AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಸಿಬಿ ವಿಚಾರಣೆಯಿಂದ ತಪ್ಪಿಸಿಕೊಂಡ ಆರ್ಯನ್​ ಖಾನ್​; ಶಾರುಖ್​ ಮಗ ಕೊಟ್ಟ ಕಾರಣ ಏನು?

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಈ ಬೆನ್ನಲ್ಲೇ, ಪ್ರಕರಣದ ತನಿಖೆಯಿಂದ ಸಮೀರ್​ ವಾಂಖೆಡೆಯನ್ನು ಹೊರಗಿಡಲಾಗಿದೆ.

ಎನ್​ಸಿಬಿ ವಿಚಾರಣೆಯಿಂದ ತಪ್ಪಿಸಿಕೊಂಡ ಆರ್ಯನ್​ ಖಾನ್​; ಶಾರುಖ್​ ಮಗ ಕೊಟ್ಟ ಕಾರಣ ಏನು?
ಆರ್ಯನ್ ಖಾನ್
TV9 Web
| Edited By: |

Updated on:Nov 07, 2021 | 9:44 PM

Share

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದ ಆರ್ಯನ್​ ಖಾನ್​ ಅವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೆ, ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿತ್ತು. ಆದರೆ, ಈಗ ಆರ್ಯನ್​ ಖಾನ್​ ಇಂದು (ನವೆಂಬರ್​​ 7) ವಿಚಾರಣೆಗೆ ಹಾಜರಾಗಿಲ್ಲ. ತಾವು ವಿಚಾರಣೆಗೆ ಏಕೆ ಹಾಜರಾಗುತ್ತಿಲ್ಲ ಎಂಬುದಕ್ಕೆ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳಿಗೆ ಕಾರಣವನ್ನೂ ನೀಡಿದ್ದಾರೆ.

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಈ ಬೆನ್ನಲ್ಲೇ, ಪ್ರಕರಣದ ತನಿಖೆಯಿಂದ ಸಮೀರ್​ ವಾಂಖೆಡೆಯನ್ನು ಹೊರಗಿಡಲಾಗಿದೆ. ಈ ಪ್ರಕರಣದ ಬಗ್ಗೆ ಕೇಂದ್ರದ ಉನ್ನತ ತಂಡ ತನಿಖೆ ನಡೆಸಲು ಆರಂಭಿಸಿದೆ. ಡಿಡಿಜಿ ಎನ್​ಸಿಬಿ ಸಂಜಯ್​ ಸಿಂಗ್​ ಅವರು ಆರ್ಯನ್​ ಖಾನ್​ಗೆ ಬುಲಾವ್​ ನೀಡಿದ್ದರು. ಆದರೆ, ಆರ್ಯನ್​ಗೆ ಕೊವಿಡ್​ ಲಕ್ಷಣ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್​ ಲಕ್ಷಣ ಕಾಣಿಸಿಕೊಂಡಿದ್ದರಿಂದ ಅದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ, ವಿಚಾರಣೆಗೆ ಬೇರೊಂದು ದಿನಾಂಕ ನೀಡುವಂತೆ ಅವರು ಕೋರಿದ್ದಾರೆ. ಇದಕ್ಕೆ ಎನ್​ಸಿಬಿ ಅಧಿಕಾರಿಗಳು ಸಮ್ಮತಿ ನೀಡಿದ್ದಾರೆ. ಅವರ ಪರಿಸ್ಥಿತಿ ನೋಡಿಕೊಂಡು ಮುಂದಿನ ವಿಚಾರಣೆ ದಿನಾಂಕ ನಿಗದಿ  ಮಾಡಲು ನಿರ್ಧರಿಸಲಾಗಿದೆ.

ಆರ್ಯನ್​ ಖಾನ್​ ಭಾಗಿಯಾಗಿದ್ದರು ಎನ್ನಲಾದ ರೇವ್​ ಪಾರ್ಟಿ ಮೇಲೆ ದಾಳಿ ನಡೆದ ದಿನ ಎನ್​ಸಿಬಿ ಅಧಿಕಾರಿಗಳ ಜೊತೆ ಖಾಸಗಿ ಡಿಟೆಕ್ಟೀವ್​ ಕಿರಣ್​ ಗೋಸಾವಿ ಮತ್ತು ಅವರ ಬಾಡಿಗಾರ್ಡ್​ ಪ್ರಭಾಕರ್​ ಸೈಲ್​ ಕೂಡ ಹಾಜರಿದ್ದರು. ಇವರಿಬ್ಬರು ಪ್ರಮುಖ ಸಾಕ್ಷಿಗಳಾಗಿದ್ದಾರೆ. ಆದರೆ ದಾಳಿ ಬಳಿಕ ಕಿರಣ್​ ಗೋಸಾವಿ ನಾಪತ್ತೆ ಆಗಿದ್ದರು. ಈಗ ಅವರು ಪುಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡರು ಮತ್ತು ಬಹುಕೋಟಿ ಡೀಲ್​ ಬಗ್ಗೆ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ ಎಂದು ಪ್ರಭಾಕರ್​ ಸೈಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅದರ ಜೊತೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಕೂಡ ಸಮೀರ್​ ವಾಂಖೆಡೆ ವಿರುದ್ಧ ಅನೇಕ ಆರೋಪಗಳನ್ನು ಹೊರಿಸಿದ್ದಾರೆ. ಇವುಗಳ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರವು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ. ಇತ್ತೀಚೆಗೆ ತನಿಖಾ ನೇತೃತ್ವವೂ ಸಮೀರ್​ ಅವರ ಕೈತಪ್ಪಿತ್ತು.

ಇದನ್ನೂ ಓದಿ: ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

Published On - 9:38 pm, Sun, 7 November 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​