AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

ಡ್ರಗ್ಸ್​ ಪಾರ್ಟಿ ಮೇಲೆ ದಾಳಿ ಮಾಡಿದ ಬಳಿಕ ಆರ್ಯನ್​ ಖಾನ್​ ಅವರನ್ನು ಎಳೆದುಕೊಂಡು ಬಂದು ಎನ್​ಸಿಬಿ ಕಚೇರಿಯಲ್ಲಿ ಕೂರಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆರ್ಯನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?
ಕೆಪಿ ಗೋಸಾವಿ, ಆರ್ಯನ್ ಖಾನ್
TV9 Web
| Edited By: |

Updated on: Oct 05, 2021 | 8:55 AM

Share

ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ರಾತ್ರೋರಾತ್ರಿ ಕುಖ್ಯಾತಿ ಪಡೆದುಕೊಂಡಿದ್ದಾರೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಪಾರ್ಟಿ ಮಾಡುವಾಗ ಅವರು ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೇವ್​ ಪಾರ್ಟಿ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದಾಗ ಅನೇಕರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು. ಆ ಸಂದರ್ಭದಲ್ಲಿ ಆರ್ಯನ್​ ಖಾನ್​ ಜೊತೆ ಕ್ಲಿಕ್ಕಿಸಿದ ಒಂದು ಸೆಲ್ಫಿ ಈಗ ಸಖತ್​ ವೈರಲ್​ ಆಗಿದೆ.

ಆರ್ಯನ್​ ಖಾನ್​ ಅವರನ್ನು ಎಳೆದುಕೊಂಡು ಬಂದು ಎನ್​ಸಿಬಿ ಕಚೇರಿಯಲ್ಲಿ ಕೂರಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆರ್ಯನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿಯ ಹಾವ-ಭಾವ ನೋಡಿದರೆ ಸ್ಟಾರ್​ ಪುತ್ರನ ಬಗ್ಗೆ ಅವರು ಸಖತ್​ ಅಭಿಮಾನ ಇಟ್ಟುಕೊಂಡಂತಿದೆ. ಅಂಥ ಟೆನ್ಷನ್​ ವೇಳೆಯಲ್ಲೂ ಆರ್ಯನ್​ ಅವರು ಸೆಲ್ಫಿಗೆ ಪೋಸ್​ ನೀಡಿದ್ದಾರೆ. ಈ ವೈರಲ್​ ಫೋಟೋ ಕಂಡು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

ಅಷ್ಟಕ್ಕೂ ಈಗ ಹುಟ್ಟಿಕೊಂಡಿರುವ ಪ್ರಶ್ನೆ ಏನೆಂದರೆ, ಆರ್ಯನ್​ ಜೊತೆ ಅಭಿಮಾನದ ಸೆಲ್ಫಿ ಕ್ಲಿಕ್ಕಿಸಿಕೊಂಡು ಆ ವ್ಯಕ್ತಿ ಯಾರು? ಎನ್​ಸಿಬಿ ಅಧಿಕಾರಿಗಳ ತಂಡದ ಸದಸ್ಯರೇ ಇರಬಹುದು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ಆದರೆ ಆ ಮಾತನ್ನು ಎನ್​ಸಿಬಿ ತಳ್ಳಿ ಹಾಕಿದೆ. ‘ವೈರಲ್ ಫೋಟೋದಲ್ಲಿ ಆರ್ಯನ್​ ಖಾನ್​ ಜೊತೆ ಇರುವ ವ್ಯಕ್ತಿಯು ಎನ್​ಸಿಬಿ ಅಧಿಕಾರಿ ಅಥವಾ ನೌಕರ ಅಲ್ಲ’ ಎಂದು ಮಾದಕವಸ್ತು ನಿಯಂತ್ರಣ ಮಂಡಳಿಯು ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಆದರೆ ಆ ವ್ಯಕ್ತಿ ಯಾರು ಎಂಬುದಕ್ಕೆ ಎನ್​ಸಿಬಿ ಉತ್ತರ ನೀಡಿಲ್ಲ.

ಡ್ರಗ್​ ಕೇಸ್​ನಲ್ಲಿ ಸಿಲುಕಿರುವ ಆರ್ಯನ್​ ಖಾನ್​ ಅವರನ್ನು ಎನ್​ಸಿಬಿ ಅಧಿಕಾರಿಗಳು ಸೋಮವಾರ (ಅ.4) ಮುಂಬೈ ಕಿಲ್ಲಾ ಕೋರ್ಟ್​ ಎದುರು ಹಾಜರುಪಡಿಸಿದ್ದಾರೆ. ಈ ವೇಳೆ ಆರ್ಯನ್​ ಕಸ್ಟಡಿ ಅವಧಿಯನ್ನು ಅಕ್ಟೋಬರ್​ 13ರವರೆಗೆ ವಿಸ್ತರಿಸುವಂತೆ ಕೋರ್ಟ್​ ಮುಂದೆ ಎನ್​ಸಿಬಿ ಕೋರಿದೆ. ಆದರೆ, ಅಕ್ಟೋಬರ್​ 7ರವರೆಗೆ ಎನ್​ಸಿಬಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ. ಆರ್ಯನ್​ ಜತೆಗೆ ಉಳಿದ ಆರೋಪಿಗಳ ಎನ್​ಸಿಬಿ ಕಸ್ಟಡಿ ಅವಧಿ ಕೂಡ ವಿಸ್ತರಣೆ ಆಗಿದೆ. ಎನ್‌ಸಿಬಿ ಪರ ಎಎಸ್‌ಜಿ ಅನಿಲ್‌ ಸಿಂಗ್‌ ವಾದ ಮಂಡನೆ ಮಾಡಿದರು.

ಇದನ್ನೂ ಓದಿ:

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ