AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​

ಬಾಲಿವುಡ್​ ಮಂದಿಗೆ ಸಂಬಂಧಿಸಿದಂತೆ ಏನೇ ಘಟನೆ ನಡೆದರೂ ಅದಕ್ಕೆ ಕಮಾಲ್​ ಆರ್​. ಖಾನ್​ ಪ್ರತಿಕ್ರಿಯೆ ನೀಡುತ್ತಾರೆ. ಈ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ. ಈಗ ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​
ಆರ್ಯನ್ ಖಾನ್, ಕಮಾಲ್ ಆರ್. ಖಾನ್
TV9 Web
| Edited By: |

Updated on: Oct 05, 2021 | 9:38 AM

Share

ಡ್ರಗ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್ ಖಾನ್​ ಅವರನ್ನು ಸದ್ಯ ಎನ್​ಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಮಗನಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಬಾಲಿವುಡ್​ನ ಹೈ-ಪ್ರೊಫೈಲ್​ ಕೇಸ್​ಗಳನ್ನು ನಿಭಾಯಿಸಿ ಅನುಭವ ಹೊಂದಿರುವ ಖ್ಯಾತ ಕ್ರಿಮಿನಲ್​ ಲಾಯರ್​ ಸತೀಶ್​ ಮಾನೆಶಿಂಧೆ ಅವರ ಕೈಗೆ ಆರ್ಯನ್​ ಕೇಸ್​ ನೀಡಲಾಗಿದೆ. ಆರ್ಯನ್​ ವಿರುದ್ಧ ಹಲವು ಸಾಕ್ಷಿಗಳು ಸಿಕ್ಕಿವೆ ಎಂದು ಎನ್​ಸಿಬಿ ಮೂಲಗಳು ಹೇಳುತ್ತಿವೆ. ಇನ್ನೂ ವಿಚಾರಣೆ ನಡೆಯುತ್ತಿದೆ. ಅಷ್ಟರಲ್ಲಾಗಲೇ ಈ ಕೇಸ್​ನ ಅಂತಿಮ ಘಟ್ಟದ ಬಗ್ಗೆ ನಟ, ನಿರ್ದೇಶಕ, ವಿಮರ್ಶಕ ಕಮಾಲ್​ ಆರ್​. ಖಾನ್​ ಭವಿಷ್ಯ ನಡಿದಿದ್ದಾರೆ.

ಬಾಲಿವುಡ್​ ಮಂದಿಗೆ ಸಂಬಂಧಿಸಿದಂತೆ ಏನೇ ಘಟನೆ ನಡೆದರೂ ಅದಕ್ಕೆ ಕಮಾಲ್​ ಆರ್​. ಖಾನ್​ ಪ್ರತಿಕ್ರಿಯೆ ನೀಡುತ್ತಾರೆ. ಈ ಮೂಲಕ ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಇದರಿಂದ ಪದೇಪದೇ ವಿವಾದ ಮೈಮೇಲೆ ಎಳೆದುಕೊಳ್ಳುತ್ತಾರೆ. ಈಗ ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಸ್ಟಾರ್​ ಪುತ್ರ ಇಂಥ ಎಡವಟ್ಟಿನ ಕೆಲಸ ಮಾಡಿ ಸಿಕ್ಕಿ ಬಿದ್ದಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಅಲ್ಲದೇ, ಈ ಕೇಸ್​ನಲ್ಲಿ ಆರ್ಯನ್​ಗೆ ಶಿಕ್ಷೆ ಆಗುವುದಿಲ್ಲ ಎಂದು ಕಮಾಲ್​ ಆರ್​. ಖಾನ್​ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ.

‘ಈ ಹಿಂದೆ ಬಾಲಿವುಡ್​ ನಟ ಫರ್ದೀನ್​ ಖಾನ್​ ಕೂಡ ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದರು. ಆದರೆ ಅವರಿಗೆ ಶಿಕ್ಷೆ ಆಗಲಿಲ್ಲ. ಒಂದಷ್ಟು ದಿನ ಜೈಲಿನಲ್ಲಿ ಇದ್ದರು. ಪತ್ತೆಯಾದ ಡ್ರಗ್ಸ್​ನ ಪ್ರಮಾಣ ಆ ವೇಳೆಗಾಗಲೇ ಕಡಿಮೆ ಆಗಿಬಿಟ್ಟಿತ್ತು. ಅಷ್ಟು ಪ್ರಮಾಣದ ಮಾದಕ ವಸ್ತುವನ್ನು ಸಾಕ್ಷಿಯಾಗಿ ಇಟ್ಟುಕೊಂಡು ಶಿಕ್ಷೆ ನೀಡುವುದು ಕೂಡ ಕಷ್ಟವಾಯಿತು. ಪ್ರಕರಣ ಕೋರ್ಟ್​ಗೆ ಹೋದಾಗ ನ್ಯಾಯಾಧೀಶರ ಮುಂದೆ ಫರ್ದೀನ್​ ಖಾನ್​ ಕ್ಷಮೆ ಕೇಳಿದರು. ಇನ್ಮುಂದೆ ಇಂಥ ಕೆಲಸ ಮಾಡುವುದಿಲ್ಲ ಅಂತ ಹೇಳಿ ಬಚಾವ್​ ಆದರು. ಕೇಸ್​ ಮುಕ್ತಾಯ ಆಯಿತು. ಆರ್ಯನ್​ ಖಾನ್​ ವಿಚಾರದಲ್ಲೂ ಹೀಗೆಯೇ ಆಗಲಿದೆ’ ಎಂದು ಕಮಾಲ್​ ಆರ್. ಖಾನ್​ ಹೇಳಿದ್ದಾರೆ.

ಇದನ್ನೂ ಓದಿ:

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ