AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ’ ಎರಡನೇ ಪಾರ್ಟ್​ನಲ್ಲಿ ಆರ್ಯನ್ ಖಾನ್? ವೈರಲ್ ಆಯ್ತು ನಕಲಿ ಪೋಸ್ಟರ್  

ಶಾರುಖ್ ಖಾನ್ ಅವರು ಬಾಲಿವುಡ್​ನ ಬೇಡಿಕೆಯ ನಟ. ಮಗ ಆರ್ಯನ್ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಎಂಬುದು ಶಾರುಖ್ ಉದ್ದೇಶ ಆಗಿತ್ತು. ಆದರೆ, ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್ ಹೆಸರು ಸೇರಿಕೊಂಡಿತು.

‘ಬ್ರಹ್ಮಾಸ್ತ್ರ’ ಎರಡನೇ ಪಾರ್ಟ್​ನಲ್ಲಿ ಆರ್ಯನ್ ಖಾನ್? ವೈರಲ್ ಆಯ್ತು ನಕಲಿ ಪೋಸ್ಟರ್  
ಆರ್ಯನ್
TV9 Web
| Edited By: |

Updated on: Oct 01, 2022 | 8:01 PM

Share

ಅಯಾನ್ ಮುಖರ್ಜಿ (Ayan Mukerji) ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಮೂರು ಭಾಗ​ಗಳಲ್ಲಿ ಬರಲಿದೆ ಎಂಬುದು ಈ ಮೊದಲೇ ಘೋಷಣೆ ಆಗಿತ್ತು. ಈಗ ಮೊದಲ ಪಾರ್ಟ್ ಹಿಟ್ ಆಗಿರುವುದರಿಂದ ಎರಡನೇ ಪಾರ್ಟ್ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಶಾರುಖ್ ಖಾನ್ ಅವರು ಮೊದಲ ಪಾರ್ಟ್​ನಲ್ಲಿ ಮಿಂಚಿದ್ದರು. ಈಗ ಆರ್ಯನ್ ಖಾನ್ (Aryan Khan) ಅವರು ಎರಡನೇ ಪಾರ್ಟ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಎಡಿಟ್ ಮಾಡಲಾದ ಫೋಟೋಗಳು ಹರಿದಾಡುತ್ತಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಶಾರುಖ್ ಖಾನ್ ಅವರು ಬಾಲಿವುಡ್​ನ ಬೇಡಿಕೆಯ ನಟ. ಮಗ ಆರ್ಯನ್ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಎಂಬುದು ಶಾರುಖ್ ಉದ್ದೇಶ ಆಗಿತ್ತು. ಆದರೆ, ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್ ಹೆಸರು ಸೇರಿಕೊಂಡಿತು. ಅವರು ಅರೆಸ್ಟ್ ಕೂಡ ಆದರು. ಈ ಕಾರಣದಿಂದ ಹಲವು ಸಮಯ ಆರ್ಯನ್ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈಗ ಆರ್ಯನ್ ಖಾನ್ ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಅವರು ನಟನೆಗೂ ಕಾಲಿಡಲಿದ್ದಾರಂತೆ.

ಮೊದಲ ಪಾರ್ಟ್​ನಲ್ಲಿ ವಾನರ ಅಸ್ತ್ರವನ್ನು ಶಾರುಖ್ ನಿರ್ವಹಿಸಿದ್ದರು. ಆದರೆ, ಈ ಪಾತ್ರ ಮೊದಲ ಪಾರ್ಟ್​ನಲ್ಲೇ ಕೊನೆಯಾಗುತ್ತದೆ. ಈ ಕಾರಣಕ್ಕೆ ಎರಡನೇ ಪಾರ್ಟ್​ನಲ್ಲಿ ಆ ಪಾತ್ರವನ್ನು ಆರ್ಯನ್ ಖಾನ್ ನಿರ್ವಹಿಸಿದರೆ ಉತ್ತಮ ಅನ್ನೋದು ಕೆಲವರ ಅಭಿಪ್ರಾಯ. ಹೀಗಾಗಿ, ವಿವಿಧ ರೀತಿಯ ಫ್ಯಾನ್ ಮೇಡ್ ಪೋಸ್ಟ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
Image
Brahmastra: ಮಾಜಿ ಪ್ರೇಮಿಯ ಸಿನಿಮಾದಲ್ಲಿ ದೀಪಿಕಾ ಕದ್ದುಮುಚ್ಚಿ ನಟನೆ? ಝೂಮ್​ ಮಾಡಿ ಸಾಕ್ಷಿ ತೋರಿಸಿದ ನೆಟ್ಟಿಗರು
Image
Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು

ಅಯಾನ್ ಮುಖರ್ಜಿ ಅವರು ಈಗಾಗಲೇ ‘ಬ್ರಹ್ಮಾಸ್ತ್ರ 2’ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ಯಾರೆಲ್ಲ ಇರಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ. ಮೊದಲ ಪಾರ್ಟ್​ಗಿಂತಲೂ ಎರಡನೇ ಪಾರ್ಟ್​ ಅದ್ದೂರಿಯಾಗಿ ಮೂಡಿ ಬರಲಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಇದನ್ನೂ ಓದಿ: ರಣಬೀರ್-ಆಲಿಯಾ ಸಿನಿಮಾಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್; ರಿವೀಲ್ ಆಯ್ತು ಹೊಸ ವಿಚಾರ

ಆರ್ಯನ್ ಖಾನ್ ವಿಚಾರಕ್ಕೆ ಬರೋದಾದರೆ ವೆಬ್ ಸೀರಿಸ್ ನಿರ್ದೇಶನ ಮಾಡಲು ಅವರು ನಿರ್ಧರಿಸಿದ್ದಾರೆ. ಶಾರುಖ್ ಖಾನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಸ್ಕ್ರಿಪ್ಟ್ ಕೆಲಸಗಳಲ್ಲಿ ಆರ್ಯನ್ ಖಾನ್ ಬ್ಯುಸಿ ಆಗಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಬಹುದು.

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?