AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?

ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಅವರಿಗೆ ಅ.25ರಂದು 30ನೇ ವರ್ಷದ ವಿವಾಹ ವಾರ್ಷಿಕೋತ್ಸವ. ಅವರಿಗೆ ವಿಶ್​ ಮಾಡಬೇಕು ಎಂಬುದು ಆರ್ಯನ್​ ಬಯಕೆ ಆಗಿತ್ತು.

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?
ಆರ್ಯನ್ ಖಾನ್
TV9 Web
| Edited By: |

Updated on: Oct 26, 2021 | 8:49 AM

Share

ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿ ಬಿದ್ದು ಜೈಲು ಸೇರಿರುವ ಆರ್ಯನ್​ ಖಾನ್​ಗೆ ಸಂಕಷ್ಟ ಮುಂದುವರಿದಿದೆ. ಅವರಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ. ಸದ್ಯ ಆರ್ಥರ್​ ರೋಡ್​ ಜೈಲಿನಲ್ಲಿ ಆರ್ಯನ್​ ಖಾನ್​ ದಿನ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಕುಟುಂಬದ ಪ್ರಮುಖ ಕ್ಷಣಗಳನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅ.8ರಂದು ತಾಯಿ ಗೌರಿ ಖಾನ್​ ಬರ್ತ್​ಡೇ. ಅ.25ರಂದು ಶಾರುಖ್​-ಗೌರಿ ವೆಡ್ಡಿಂಗ್​ ಆ್ಯನಿವರ್ಸರಿ. ಈ ಎರಡನ್ನೂ ಆರ್ಯನ್​ ಖಾನ್​ ಮಿಸ್​ ಮಾಡಿಕೊಂಡಿದ್ದಾರೆ. ಪುತ್ರನ ಬಂಧನದಿಂದಾಗಿ ಶಾರುಖ್​ ಮನೆಯಲ್ಲಿ ಎಲ್ಲ ಸಂಭ್ರಮಕ್ಕೂ ಬ್ರೇಕ್​ ಬಿದ್ದಿದೆ.

ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಅವರಿಗೆ ಅ.25ರಂದು 30ನೇ ವರ್ಷದ ವಿವಾಹ ವಾರ್ಷಿಕೋತ್ಸವ. ಅವರಿಗೆ ವಿಶ್​ ಮಾಡಬೇಕು ಎಂಬುದು ಆರ್ಯನ್​ ಬಯಕೆ ಆಗಿತ್ತು. ಆದರೆ ಜೈಲಿನಲ್ಲಿರುವ ಕಾರಣ ಅದು ಸಾಧ್ಯವಾಗಿಲ್ಲ. ಕೊನೇ ಪಕ್ಷ ವಿಡಿಯೋ ಕಾಲ್​ ಮೂಲಕವಾದರೂ ವಿಶ್​ ಮಾಡಬೇಕು ಎಂದು ಆರ್ಯನ್​ ಬಯಸಿದರು. ದಯವಿಟ್ಟು ಒಂದು ವಿಡಿಯೋ ಕಾಲ್​ ಮಾಡಿಕೊಡಿ ಎಂದು ಜೈಲು ಅಧಿಕಾರಿಗಳ ಬಳಿ ಅವರು ಅಂಗಲಾಚಿದರು ಎಂಬ ಮಾಹಿತಿ ಹರಿದಾಡುತ್ತಿದೆ. ಆರ್ಯನ್​ ಖಾನ್​ ಜೈಲು ವಾಸಕ್ಕೆ ಸಂಬಂಧಿಸಿದಂತೆ ಈ ರೀತಿಯ ಅನೇಕ ಅಂತೆ-ಕಂತೆಗಳು ಕೇಳಿಬರುತ್ತಿವೆ.

ಪುಸ್ತಕ ಓದುತ್ತಿರುವ ಆರ್ಯನ್​:

ಹುಟ್ಟಿನಿಂದಲೇ ಶ್ರೀಮಂತಿಕೆಯ ಜೀವನ ಕಂಡಿರುವ ಆರ್ಯನ್​ಗೆ ಜೈಲಿನಲ್ಲಿ ಹೊಂದಿಕೊಳ್ಳುವುದು ಕಷ್ಟ ಆಗುತ್ತಿದೆ. ಮಾನಸಿಕವಾಗಿ ಅವರು ಘಾಸಿಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಧೈರ್ಯ ತುಂಬಲು ಒಳ್ಳೆಯ ಪುಸ್ತಕಗಳು ಸಹಾಯ ಮಾಡಬಲ್ಲವು. ಕಳೆದ ಕೆಲವು ದಿನಗಳಿಂದ ಅವರು ಪುಸ್ತಕ ಓದಲು ಶುರು ಮಾಡಿದ್ದಾರೆ. ‘ದಿ ಲಯನ್ಸ್​ ಗೇಟ್​’ ಪುಸ್ತಕ ಓದಿ ಮುಗಿಸಿದ ಮೇಲೆ ಅವರು ರಾಮ ಮತ್ತು ಸೀತೆಯ ಕುರಿತ ಕೃತಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಮುಂಬೈನ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹಾಗಾಗಿ ಅವರ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆರ್ಯನ್​ ಬಂಧನದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಶಾರುಖ್​ ಖಾನ್​ ಕುಟುಂಬಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ