AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​

ಬಾಲಿವುಡ್​ ಮಂದಿಗೆ ಸಂಬಂಧಿಸಿದಂತೆ ಏನೇ ಘಟನೆ ನಡೆದರೂ ಅದಕ್ಕೆ ಕಮಾಲ್​ ಆರ್​. ಖಾನ್​ ಪ್ರತಿಕ್ರಿಯೆ ನೀಡುತ್ತಾರೆ. ಈ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ. ಈಗ ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​
ಆರ್ಯನ್ ಖಾನ್, ಕಮಾಲ್ ಆರ್. ಖಾನ್
TV9 Web
| Edited By: |

Updated on: Oct 05, 2021 | 9:38 AM

Share

ಡ್ರಗ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್ ಖಾನ್​ ಅವರನ್ನು ಸದ್ಯ ಎನ್​ಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಮಗನಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಬಾಲಿವುಡ್​ನ ಹೈ-ಪ್ರೊಫೈಲ್​ ಕೇಸ್​ಗಳನ್ನು ನಿಭಾಯಿಸಿ ಅನುಭವ ಹೊಂದಿರುವ ಖ್ಯಾತ ಕ್ರಿಮಿನಲ್​ ಲಾಯರ್​ ಸತೀಶ್​ ಮಾನೆಶಿಂಧೆ ಅವರ ಕೈಗೆ ಆರ್ಯನ್​ ಕೇಸ್​ ನೀಡಲಾಗಿದೆ. ಆರ್ಯನ್​ ವಿರುದ್ಧ ಹಲವು ಸಾಕ್ಷಿಗಳು ಸಿಕ್ಕಿವೆ ಎಂದು ಎನ್​ಸಿಬಿ ಮೂಲಗಳು ಹೇಳುತ್ತಿವೆ. ಇನ್ನೂ ವಿಚಾರಣೆ ನಡೆಯುತ್ತಿದೆ. ಅಷ್ಟರಲ್ಲಾಗಲೇ ಈ ಕೇಸ್​ನ ಅಂತಿಮ ಘಟ್ಟದ ಬಗ್ಗೆ ನಟ, ನಿರ್ದೇಶಕ, ವಿಮರ್ಶಕ ಕಮಾಲ್​ ಆರ್​. ಖಾನ್​ ಭವಿಷ್ಯ ನಡಿದಿದ್ದಾರೆ.

ಬಾಲಿವುಡ್​ ಮಂದಿಗೆ ಸಂಬಂಧಿಸಿದಂತೆ ಏನೇ ಘಟನೆ ನಡೆದರೂ ಅದಕ್ಕೆ ಕಮಾಲ್​ ಆರ್​. ಖಾನ್​ ಪ್ರತಿಕ್ರಿಯೆ ನೀಡುತ್ತಾರೆ. ಈ ಮೂಲಕ ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಇದರಿಂದ ಪದೇಪದೇ ವಿವಾದ ಮೈಮೇಲೆ ಎಳೆದುಕೊಳ್ಳುತ್ತಾರೆ. ಈಗ ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಸ್ಟಾರ್​ ಪುತ್ರ ಇಂಥ ಎಡವಟ್ಟಿನ ಕೆಲಸ ಮಾಡಿ ಸಿಕ್ಕಿ ಬಿದ್ದಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಅಲ್ಲದೇ, ಈ ಕೇಸ್​ನಲ್ಲಿ ಆರ್ಯನ್​ಗೆ ಶಿಕ್ಷೆ ಆಗುವುದಿಲ್ಲ ಎಂದು ಕಮಾಲ್​ ಆರ್​. ಖಾನ್​ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ.

‘ಈ ಹಿಂದೆ ಬಾಲಿವುಡ್​ ನಟ ಫರ್ದೀನ್​ ಖಾನ್​ ಕೂಡ ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದರು. ಆದರೆ ಅವರಿಗೆ ಶಿಕ್ಷೆ ಆಗಲಿಲ್ಲ. ಒಂದಷ್ಟು ದಿನ ಜೈಲಿನಲ್ಲಿ ಇದ್ದರು. ಪತ್ತೆಯಾದ ಡ್ರಗ್ಸ್​ನ ಪ್ರಮಾಣ ಆ ವೇಳೆಗಾಗಲೇ ಕಡಿಮೆ ಆಗಿಬಿಟ್ಟಿತ್ತು. ಅಷ್ಟು ಪ್ರಮಾಣದ ಮಾದಕ ವಸ್ತುವನ್ನು ಸಾಕ್ಷಿಯಾಗಿ ಇಟ್ಟುಕೊಂಡು ಶಿಕ್ಷೆ ನೀಡುವುದು ಕೂಡ ಕಷ್ಟವಾಯಿತು. ಪ್ರಕರಣ ಕೋರ್ಟ್​ಗೆ ಹೋದಾಗ ನ್ಯಾಯಾಧೀಶರ ಮುಂದೆ ಫರ್ದೀನ್​ ಖಾನ್​ ಕ್ಷಮೆ ಕೇಳಿದರು. ಇನ್ಮುಂದೆ ಇಂಥ ಕೆಲಸ ಮಾಡುವುದಿಲ್ಲ ಅಂತ ಹೇಳಿ ಬಚಾವ್​ ಆದರು. ಕೇಸ್​ ಮುಕ್ತಾಯ ಆಯಿತು. ಆರ್ಯನ್​ ಖಾನ್​ ವಿಚಾರದಲ್ಲೂ ಹೀಗೆಯೇ ಆಗಲಿದೆ’ ಎಂದು ಕಮಾಲ್​ ಆರ್. ಖಾನ್​ ಹೇಳಿದ್ದಾರೆ.

ಇದನ್ನೂ ಓದಿ:

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ