AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಂಬೆ ಹೈಕೋರ್ಟ್ ಮೊರೆ ಹೋದ ಶಾರುಖ್​​ ಖಾನ್ ಮಗ​; ಕಾರಣ ಏನು?

ಆರ್ಯನ್​ ಖಾನ್​ಗೆ ಸಾಕಷ್ಟು ಷರತ್ತುಗಳನ್ನು ಹಾಕಿ ಜಾಮೀನು ನೀಡಲಾಗಿತ್ತು. ಇದನ್ನು ಅವರು ಪಾಲಿಸಲೇಬೇಕು. ಎನ್​ಸಿಬಿ ಕಚೇರಿಗೆ ಪ್ರತಿ ಶುಕ್ರವಾರ ತೆರಳಿ ಸಹಿ ಹಾಕುವುದು ಕೂಡ ಈ ಷರತ್ತಿನಲ್ಲಿದೆ.

ಮತ್ತೆ ಬಾಂಬೆ ಹೈಕೋರ್ಟ್ ಮೊರೆ ಹೋದ ಶಾರುಖ್​​ ಖಾನ್ ಮಗ​; ಕಾರಣ ಏನು?
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Edited By: |

Updated on: Dec 10, 2021 | 9:23 PM

Share

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದ ಆರ್ಯನ್​ ಖಾನ್​ ಸದ್ಯ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಆರ್ಯನ್​ ಅವರನ್ನು ಐಷಾರಾಮಿ ಹಡಗಿನಲ್ಲೇ ಅರೆಸ್ಟ್​ ಮಾಡಿದ್ದರು. ಈಗ ಈ ಪ್ರಕರಣದಲ್ಲಿ ಅವರು ಸಣ್ಣ ರಿಲೀಫ್​ ಪಡೆದುಕೊಂಡಿದ್ದಾರೆ. ಆದರೆ, ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ. ಇದು ಆರ್ಯನ್​ಗೆ ಕಿರಿಕಿರಿ ಉಂಟು ಮಾಡುತ್ತಿದೆ. ಹೀಗಾಗಿ, ಅವರು ಮತ್ತೆ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಆರ್ಯನ್​ ಖಾನ್​ಗೆ ಸಾಕಷ್ಟು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿತ್ತು. ಇದನ್ನು ಅವರು ಪಾಲಿಸಲೇಬೇಕು. ಎನ್​ಸಿಬಿ ಕಚೇರಿಗೆ ಪ್ರತಿ ಶುಕ್ರವಾರ ತೆರಳಿ ಸಹಿ ಹಾಕುವುದು ಕೂಡ ಈ ಷರತ್ತಿನಲ್ಲಿದೆ. ಜಾಮೀನು ಪಡೆದ ಆರೋಪಿ ಊರು ಬಿಡಬಹುದು. ಸಹಿ ವಿಧಿಸಿ ಹೋದರೆ ಅವರು ನಗರದಲ್ಲಿಯೇ ಇದ್ದಾರೆ ಎಂಬುದು ಗೊತ್ತಾಗುತ್ತದೆ. ಈ ಕಾರಣಕ್ಕೆ ಪ್ರತಿ ಶುಕ್ರವಾರ ಎನ್​ಸಿಬಿ ಕಚೇರಿಗೆ ತೆರಳುವಂತೆ ಆರ್ಯನ್​ ಖಾನ್​ಗೆ ಸೂಚಿಸಲಾಗಿತ್ತು. ಇದನ್ನು ಶಾರುಖ್​ ಮಗ ಪಾಲಿಸುತ್ತಿದ್ದಾರೆ.

ಪ್ರತಿ ಶುಕ್ರವಾರ ಆರ್ಯನ್​ ಖಾನ್​ ಮುಂಬೈನ ಎನ್​ಸಿಬಿ ಕಚೇರಿಗೆ ತೆರಳುತ್ತಿದ್ದಾರೆ. ಅಲ್ಲಿ ಸಹಿ ಹಾಕಿ ಮರಳುತ್ತಿದ್ದಾರೆ. ಆದರೆ, ಇಲ್ಲೊಂದು ಸಮಸ್ಯೆ ಎದುರಾಗಿದೆ. ಅವರು ಅಲ್ಲಿ ತೆರಳುವಾಗ ಮಾಧ್ಯಮಗಳು, ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಇದು ಅವರಿಗೆ ತೊಂದರೆ ಉಂಟು ಮಾಡುತ್ತಿದೆ. ಹೀಗಾಗಿ, ಜಾಮೀನು ಆದೇಶದಲ್ಲಿ ಬದಲಾವಣೆ ಮಾಡುವಂತೆ ಅವರು ಬಾಂಬೆ ಹೈಕೋರ್ಟ್​ ಮೆಟ್ಟಿಲು ಹತ್ತಿದ್ದಾರೆ. ಈ ಅರ್ಜಿ ಶೀಘ್ರವೇ ವಿಚಾರಣೆಗೆ ಬರಲಿದೆ.

ಆರ್ಯನ್ ಮತ್ತು ಇತರ ಆರೋಪಿಗಳಿಂದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿಲ್ಲ. ಮರ್ಚಂಟ್ ಮತ್ತು ಧಮೇಚಾ ಅವರಿಂದ ಅಲ್ಪಪ್ರಮಾಣದ ಡ್ರಗ್ಸ್​ ವಶಪಡಿಸಿಕೊಳ್ಳಲಾಗಿದೆ. ಆದರೆ ಎನ್​ಸಿಬಿ ಮಾತ್ರ ಎಲ್ಲ ಆರೋಪಿಗಳ ಬಳಿ ವಾಣಿಜ್ಯ ಗುಣಮಟ್ಟದ ಡ್ರಗ್ಸ್​ ಪತ್ತೆಯಾಗಿತ್ತು. ಇವೆಲ್ಲವನ್ನೂ ಸಂಚಿನ ಭಾಗವಾಗಿ ಪರಿಗಣಿಸಬೇಕು ಎಂದು ಹೇಳಿತ್ತು. ಎನ್​ಡಿಪಿಎಸ್ ಕಾಯ್ದೆಯ ಅನ್ವಯ ಇದನ್ನು ಸಂಚು ಎಂದು ಪರಿಗಣಿಸಬೇಕು ಎಂದು ವಾದಿಸಿತ್ತು. ಮೂವರು ಆರೋಪಿಗಳು ಅಪರಾಧಕ್ಕಾಗಿ ಸಂಚು ರೂಪಿಸಿದ್ದರು. ಈ ಪ್ರಕರಣದಲ್ಲಿ ಬಂಧಿತರಾಗಿರುವ ಇತರರ ಜೊತೆಗೆ ಇದೇ ವಿಷಯವಾಗಿ ಚರ್ಚಿಸಿದ್ದರು ಎಂದು ನಿರೂಪಿಸುವ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಇದನ್ನೂ ಓದಿ: Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ