AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್​​ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್​​ನಿಂದ ಮಹತ್ವದ ಆದೇಶ

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ.

ಆರ್ಯನ್ ಖಾನ್​​ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್​​ನಿಂದ ಮಹತ್ವದ ಆದೇಶ
ಆರ್ಯನ್ ಖಾನ್
TV9 Web
| Edited By: |

Updated on:Oct 03, 2021 | 8:32 PM

Share

ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಶಾರುಖ್​ ಖಾನ್​ ಮಗ ಆರ್ಯನ್​ಗೆ ಸಂಕಷ್ಟ ಹೆಚ್ಚುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎನ್​ಸಿಬಿ ಅಧಿಕಾರಿಗಳು ಆರ್ಯನ್​ ಅವರನ್ನು ಕೋರ್ಟ್​ ಮುಂದೆ ಹಾಜರು ಪಡಿಸಿದ್ದಾರೆ. ಈ ವೇಳೆ​ ಆರ್ಯನ್​ ಸೇರಿ ಮೂವರನ್ನು ಸೋಮವಾರದವರೆಗೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ ಬಳಿ ಎನ್​ಸಿಬಿ ಮನವಿ ಮಾಡಿಕೊಂಡಿತ್ತು. ಇದಕ್ಕೆ ಕೋರ್ಟ್​ ಸಮ್ಮತಿಸಿದೆ. 

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ. ಅಲ್ಲಿಂದ ಅವರನ್ನು ಎನ್​ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್​ಸಿಬಿ ಕಚೇರಿ ಒಳಗೆ ಆರ್ಯನ್​ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ನಂತರ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇದಾದ ನಂತರ ಆರ್ಯನ್​ ಅವರನ್ನು ಕೋರ್ಟ್​ಗೆ ಹಾಜರು ಪಡಿಸಲಾಗಿದೆ.

‘ಆರ್ಯನ್​ಗೆ ಪಾರ್ಟಿ ಅರೇಂಜ್​ ಮಾಡಿದವರು ಆಹ್ವಾನ ನೀಡಿದ್ದರು. ಅದಕ್ಕಾಗಿ ತೆರಳಿದ್ದರು. ಇದಕ್ಕೂ ಆರ್ಯನ್​ಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ, ಅವರನ್ನು ಇದರಲ್ಲಿ ಸಿಲುಕಿಸಬಾರದು. ಅವರನ್ನು ಈಗಲೇ ಬಿಡಬೇಕು’ ಎಂದು ಆರ್ಯನ್​ ಪರ ವಕೀಲರು ಕೋರಿದರು. ಇದಕ್ಕೆ ಎನ್​ಸಿಬಿ ಅಧಿಕಾರಿಗಳು ಒಪ್ಪಲಿಲ್ಲ. ಅವರನ್ನು ಎರಡು ದಿನ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ ಬಳಿ ಮನವಿ ಮಾಡಿಕೊಂಡರು. ಆದರೆ, ನ್ಯಾಯಾಧೀಶರು, ಒಂದು ದಿನ ಮಾತ್ರ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ.

ಇದನ್ನೂ ಓದಿ: ಆರ್ಯನ್ ಖಾನ್​​ಗೆ ಹೆಚ್ಚಿದ ಸಂಕಷ್ಟ; ಮುಂಬೈ ಕೋರ್ಟ್​​ನಿಂದ ಮಹತ್ವದ ಆದೇಶ

Published On - 8:12 pm, Sun, 3 October 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!