AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

ಡ್ರಗ್ಸ್​ ಪಾರ್ಟಿ ಮೇಲೆ ದಾಳಿ ಮಾಡಿದ ಬಳಿಕ ಆರ್ಯನ್​ ಖಾನ್​ ಅವರನ್ನು ಎಳೆದುಕೊಂಡು ಬಂದು ಎನ್​ಸಿಬಿ ಕಚೇರಿಯಲ್ಲಿ ಕೂರಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆರ್ಯನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?
ಕೆಪಿ ಗೋಸಾವಿ, ಆರ್ಯನ್ ಖಾನ್
TV9 Web
| Edited By: |

Updated on: Oct 05, 2021 | 8:55 AM

Share

ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ರಾತ್ರೋರಾತ್ರಿ ಕುಖ್ಯಾತಿ ಪಡೆದುಕೊಂಡಿದ್ದಾರೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಪಾರ್ಟಿ ಮಾಡುವಾಗ ಅವರು ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೇವ್​ ಪಾರ್ಟಿ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದಾಗ ಅನೇಕರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು. ಆ ಸಂದರ್ಭದಲ್ಲಿ ಆರ್ಯನ್​ ಖಾನ್​ ಜೊತೆ ಕ್ಲಿಕ್ಕಿಸಿದ ಒಂದು ಸೆಲ್ಫಿ ಈಗ ಸಖತ್​ ವೈರಲ್​ ಆಗಿದೆ.

ಆರ್ಯನ್​ ಖಾನ್​ ಅವರನ್ನು ಎಳೆದುಕೊಂಡು ಬಂದು ಎನ್​ಸಿಬಿ ಕಚೇರಿಯಲ್ಲಿ ಕೂರಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಆರ್ಯನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿಯ ಹಾವ-ಭಾವ ನೋಡಿದರೆ ಸ್ಟಾರ್​ ಪುತ್ರನ ಬಗ್ಗೆ ಅವರು ಸಖತ್​ ಅಭಿಮಾನ ಇಟ್ಟುಕೊಂಡಂತಿದೆ. ಅಂಥ ಟೆನ್ಷನ್​ ವೇಳೆಯಲ್ಲೂ ಆರ್ಯನ್​ ಅವರು ಸೆಲ್ಫಿಗೆ ಪೋಸ್​ ನೀಡಿದ್ದಾರೆ. ಈ ವೈರಲ್​ ಫೋಟೋ ಕಂಡು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

ಅಷ್ಟಕ್ಕೂ ಈಗ ಹುಟ್ಟಿಕೊಂಡಿರುವ ಪ್ರಶ್ನೆ ಏನೆಂದರೆ, ಆರ್ಯನ್​ ಜೊತೆ ಅಭಿಮಾನದ ಸೆಲ್ಫಿ ಕ್ಲಿಕ್ಕಿಸಿಕೊಂಡು ಆ ವ್ಯಕ್ತಿ ಯಾರು? ಎನ್​ಸಿಬಿ ಅಧಿಕಾರಿಗಳ ತಂಡದ ಸದಸ್ಯರೇ ಇರಬಹುದು ಎಂದು ಎಲ್ಲರೂ ಊಹಿಸುತ್ತಿದ್ದಾರೆ. ಆದರೆ ಆ ಮಾತನ್ನು ಎನ್​ಸಿಬಿ ತಳ್ಳಿ ಹಾಕಿದೆ. ‘ವೈರಲ್ ಫೋಟೋದಲ್ಲಿ ಆರ್ಯನ್​ ಖಾನ್​ ಜೊತೆ ಇರುವ ವ್ಯಕ್ತಿಯು ಎನ್​ಸಿಬಿ ಅಧಿಕಾರಿ ಅಥವಾ ನೌಕರ ಅಲ್ಲ’ ಎಂದು ಮಾದಕವಸ್ತು ನಿಯಂತ್ರಣ ಮಂಡಳಿಯು ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಆದರೆ ಆ ವ್ಯಕ್ತಿ ಯಾರು ಎಂಬುದಕ್ಕೆ ಎನ್​ಸಿಬಿ ಉತ್ತರ ನೀಡಿಲ್ಲ.

ಡ್ರಗ್​ ಕೇಸ್​ನಲ್ಲಿ ಸಿಲುಕಿರುವ ಆರ್ಯನ್​ ಖಾನ್​ ಅವರನ್ನು ಎನ್​ಸಿಬಿ ಅಧಿಕಾರಿಗಳು ಸೋಮವಾರ (ಅ.4) ಮುಂಬೈ ಕಿಲ್ಲಾ ಕೋರ್ಟ್​ ಎದುರು ಹಾಜರುಪಡಿಸಿದ್ದಾರೆ. ಈ ವೇಳೆ ಆರ್ಯನ್​ ಕಸ್ಟಡಿ ಅವಧಿಯನ್ನು ಅಕ್ಟೋಬರ್​ 13ರವರೆಗೆ ವಿಸ್ತರಿಸುವಂತೆ ಕೋರ್ಟ್​ ಮುಂದೆ ಎನ್​ಸಿಬಿ ಕೋರಿದೆ. ಆದರೆ, ಅಕ್ಟೋಬರ್​ 7ರವರೆಗೆ ಎನ್​ಸಿಬಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ. ಆರ್ಯನ್​ ಜತೆಗೆ ಉಳಿದ ಆರೋಪಿಗಳ ಎನ್​ಸಿಬಿ ಕಸ್ಟಡಿ ಅವಧಿ ಕೂಡ ವಿಸ್ತರಣೆ ಆಗಿದೆ. ಎನ್‌ಸಿಬಿ ಪರ ಎಎಸ್‌ಜಿ ಅನಿಲ್‌ ಸಿಂಗ್‌ ವಾದ ಮಂಡನೆ ಮಾಡಿದರು.

ಇದನ್ನೂ ಓದಿ:

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ