AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಸಿಬಿ ವಿಚಾರಣೆಯಿಂದ ತಪ್ಪಿಸಿಕೊಂಡ ಆರ್ಯನ್​ ಖಾನ್​; ಶಾರುಖ್​ ಮಗ ಕೊಟ್ಟ ಕಾರಣ ಏನು?

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಈ ಬೆನ್ನಲ್ಲೇ, ಪ್ರಕರಣದ ತನಿಖೆಯಿಂದ ಸಮೀರ್​ ವಾಂಖೆಡೆಯನ್ನು ಹೊರಗಿಡಲಾಗಿದೆ.

ಎನ್​ಸಿಬಿ ವಿಚಾರಣೆಯಿಂದ ತಪ್ಪಿಸಿಕೊಂಡ ಆರ್ಯನ್​ ಖಾನ್​; ಶಾರುಖ್​ ಮಗ ಕೊಟ್ಟ ಕಾರಣ ಏನು?
ಆರ್ಯನ್ ಖಾನ್
TV9 Web
| Edited By: |

Updated on:Nov 07, 2021 | 9:44 PM

Share

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದ ಆರ್ಯನ್​ ಖಾನ್​ ಅವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೆ, ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿತ್ತು. ಆದರೆ, ಈಗ ಆರ್ಯನ್​ ಖಾನ್​ ಇಂದು (ನವೆಂಬರ್​​ 7) ವಿಚಾರಣೆಗೆ ಹಾಜರಾಗಿಲ್ಲ. ತಾವು ವಿಚಾರಣೆಗೆ ಏಕೆ ಹಾಜರಾಗುತ್ತಿಲ್ಲ ಎಂಬುದಕ್ಕೆ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳಿಗೆ ಕಾರಣವನ್ನೂ ನೀಡಿದ್ದಾರೆ.

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಈ ಬೆನ್ನಲ್ಲೇ, ಪ್ರಕರಣದ ತನಿಖೆಯಿಂದ ಸಮೀರ್​ ವಾಂಖೆಡೆಯನ್ನು ಹೊರಗಿಡಲಾಗಿದೆ. ಈ ಪ್ರಕರಣದ ಬಗ್ಗೆ ಕೇಂದ್ರದ ಉನ್ನತ ತಂಡ ತನಿಖೆ ನಡೆಸಲು ಆರಂಭಿಸಿದೆ. ಡಿಡಿಜಿ ಎನ್​ಸಿಬಿ ಸಂಜಯ್​ ಸಿಂಗ್​ ಅವರು ಆರ್ಯನ್​ ಖಾನ್​ಗೆ ಬುಲಾವ್​ ನೀಡಿದ್ದರು. ಆದರೆ, ಆರ್ಯನ್​ಗೆ ಕೊವಿಡ್​ ಲಕ್ಷಣ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್​ ಲಕ್ಷಣ ಕಾಣಿಸಿಕೊಂಡಿದ್ದರಿಂದ ಅದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ, ವಿಚಾರಣೆಗೆ ಬೇರೊಂದು ದಿನಾಂಕ ನೀಡುವಂತೆ ಅವರು ಕೋರಿದ್ದಾರೆ. ಇದಕ್ಕೆ ಎನ್​ಸಿಬಿ ಅಧಿಕಾರಿಗಳು ಸಮ್ಮತಿ ನೀಡಿದ್ದಾರೆ. ಅವರ ಪರಿಸ್ಥಿತಿ ನೋಡಿಕೊಂಡು ಮುಂದಿನ ವಿಚಾರಣೆ ದಿನಾಂಕ ನಿಗದಿ  ಮಾಡಲು ನಿರ್ಧರಿಸಲಾಗಿದೆ.

ಆರ್ಯನ್​ ಖಾನ್​ ಭಾಗಿಯಾಗಿದ್ದರು ಎನ್ನಲಾದ ರೇವ್​ ಪಾರ್ಟಿ ಮೇಲೆ ದಾಳಿ ನಡೆದ ದಿನ ಎನ್​ಸಿಬಿ ಅಧಿಕಾರಿಗಳ ಜೊತೆ ಖಾಸಗಿ ಡಿಟೆಕ್ಟೀವ್​ ಕಿರಣ್​ ಗೋಸಾವಿ ಮತ್ತು ಅವರ ಬಾಡಿಗಾರ್ಡ್​ ಪ್ರಭಾಕರ್​ ಸೈಲ್​ ಕೂಡ ಹಾಜರಿದ್ದರು. ಇವರಿಬ್ಬರು ಪ್ರಮುಖ ಸಾಕ್ಷಿಗಳಾಗಿದ್ದಾರೆ. ಆದರೆ ದಾಳಿ ಬಳಿಕ ಕಿರಣ್​ ಗೋಸಾವಿ ನಾಪತ್ತೆ ಆಗಿದ್ದರು. ಈಗ ಅವರು ಪುಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡರು ಮತ್ತು ಬಹುಕೋಟಿ ಡೀಲ್​ ಬಗ್ಗೆ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ ಎಂದು ಪ್ರಭಾಕರ್​ ಸೈಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅದರ ಜೊತೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಕೂಡ ಸಮೀರ್​ ವಾಂಖೆಡೆ ವಿರುದ್ಧ ಅನೇಕ ಆರೋಪಗಳನ್ನು ಹೊರಿಸಿದ್ದಾರೆ. ಇವುಗಳ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರವು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ. ಇತ್ತೀಚೆಗೆ ತನಿಖಾ ನೇತೃತ್ವವೂ ಸಮೀರ್​ ಅವರ ಕೈತಪ್ಪಿತ್ತು.

ಇದನ್ನೂ ಓದಿ: ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

Published On - 9:38 pm, Sun, 7 November 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್