‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?

ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಅವರಿಗೆ ಅ.25ರಂದು 30ನೇ ವರ್ಷದ ವಿವಾಹ ವಾರ್ಷಿಕೋತ್ಸವ. ಅವರಿಗೆ ವಿಶ್​ ಮಾಡಬೇಕು ಎಂಬುದು ಆರ್ಯನ್​ ಬಯಕೆ ಆಗಿತ್ತು.

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?
ಆರ್ಯನ್ ಖಾನ್
Follow us
| Updated By: ಮದನ್​ ಕುಮಾರ್​

Updated on: Oct 26, 2021 | 8:49 AM

ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದು ಜೈಲು ಸೇರಿರುವ ಆರ್ಯನ್​ ಖಾನ್​ಗೆ ಸಂಕಷ್ಟ ಮುಂದುವರಿದಿದೆ. ಅವರಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ. ಸದ್ಯ ಆರ್ಥರ್​ ರೋಡ್​ ಜೈಲಿನಲ್ಲಿ ಆರ್ಯನ್​ ಖಾನ್​ ದಿನ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಕುಟುಂಬದ ಪ್ರಮುಖ ಕ್ಷಣಗಳನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅ.8ರಂದು ತಾಯಿ ಗೌರಿ ಖಾನ್​ ಬರ್ತ್​ಡೇ. ಅ.25ರಂದು ಶಾರುಖ್​-ಗೌರಿ ವೆಡ್ಡಿಂಗ್​ ಆ್ಯನಿವರ್ಸರಿ. ಈ ಎರಡನ್ನೂ ಆರ್ಯನ್​ ಖಾನ್​ ಮಿಸ್​ ಮಾಡಿಕೊಂಡಿದ್ದಾರೆ. ಪುತ್ರನ ಬಂಧನದಿಂದಾಗಿ ಶಾರುಖ್​ ಮನೆಯಲ್ಲಿ ಎಲ್ಲ ಸಂಭ್ರಮಕ್ಕೂ ಬ್ರೇಕ್​ ಬಿದ್ದಿದೆ.

ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಅವರಿಗೆ ಅ.25ರಂದು 30ನೇ ವರ್ಷದ ವಿವಾಹ ವಾರ್ಷಿಕೋತ್ಸವ. ಅವರಿಗೆ ವಿಶ್​ ಮಾಡಬೇಕು ಎಂಬುದು ಆರ್ಯನ್​ ಬಯಕೆ ಆಗಿತ್ತು. ಆದರೆ ಜೈಲಿನಲ್ಲಿರುವ ಕಾರಣ ಅದು ಸಾಧ್ಯವಾಗಿಲ್ಲ. ಕೊನೇ ಪಕ್ಷ ವಿಡಿಯೋ ಕಾಲ್​ ಮೂಲಕವಾದರೂ ವಿಶ್​ ಮಾಡಬೇಕು ಎಂದು ಆರ್ಯನ್​ ಬಯಸಿದರು. ದಯವಿಟ್ಟು ಒಂದು ವಿಡಿಯೋ ಕಾಲ್​ ಮಾಡಿಕೊಡಿ ಎಂದು ಜೈಲು ಅಧಿಕಾರಿಗಳ ಬಳಿ ಅವರು ಅಂಗಲಾಚಿದರು ಎಂಬ ಮಾಹಿತಿ ಹರಿದಾಡುತ್ತಿದೆ. ಆರ್ಯನ್​ ಖಾನ್​ ಜೈಲು ವಾಸಕ್ಕೆ ಸಂಬಂಧಿಸಿದಂತೆ ಈ ರೀತಿಯ ಅನೇಕ ಅಂತೆ-ಕಂತೆಗಳು ಕೇಳಿಬರುತ್ತಿವೆ.

ಪುಸ್ತಕ ಓದುತ್ತಿರುವ ಆರ್ಯನ್​:

ಹುಟ್ಟಿನಿಂದಲೇ ಶ್ರೀಮಂತಿಕೆಯ ಜೀವನ ಕಂಡಿರುವ ಆರ್ಯನ್​ಗೆ ಜೈಲಿನಲ್ಲಿ ಹೊಂದಿಕೊಳ್ಳುವುದು ಕಷ್ಟ ಆಗುತ್ತಿದೆ. ಮಾನಸಿಕವಾಗಿ ಅವರು ಘಾಸಿಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಧೈರ್ಯ ತುಂಬಲು ಒಳ್ಳೆಯ ಪುಸ್ತಕಗಳು ಸಹಾಯ ಮಾಡಬಲ್ಲವು. ಕಳೆದ ಕೆಲವು ದಿನಗಳಿಂದ ಅವರು ಪುಸ್ತಕ ಓದಲು ಶುರು ಮಾಡಿದ್ದಾರೆ. ‘ದಿ ಲಯನ್ಸ್​ ಗೇಟ್​’ ಪುಸ್ತಕ ಓದಿ ಮುಗಿಸಿದ ಮೇಲೆ ಅವರು ರಾಮ ಮತ್ತು ಸೀತೆಯ ಕುರಿತ ಕೃತಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಮುಂಬೈನ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹಾಗಾಗಿ ಅವರ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆರ್ಯನ್​ ಬಂಧನದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಶಾರುಖ್​ ಖಾನ್​ ಕುಟುಂಬಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು