AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಕಳೆದ ಕೆಲವು ದಿನಗಳಿಂದ ಆರ್ಯನ್​ ಖಾನ್​ ಪುಸ್ತಕ ಓದಲು ಶುರು ಮಾಡಿದ್ದಾರೆ. ‘ದಿ ಲಯನ್ಸ್​ ಗೇಟ್​’ ಪುಸ್ತಕ ಓದಿ ಮುಗಿಸಿದ ಮೇಲೆ ಅವರು ರಾಮ ಮತ್ತು ಸೀತೆಯ ಕುರಿತ ಕೃತಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು
ಆರ್ಯನ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Oct 24, 2021 | 12:12 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಡ್ರಗ್ಸ್​ ಕೇಸ್​ನಲ್ಲಿ ಜೈಲು ಸೇರಿರುವ ಅವರಿಗೆ ಎಷ್ಟೇ ಪ್ರಯತ್ನ ಮಾಡಿದರೂ ಜಾಮೀನು ಸಿಗುತ್ತಿಲ್ಲ. ಆ ಕಾರಣಕ್ಕಾಗಿ ಅವರಿಗೆ ಚಿಂತೆ ಶುರುವಾಗಿದೆ. ಮಾನಸಿಕವಾಗಿ ಅವರು ಕುಗ್ಗಿ ಹೋಗಿದ್ದಾರೆ. ಹಾಗಾಗಿ ಆರ್ಥರ್​ ರೋಡ್​ ಜೈಲು ಅಧಿಕಾರಿಗಳು ಒಂದು ಸಲಹೆ ನೀಡಿದ್ದಾರೆ. ಕೆಲವು ಪುಸ್ತಕಗಳನ್ನು ಓದುವಂತೆ ಅಧಿಕಾರಿಗಳು ಆರ್ಯನ್​ಗೆ ತಿಳಿಸಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ರಾಮ ಮತ್ತು ಸೀತೆಯ ಕುರಿತ ಪುಸ್ತಕಗಳನ್ನು ಅವರು ಓದುತ್ತಿದ್ದಾರೆ.

ಹುಟ್ಟಿನಿಂದಲೇ ಶ್ರೀಮಂತಿಕೆಯ ಜೀವನ ಕಂಡಿರುವ ಆರ್ಯನ್​ಗೆ ಜೈಲಿನಲ್ಲಿ ಹೊಂದಿಕೊಳ್ಳುವುದು ಕಷ್ಟ ಆಗುತ್ತಿದೆ. ಮಾನಸಿಕವಾಗಿ ಅವರು ಘಾಸಿಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಧೈರ್ಯ ತುಂಬಲು ಒಳ್ಳೆಯ ಪುಸ್ತಕಗಳು ಸಹಾಯ ಮಾಡಬಲ್ಲವು. ಕಳೆದ ಕೆಲವು ದಿನಗಳಿಂದ ಅವರು ಪುಸ್ತಕ ಓದಲು ಶುರು ಮಾಡಿದ್ದಾರೆ. ‘ದಿ ಲಯನ್ಸ್​ ಗೇಟ್​’ ಪುಸ್ತಕ ಓದಿ ಮುಗಿಸಿದ ಮೇಲೆ ಅವರು ರಾಮ ಮತ್ತು ಸೀತೆಯ ಕುರಿತ ಕೃತಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಖೈದಿಗಳು ಬಯಸಿದರೆ ಜೈಲಿನ ಗ್ರಂಥಾಲಯದಲ್ಲಿ ಇರುವ ಪುಸ್ತಕಗಳನ್ನು ಓದಬಹುದು. ಮನೆಯವರಿಂದ ಪುಸ್ತಕಗಳನ್ನು ಕೂಡ ತರಿಸಿಕೊಳ್ಳಬಹುದು. ಅಧ್ಯಾತ್ಮ, ಸದಾಚಾರ ಮುಂತಾದ ಒಳ್ಳೆಯ ವಿಚಾರಕ್ಕೆ ಸಂಬಂಧಿಸಿದ ಕೃತಿಗಳಿಗೆ ಮಾತ್ರ ಅವಕಾಶ. ಒಂದು ವೇಳೆ ಖೈದಿಯು ಮನೆಯವರಿಂದ ತರಿಸಿಕೊಂಡ ಪುಸ್ತಕವನ್ನು ಬಿಡುಗಡೆ ಸಂದರ್ಭದಲ್ಲಿ ಜೈಲಿನಲ್ಲೇ ಬಿಟ್ಟು ಹೋದರೆ ಆ ಕೃತಿಯನ್ನು ಜೈಲಿನ ಗ್ರಂಥಾಲಯದಲ್ಲಿ ಇರಿಸಲಾಗುವುದು. ಮುಂಬರುವ ಖೈದಿಗಳಿಗೆ ಆ ಪುಸ್ತಕ ನೀಡಲಾಗುತ್ತದೆ.

ಮುಂಬೈನ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹಾಗಾಗಿ ಅವರ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆರ್ಯನ್​ ಬಂಧನದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಶಾರುಖ್​ ಖಾನ್​ ಕುಟುಂಬಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಆರ್ಯನ್​ ಖಾನ್​ ಜೊತೆ ಸ್ನೇಹ ಹೊಂದಿರುವ ಅನನ್ಯಾ ಪಾಂಡೆ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಅವರ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸದ್ಯ ಅವರ ಮೊಬೈಲ್​ ಮತ್ತು ಲ್ಯಾಪ್​​ಟಾಪ್​ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿನ ವಾಟ್ಸಪ್​ ಚಾಟ್​ಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

ದಳಪತಿ ವಿಜಯ್​ ಸಿನಿಮಾದಿಂದ ಅನನ್ಯಾ ಪಾಂಡೆ ಔಟ್​? ಡ್ರಗ್ಸ್​ ಕೇಸ್​ ಬೆನ್ನಲ್ಲೇ ಇನ್ನೊಂದು ಗಾಸಿಪ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!