AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್​​ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್​​ನಿಂದ ಮಹತ್ವದ ಆದೇಶ

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ.

ಆರ್ಯನ್ ಖಾನ್​​ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್​​ನಿಂದ ಮಹತ್ವದ ಆದೇಶ
ಆರ್ಯನ್ ಖಾನ್
TV9 Web
| Edited By: |

Updated on:Oct 03, 2021 | 8:32 PM

Share

ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಶಾರುಖ್​ ಖಾನ್​ ಮಗ ಆರ್ಯನ್​ಗೆ ಸಂಕಷ್ಟ ಹೆಚ್ಚುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎನ್​ಸಿಬಿ ಅಧಿಕಾರಿಗಳು ಆರ್ಯನ್​ ಅವರನ್ನು ಕೋರ್ಟ್​ ಮುಂದೆ ಹಾಜರು ಪಡಿಸಿದ್ದಾರೆ. ಈ ವೇಳೆ​ ಆರ್ಯನ್​ ಸೇರಿ ಮೂವರನ್ನು ಸೋಮವಾರದವರೆಗೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ ಬಳಿ ಎನ್​ಸಿಬಿ ಮನವಿ ಮಾಡಿಕೊಂಡಿತ್ತು. ಇದಕ್ಕೆ ಕೋರ್ಟ್​ ಸಮ್ಮತಿಸಿದೆ. 

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ. ಅಲ್ಲಿಂದ ಅವರನ್ನು ಎನ್​ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್​ಸಿಬಿ ಕಚೇರಿ ಒಳಗೆ ಆರ್ಯನ್​ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ನಂತರ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇದಾದ ನಂತರ ಆರ್ಯನ್​ ಅವರನ್ನು ಕೋರ್ಟ್​ಗೆ ಹಾಜರು ಪಡಿಸಲಾಗಿದೆ.

‘ಆರ್ಯನ್​ಗೆ ಪಾರ್ಟಿ ಅರೇಂಜ್​ ಮಾಡಿದವರು ಆಹ್ವಾನ ನೀಡಿದ್ದರು. ಅದಕ್ಕಾಗಿ ತೆರಳಿದ್ದರು. ಇದಕ್ಕೂ ಆರ್ಯನ್​ಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ, ಅವರನ್ನು ಇದರಲ್ಲಿ ಸಿಲುಕಿಸಬಾರದು. ಅವರನ್ನು ಈಗಲೇ ಬಿಡಬೇಕು’ ಎಂದು ಆರ್ಯನ್​ ಪರ ವಕೀಲರು ಕೋರಿದರು. ಇದಕ್ಕೆ ಎನ್​ಸಿಬಿ ಅಧಿಕಾರಿಗಳು ಒಪ್ಪಲಿಲ್ಲ. ಅವರನ್ನು ಎರಡು ದಿನ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ ಬಳಿ ಮನವಿ ಮಾಡಿಕೊಂಡರು. ಆದರೆ, ನ್ಯಾಯಾಧೀಶರು, ಒಂದು ದಿನ ಮಾತ್ರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ.

ಇದನ್ನೂ ಓದಿ: ಆರ್ಯನ್ ಖಾನ್​​ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್​​ನಿಂದ ಮಹತ್ವದ ಆದೇಶ

Published On - 8:12 pm, Sun, 3 October 21

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ