AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಸಿಬಿ ವಶದಲ್ಲಿರುವಾಗಲೇ ನಾನಾ ರೀತಿಯ ಬಟ್ಟೆ ಧರಿಸುತ್ತಿರುವ ಸ್ಟಾರ್​ ಕಿಡ್​​ ಆರ್ಯನ್​ಗೆ ಹೇಗಿದೆ ಉಪಚಾರ? ಇಲ್ಲಿದೆ ಮಾಹಿತಿ

ಸೆಲೆಬ್ರಿಟಿಗಳು ಬಂಧನಕ್ಕೆ ಒಳಗಾಗಿದ್ದಾರೆ ಎಂದರೆ ಅವರಿಗೆ ರಾಜ ಮರ್ಯಾದೆ ನೀಡಲಾಗುತ್ತದೆ. ಅವರನ್ನು ಅದ್ಭುತವಾಗಿ ನೋಡಿಕೊಳ್ಳಲಾಗುತ್ತದೆ ಎಂಬುದು ಎಲ್ಲರ ನಂಬಿಕೆ. ಅನೇಕ ಬಾರಿ ಇದು ಸಾಬೀತಾಗಿದೆ ಕೂಡ.

ಎನ್​ಸಿಬಿ ವಶದಲ್ಲಿರುವಾಗಲೇ ನಾನಾ ರೀತಿಯ ಬಟ್ಟೆ ಧರಿಸುತ್ತಿರುವ ಸ್ಟಾರ್​ ಕಿಡ್​​ ಆರ್ಯನ್​ಗೆ ಹೇಗಿದೆ ಉಪಚಾರ? ಇಲ್ಲಿದೆ ಮಾಹಿತಿ
ಆರ್ಯನ್ ಖಾನ್
TV9 Web
| Edited By: |

Updated on: Oct 06, 2021 | 5:26 PM

Share

ಆರ್ಯನ್​ ಖಾನ್​ ಅವರು ಕಳೆದ ಕೆಲ ದಿನಗಳಿಂದ ಎನ್​ಸಿಬಿ ಕಸ್ಟಡಿಯಲ್ಲಿದ್ದಾರೆ. ಅವರನ್ನು ನಿರಂತರವಾಗಿ ವಿಚಾರಣೆ ಮಾಡಲಾಗುತ್ತಿದೆ. ಅಕ್ಟೋಬರ್​ 7ರವರೆಗೆ ಅವರು ಎನ್​ಸಿಬಿ ವಶದಲ್ಲಿಯೇ ಇರುವುದು ಅನಿವಾರ್ಯ ಆಗಿದೆ. ಇನ್ನು, ಶಾರುಖ್​ ಖಾನ್​ ಅವರು ಆರ್ಯನ್​ಗೆ ಜಾಮೀನು ಕೊಡಿಸೋಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಶಾರುಖ್​ ಮಗನಿಗೆ ಜೈಲಿನಲ್ಲಿ ಯಾವ ರೀತಿಯಲ್ಲಿ ಉಪಚಾರ ನೀಡಲಾಗುತ್ತಿದೆ ಎನ್ನುವ ಅನುಮಾನ ಅನೇಕರಲ್ಲಿದೆ.

ಸೆಲೆಬ್ರಿಟಿಗಳು ಬಂಧನಕ್ಕೆ ಒಳಗಾಗಿದ್ದಾರೆ ಎಂದರೆ ಅವರಿಗೆ ರಾಜ ಮರ್ಯಾದೆ ನೀಡಲಾಗುತ್ತದೆ. ಅವರನ್ನು ಅದ್ಭುತವಾಗಿ ನೋಡಿಕೊಳ್ಳಲಾಗುತ್ತದೆ ಎಂಬುದು ಎಲ್ಲರ ನಂಬಿಕೆ. ಅನೇಕ ಬಾರಿ ಇದು ಸಾಬೀತಾಗಿದೆ ಕೂಡ. ಈಗ ಆರ್ಯನ್​ ಖಾನ್​ ವಿಚಾರದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆರ್ಯನ್​ ಖಾನ್​ ಎನ್​ಸಿಬಿ ವಶದಲ್ಲಿದ್ದಾಗಲೇ ಬೇರೆಬೇರೆ ರೀತಿಯ ಬಟ್ಟೆ ಧರಿಸುತ್ತಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಆದರೆ, ಅವರನ್ನು ಸಾಮಾನ್ಯರಂತೆ ಟ್ರೀಟ್​ ಮಾಡಲಾಗುತ್ತಿದೆ ಎನ್ನುತ್ತಿವೆ ಮೂಲಗಳು.

ಎನ್​ಸಿಬಿ ಆವರಣದಲ್ಲಿರುವ ಮೆಸ್​ನಿಂದಲೇ ಆರ್ಯನ್​ ಖಾನ್​ಗೆ ಆಹಾರ ಬರುತ್ತಿದೆ. ಆಹಾರದ ವಿಚಾರದಲ್ಲಿ ವಿನಾಯಿತಿ ನೀಡುವಂತೆ ಅವರು ಕೋರಿದ್ದರು. ಆದರೆ, ಕೋರ್ಟ್​ ಇದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ, ಅವರು ಸಾಮಾನ್ಯ ಆಹಾರ ತಿನ್ನುವುದು ಅನಿವಾರ್ಯ ಆಗಿದೆ. ಇನ್ನು ಉಳಿದುಕೊಳ್ಳೋಕು ಸಾಮಾನ್ಯ ಕೊಠಡಿಯನ್ನೇ ನೀಡಲಾಗಿದೆ. ಸ್ಟಾರ್​ ಕಿಡ್​ ಆದರೂ ಆರ್ಯನ್​ಗೆ ಯಾವುದೇ ವಿಐಪಿ ಟ್ರೀಟ್​ಮೆಂಟ್​ ಇಲ್ಲ.

ಆರ್ಯನ್​ ಖಾನ್​ ವಿಚಾರದಲ್ಲಿ ನಟಿ ರಮ್ಯಾ ಅನುಮಾನ ಹೊರಹಾಕಿದ್ದಾರೆ. ‘ಆರ್ಯನ್ ಖಾನ್ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಆದಾಗ್ಯೂ ಅವರನ್ನು ವಶಕ್ಕೆ ಪಡೆದಿದೆ.  ನ್ಯಾಯಾಲಯದಲ್ಲಿ ವಾಟ್ಸಾಪ್ ಚಾಟ್‌ಗಳನ್ನು ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ. ಇನ್ನು, ವಿಚಾರಣೆ ವೇಳೆ ಆರ್ಯನ್​ ಅವರು ಹೇಳಿದ್ದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಎನ್​ಸಿಬಿ ಹೇಳುತ್ತಿದೆ. ಇದರ ಜತೆಗೆ ಹೊರಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದೂ ಹೇಳುತ್ತಿದೆ. ವಿಚಾರಣೆ ವೇಳೆ ದೀಪಿಕಾ ಪಡುಕೋಣೆ ಸಾಕಷ್ಟು ಬಾರಿ ಅತ್ತರು, ಆರ್ಯನ್​ ಖಾನ್​ ಅತ್ತಿದ್ದಾರೆ ಎಂಬಿತ್ಯಾದಿ ಗಾಸಿಪ್​ ಹರಡೋದು ಅವರಿಗೆ ಇಷ್ಟ ಎನಿಸುತ್ತದೆ. ಪ್ರಶ್ನೆ ಮಾಡುವಾಗ ಅಲ್ಲಿ ಯಾರೂ ಇರುವುದಿಲ್ಲ. ಆದಾಗ್ಯೂ ಇದು ಮಾಧ್ಯಮಗಳಿಗೆ ಹೇಗೆ ಸಿಕ್ಕಿತು?’ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: We Stand with Aryan Khan: ಆರ್ಯನ್ ಖಾನ್​, ಶಾರುಖ್ ಖಾನ್​ಗೆ ಟ್ವಿಟರ್ ಮೂಲಕ ಬೆಂಬಲ ಸೂಚಿಸಿದ ಫ್ಯಾನ್ಸ್!

ಆರ್ಯನ್​ ಖಾನ್​ ಬಂಧನದ ವಿಚಾರದಲ್ಲಿ ಅನುಮಾನ ಹೊರಹಾಕಿದ ನಟಿ ರಮ್ಯಾ

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!