AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಮತ್ತೊಂದು ಮುಖ ಬಯಲು; ವೈರಲ್​ ಆಯ್ತು ಹಳೇ ವಿಡಿಯೋ

ಆರ್ಯನ್​ ಸೆಲೆಬ್ರಿಟಿ ಮಗ ಆಗಿರಬಹುದು. ಆದರೆ, ಅವರಿಗೆ ಎಲ್ಲರಿಗೂ ಸಹಾಯ ಮಾಡಬೇಕು ಎನ್ನುವ ಮನಸ್ಸಿದೆ. ಆರ್ಯನ್​ ಅವರು ಮಲೈಕಾ ಅರೋರಾ ಸೇರಿ ಇತರರ ಜತೆ ಮುಂಬೈನ ರೆಸ್ಟೋರೆಂಟ್​ ಒಂದಕ್ಕೆ ತೆರಳಿದ್ದರು.

ಆರ್ಯನ್​ ಮತ್ತೊಂದು ಮುಖ ಬಯಲು; ವೈರಲ್​ ಆಯ್ತು ಹಳೇ ವಿಡಿಯೋ
ಆರ್ಯನ್
TV9 Web
| Edited By: |

Updated on: Oct 04, 2021 | 2:55 PM

Share

ನಟ ಶಾರುಖ್​ ಖಾನ್​ ಅವರ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಹೆಚ್ಚುತ್ತಿದೆ. ಕೇವಲ 23ನೇ ವಯಸ್ಸಿಗೆ ಅವರು ಡ್ರಗ್ಸ್​ ಕೇಸ್​ನಲ್ಲಿ ಎನ್​ಸಿಬಿ ಬಲೆಗೆ ಬಿದ್ದಿದ್ದಾರೆ. ಇದರಿಂದ ಅವರ ಕರಿಯರ್​ಗೆ ದೊಡ್ಡ ಮಟ್ಟದಲ್ಲಿ ಹೊಡೆತ ಬೀಳುವ ಸಾಧ್ಯತೆ ಇದೆ. ಹೀಗಿರುವಾಗಲೇ ಆರ್ಯನ್​ ಅವರ ಮತ್ತೊಂದು ಮುಖ ಅನಾವರಣ ಆಗಿದೆ. ಹಳೆಯ ವಿಡಿಯೋ ಒಂದು ಈಗ ವೈರಲ್​ ಆಗಿದೆ.

ಆರ್ಯನ್​ ಸೆಲೆಬ್ರಿಟಿ ಮಗ ಆಗಿರಬಹುದು. ಆದರೆ, ಅವರಿಗೆ ಎಲ್ಲರಿಗೂ ಸಹಾಯ ಮಾಡಬೇಕು ಎನ್ನುವ ಮನಸ್ಸಿದೆ. ಆರ್ಯನ್​ ಅವರು ಮಲೈಕಾ ಅರೋರಾ ಸೇರಿ ಇತರರ ಜತೆ ಮುಂಬೈನ ರೆಸ್ಟೋರೆಂಟ್​ ಒಂದಕ್ಕೆ ತೆರಳಿದ್ದರು. ಅಲ್ಲಿಂದ ಅವರು ಹೊರ ಬರುತ್ತಿದ್ದಂತೆ ಸಣ್ಣ ಮಕ್ಕಳು ಭಿಕ್ಷೆ ಎತ್ತುತ್ತಿರುವುದು ಕಂಡು ಬಂದಿದೆ. ಈ ವೇಳೆ​ ಅವರಿಗೆ ಆರ್ಯನ್ ಸಹಾಯ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ. ಅಲ್ಲಿಂದ ಅವರನ್ನು ಎನ್​ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್​ಸಿಬಿ ಕಚೇರಿ ಒಳಗೆ ಆರ್ಯನ್​ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ಈಗ ಅವರನ್ನು ಅರೆಸ್ಟ್​ ಮಾಡಲಾಗಿದೆ.  ಇದರಿಂದ ಶಾರುಖ್ ವಿಚಲಿತರಾಗಿದ್ದಾರೆ.

ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ. ಆರ್ಯನ್​ ಖಾನ್​ಗೆ ನಟನಾಗುವ ಆಸಕ್ತಿ ಇಲ್ಲವಂತೆ. ಅದನ್ನು ಈ ಹಿಂದೆ ಶಾರುಖ್​ ಹೇಳಿಕೊಂಡಿದ್ದರು. ಹಾಗಂತ ಅವರು ಸಿನಿಮಾ ಕ್ಷೇತ್ರದಿಂದ ದೂರ ಉಳಿದುಕೊಳ್ಳುತ್ತಾರೆ ಎಂದರ್ಥವಲ್ಲ. ನಿರ್ದೇಶನದಲ್ಲಿ ತೊಡಗಿಕೊಳ್ಳುವ ಆಸಕ್ತಿ ಅವರಿಗೆ ಇದೆ. ಲಂಡನ್​ನ ‘ಸೆವೆನ್​ ಓಕ್ಸ್​ ಹೈಸ್ಕೂಲ್​’ನಲ್ಲಿ ಆರ್ಯನ್​ ಪದವಿ ಶಿಕ್ಷಣ ಪಡೆದಿದ್ದಾರೆ. ಕಳೆದ ವರ್ಷ, ಅಂದರೆ 2020ರಲ್ಲಿ ಫೈನ್​ ಆರ್ಟ್ಸ್​, ಸಿನಿಮ್ಯಾಟಿಕ್​ ಆರ್ಟ್ಸ್​, ಫಿಲ್ಮ್​ ಮತ್ತು ಟೆಲಿವಿಷನ್​ ಪ್ರೊಡಕ್ಷನ್​ ವಿಷಯಗಳಲ್ಲಿ ಅವರು ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ಆರ್ಯನ್​ ಖಾನ್​ಗೆ ಜಾಮೀನು ಅಥವಾ ಜೈಲು? ಮತ್ತೆ ಕೋರ್ಟ್​ ಮುಂದೆ ಬರಲಿರುವ ಶಾರುಖ್​ ಪುತ್ರ

‘ನಾನು​ 4ವರ್ಷಗಳಿಂದ ಡ್ರಗ್ಸ್​ ಸೇವಿಸುತ್ತಿದ್ದೇನೆ, ಅಪ್ಪ-ಅಮ್ಮಂಗೂ ಗೊತ್ತು‘; ಎನ್​ಸಿಬಿ ಎದುರು ಅಳುತ್ತ ಸತ್ಯ ಒಪ್ಪಿಕೊಂಡ ಶಾರುಖ್​ ಪುತ್ರ ಆರ್ಯನ್​ !

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್