಶಾರುಖ್ ಖಾನ್​​ ಪರವಾಗಿ ಮಾತನಾಡಿದ್ದಾರೆ. ಆರ್ಯನ್​ ಖಾನ್​ ಜಾಮೀನು ಪಡೆದು ಹೊರಬರುತ್ತಿರುವುದಕ್ಕೆ ರಮ್ಯಾ ಸೇರಿದಂತೆ ಹಲವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Aryan Khan: ಆರ್ಯನ್​ಗೆ ಜಾಮೀನು: ಒಂದೇ ಮಾತಲ್ಲಿ ರಮ್ಯಾ ಪ್ರತಿಕ್ರಿಯೆ; ಖುಷಿಪಟ್ಟ ಸೆಲೆಬ್ರಿಟಿಗಳು ಯಾರೆಲ್ಲ?
ರಮ್ಯಾ, ಆರ್ಯನ್​ ಖಾನ್​
TV9 Web
| Edited By: |

Updated on: Oct 29, 2021 | 9:21 AM

Share

ಸತತ ಹಿನ್ನಡೆ ಬಳಿಕ ಕಡೆಗೂ ಆರ್ಯನ್​ ಖಾನ್​ಗೆ​ ಜಾಮೀನು ಕೊಡಿಸುವಲ್ಲಿ ಅವರ ಪರ ವಕೀಲರು ಯಶಸ್ವಿ ಆಗಿದ್ದಾರೆ. 25 ದಿನಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿರುವ ಶಾರುಖ್​ ಖಾನ್​ ಪುತ್ರನಿಗೆ ಸದ್ಯಕ್ಕೆ ರಿಲೀಫ್​ ಸಿಕ್ಕಿದೆ. ಕೆಲವು ಷರತ್ತುಗಳ ಮೇಲೆ ಆರ್ಯನ್​ಗೆ ಬಾಂಬೆ ಹೈಕೋರ್ಟ್​ ಗುರುವಾರ (ಅ.28) ಜಾಮೀನು ಮಂಜೂರು ಮಾಡಿದೆ. ಜೈಲಿನ ಕೆಲವು ಪ್ರಕ್ರಿಯೆಗಳನ್ನು ಮುಗಿಸಿದ ಬಳಿಕ ಆರ್ಯನ್​ ಮನೆಗೆ ಬರಲಿದಿದ್ದಾರೆ. ಅವರಿಗೆ ಜಾಮೀನು ಸಿಕ್ಕ ಸುದ್ದಿ ಹೊರಬೀಳುತ್ತಿದ್ದಂತೆಯೇ ಸ್ಯಾಂಡಲ್​ವುಡ್​ ನಟಿ ರಮ್ಯಾ ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಆರ್ಯನ್ ಖಾನ್​​ ಬಂಧನದ ಬಗ್ಗೆ ರಮ್ಯಾ ಅವರು ಮೊದಲಿನಿಂದಲೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತ ಬಂದಿದ್ದರು. ತನಿಖೆಯ ರೀತಿ-ನೀತಿ ಬಗ್ಗೆ ಅವರು ತಕರಾರು ಎತ್ತಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಅನಿಸಿಕೆ ಹಂಚಿಕೊಳ್ಳುತ್ತಿದ್ದರು. ಈಗ ಆರ್ಯನ್​ ಖಾನ್​ಗೆ ಜಾಮೀನು ಮಂಜೂರು ಆದ ತಕ್ಷಣ ‘ಕಡೆಗೂ ಜಾಮೀನು ಸಿಕ್ತು’ ಎಂದು ನಿಟ್ಟುಸಿರು ಬಿಡುವ ರೀತಿಯಲ್ಲಿ ಅವರು ಸ್ಟೋರಿ ಪೋಸ್ಟ್​ ಮಾಡಿದ್ದಾರೆ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಶಾರುಖ್​ ಪರವಾಗಿ ಮಾತನಾಡಿದ್ದಾರೆ. ಆರ್ಯನ್​ ಖಾನ್​ ಜಾಮೀನು ಪಡೆದು ಹೊರಬರುತ್ತಿರುವುದಕ್ಕೆ ಹಲವರು ಖುಷಿ ವ್ಯಕ್ತಪಡಿಸಿದ್ದಾರೆ. ಸೋನು ಸೂದ್​, ಸ್ವರಾ ಭಾಸ್ಕರ್​, ಆರ್. ಮಾಧವನ್​, ಸೋನಮ್​ ಕಪೂರ್​, ಮಿಕಾ ಸಿಂಗ್​, ಹನ್ಸಲ್​ ಮೆಹ್ತಾ, ಸಂಜಯ್​ ಗುಪ್ತಾ, ಮಲೈಕಾ ಅರೋರಾ, ಕರಣ್​ ಜೋಹರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಂತಸ ಹಂಚಿಕೊಂಡಿದ್ದಾರೆ.

ಆರ್ಯನ್​ ಖಾನ್​ ತಂಗಿ ಸುಹಾನಾ ಖಾನ್​ ಅವರು ತಮ್ಮಿಬ್ಬರ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು, ‘ಐ ಲವ್​ ಯೂ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ‘ಕಾಲವೇ ತೀರ್ಪು ನೀಡಿದಾಗ ಸಾಕ್ಷಿಗಳ ಅವಶ್ಯಕತೆ ಇರುವುದಿಲ್ಲ’ ಎಂದು ಸೋನು ಸೂದ್​ ಟ್ವೀಟ್​ ಮಾಡಿದ್ದಾರೆ. ‘ಧನ್ಯವಾದಗಳು ದೇವರೇ.. ಒಬ್ಬ ತಂದೆಯಾಗಿ ನನಗೆ ಈಗ ಸಮಾಧಾನ ಎನಿಸುತ್ತಿದೆ. ಒಳ್ಳೆಯ ಸಂಗತಿಗಳೇ ನಡೆಯಲಿ’ ಎಂದು ಆರ್​. ಮಾಧವನ್​ ಟ್ವೀಟ್​ ಮಾಡಿದ್ದಾರೆ.

ಶುಕ್ರವಾರ (ಅ.29) ಸಂಜೆ ಅಥವಾ ಶನಿವಾರ (ಅ.30) ಬೆಳಗ್ಗೆ ಆರ್ಯನ್​ ಖಾನ್​ ಜೈಲಿನಿಂದ ಹೊರಬರುವ ಸಾಧ್ಯತೆ ಇದೆ. ಅವರನ್ನು ಬರಮಾಡಿಕೊಳ್ಳಲು ಈಗಾಗಲೇ ಶಾರುಖ್​ ಫ್ಯಾನ್ಸ್​ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಶಾರುಖ್​ ನಿವಾಸ ಮನ್ನತ್​ ಎದುರು ಅಭಿಮಾನಿಗಳ ದಂಡು ನೆರೆದಿದೆ. ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತಿದೆ.

ಇದನ್ನೂ ಓದಿ:

ರಮ್ಯಾಗೆ ಸಖತ್​ ಇಷ್ಟವಾಯ್ತು ‘ರತ್ನನ್​ ಪ್ರಪಂಚ’; ಈ ಚಿತ್ರಕ್ಕೆ ಅವರೇ ನಾಯಕಿ ಆಗಬೇಕಿತ್ತು, ಆದರೆ…

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ