AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬ್ರ್ಯಾಂಡ್ ಪರಿಚಯಿಸಿದ ಆರ್ಯನ್ ಖಾನ್; ಜಾಹೀರಾತಿನಲ್ಲಿ ಕಾಣಿಸಿಕೊಂಡ ಶಾರುಖ್  

ಸೆಲೆಬ್ರಿಟಿ ಮಕ್ಕಳು ಸಾಮಾನ್ಯವಾಗಿ ಹೀರೋ ಆಗೋಕೆ ಬಯಸುತ್ತಾರೆ. ಆದರೆ, ಆರ್ಯನ್ ಖಾನ್ ನಿರ್ದೇಶನದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ಹೊಸ ಬ್ರ್ಯಾಂಡ್ ಪರಿಚಯಿಸಿದ ಆರ್ಯನ್ ಖಾನ್; ಜಾಹೀರಾತಿನಲ್ಲಿ ಕಾಣಿಸಿಕೊಂಡ ಶಾರುಖ್  
ಶಾರುಖ್​-ಆರ್ಯನ್
ರಾಜೇಶ್ ದುಗ್ಗುಮನೆ
|

Updated on:Apr 25, 2023 | 7:20 AM

Share

ಶಾರುಖ್ ಖಾನ್​​ಗೆ (Shah Rukh Khan) ಕುಟುಂಬದ ಮೇಲೆ ಎಲ್ಲಿಲ್ಲದ ಪ್ರೀತಿ. ಅವರು ಈ ವಿಚಾರವನ್ನು ಈ ಮೊದಲು ಅನೇಕ ಬಾರಿ ಹೇಳಿಕೊಂಡಿದ್ದರು. ಶೂಟಿಂಗ್ ಇಲ್ಲದ ಸಂದರ್ಭದಲ್ಲಿ ಅವರು ಮನೆಯಲ್ಲೇ ಇರುತ್ತಾರೆ. ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯೋಕೆ ಅವರು ಇಷ್ಟಪಡುತ್ತಾರೆ. ಶಾರುಖ್ ಖಾನ್ ಮಗ ಆರ್ಯನ್ ಖಾನ್ (Aryan Khan) ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲ, ತಮ್ಮದೇ ಬಟ್ಟೆ ಬ್ರ್ಯಾಂಡ್ ಪರಿಚಯಿಸುತ್ತಿದ್ದಾರೆ. ಇದಕ್ಕೆ ಪ್ರಚಾರ ರಾಯಭಾರಿಯಾಗಿ ಬಂದಿರೋದು ಶಾರುಖ್ ಖಾನ್ ಅನ್ನೋದು ವಿಶೇಷ. ಮಗನ ಜಾಹೀರಾತಿದ್ದರಿಂದ ಅವರು ಯಾವುದೇ ಸಂಭಾವನೆ ಪಡೆದಿಲ್ಲ.

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಇದರಿಂದ ಅವರು ಜೈಲು ಕೂಡ ಸೇರಿದರು. ಈ ಸಂದರ್ಭದಲ್ಲಿ ಶಾರುಖ್ ಖಾನ್ ಹೆಚ್ಚು ಚಿಂತೆಗೆ ಒಳಗಾದರು. ಬಳಿಕ ಆರ್ಯನ್ ಖಾನ್ ತಪ್ಪಿಲ್ಲ ಅನ್ನೋದು ಸಾಬೀತಾಯಿತು. ಅವರು ಕ್ಲೀನ್​ಚಿಟ್ ಪಡೆದು ಹೊರ ಬಂದರು. ಸೆಲೆಬ್ರಿಟಿ ಮಕ್ಕಳು ಸಾಮಾನ್ಯವಾಗಿ ಹೀರೋ ಆಗೋಕೆ ಬಯಸುತ್ತಾರೆ. ಆದರೆ, ಆರ್ಯನ್ ಖಾನ್ ನಿರ್ದೇಶನದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

ಆರ್ಯನ್ ಖಾನ್​ ಅವರ ಮೊದಲ ವೆಬ್​ ಸೀರಿಸ್​ನ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಇದರ ಜೊತೆ ಬಟ್ಟೆ ಬಿಸ್ನೆಸ್​ಗೆ ಇಳಿದಿದ್ದಾರೆ. Dyavolx ಹೆಸರಿನ ಬಟ್ಟೆ ಬ್ರ್ಯಾಂಡ್ ಅನ್ನು ಅವರು ಹೊರ ತರುತ್ತಿದ್ದಾರೆ. ಇದರ ಜಾಹೀರಾತಿನ ತುಣುಕೊಂದು ಬಿಡುಗಡೆ ಆಗಿದೆ. ಇದರಲ್ಲಿ ಶಾರುಖ್ ಖಾನ್ ಕಾಣಿಸಿಕೊಂಡಿದ್ದಾರೆ. ಈ ಜಾಹೀರಾತನ್ನು ಆರ್ಯನ್ ಖಾನ್ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಅವರು ನನ್ನ ಕೈ ಕತ್ತರಿಸುತ್ತಾರೆ ಎನ್ನುವ ಭಯ ಈಗಲೂ ಇದೆ‘; ಶಾರುಖ್ ಖಾನ್​ಗೆ ಇದೆ ಫೋಬಿಯಾ

ಅಂದಹಾಗೆ, ಪೂರ್ತಿ ಜಾಹೀರಾತನ್ನು ಆರ್ಯನ್ ಖಾನ್ ರಿಲೀಸ್ ಮಾಡಿಲ್ಲ. ಇಂದು (ಏಪ್ರಿಲ್ 25) ಪೂರ್ತಿ ಜಾಹೀರಾತು ರಿಲೀಸ್ ಆಗಲಿದೆ. ಆರ್ಯನ್ ಖಾನ್ ಅವರು ಕುರ್ಚಿ ಮೇಲೆ ಕುಳಿತು ಮಾನಿಟರ್​ನ ಚೆಕ್ ಮಾಡುತ್ತಿರುವ ಫೋಟೋನ ಈ ಮೊದಲು ಹಂಚಿಕೊಳ್ಳಲಾಗಿತ್ತು. ಸದ್ಯ ಯಾವುದೇ ಅಂಗಡಿ ತೆರೆಯುವ ಆಲೋಚನೆ ಆರ್ಯನ್ ಖಾನ್​ಗೆ ಇಲ್ಲ. ಆನ್​ಲೈನ್ ಮೂಲಕ ಮಾರಾಟ ಮಾಡಲು ಅವರು ನಿರ್ಧರಿಸಿದ್ದಾರೆ. ಈ ಮೊದಲು ಅನೇಕ ಸೆಲೆಬ್ರಿಟಿಗಳು ತಮ್ಮ ಬಟ್ಟೆ ಬ್ರ್ಯಾಂಡ್ ಪರಿಚಯಿಸಿದ್ದಾರೆ. ಈಗ ಈ ಸಾಲಿಗೆ ಆರ್ಯನ್ ಖಾನ್ ಕೂಡ ಸೇರ್ಪಡೆ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Tue, 25 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ