‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​

ಬಾಲಿವುಡ್​ ಮಂದಿಗೆ ಸಂಬಂಧಿಸಿದಂತೆ ಏನೇ ಘಟನೆ ನಡೆದರೂ ಅದಕ್ಕೆ ಕಮಾಲ್​ ಆರ್​. ಖಾನ್​ ಪ್ರತಿಕ್ರಿಯೆ ನೀಡುತ್ತಾರೆ. ಈ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ. ಈಗ ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​
ಆರ್ಯನ್ ಖಾನ್, ಕಮಾಲ್ ಆರ್. ಖಾನ್
Follow us
| Updated By: ಮದನ್​ ಕುಮಾರ್​

Updated on: Oct 05, 2021 | 9:38 AM

ಡ್ರಗ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್ ಖಾನ್​ ಅವರನ್ನು ಸದ್ಯ ಎನ್​ಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಮಗನಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಬಾಲಿವುಡ್​ನ ಹೈ-ಪ್ರೊಫೈಲ್​ ಕೇಸ್​ಗಳನ್ನು ನಿಭಾಯಿಸಿ ಅನುಭವ ಹೊಂದಿರುವ ಖ್ಯಾತ ಕ್ರಿಮಿನಲ್​ ಲಾಯರ್​ ಸತೀಶ್​ ಮಾನೆಶಿಂಧೆ ಅವರ ಕೈಗೆ ಆರ್ಯನ್​ ಕೇಸ್​ ನೀಡಲಾಗಿದೆ. ಆರ್ಯನ್​ ವಿರುದ್ಧ ಹಲವು ಸಾಕ್ಷಿಗಳು ಸಿಕ್ಕಿವೆ ಎಂದು ಎನ್​ಸಿಬಿ ಮೂಲಗಳು ಹೇಳುತ್ತಿವೆ. ಇನ್ನೂ ವಿಚಾರಣೆ ನಡೆಯುತ್ತಿದೆ. ಅಷ್ಟರಲ್ಲಾಗಲೇ ಈ ಕೇಸ್​ನ ಅಂತಿಮ ಘಟ್ಟದ ಬಗ್ಗೆ ನಟ, ನಿರ್ದೇಶಕ, ವಿಮರ್ಶಕ ಕಮಾಲ್​ ಆರ್​. ಖಾನ್​ ಭವಿಷ್ಯ ನಡಿದಿದ್ದಾರೆ.

ಬಾಲಿವುಡ್​ ಮಂದಿಗೆ ಸಂಬಂಧಿಸಿದಂತೆ ಏನೇ ಘಟನೆ ನಡೆದರೂ ಅದಕ್ಕೆ ಕಮಾಲ್​ ಆರ್​. ಖಾನ್​ ಪ್ರತಿಕ್ರಿಯೆ ನೀಡುತ್ತಾರೆ. ಈ ಮೂಲಕ ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಇದರಿಂದ ಪದೇಪದೇ ವಿವಾದ ಮೈಮೇಲೆ ಎಳೆದುಕೊಳ್ಳುತ್ತಾರೆ. ಈಗ ಅವರು ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಸ್ಟಾರ್​ ಪುತ್ರ ಇಂಥ ಎಡವಟ್ಟಿನ ಕೆಲಸ ಮಾಡಿ ಸಿಕ್ಕಿ ಬಿದ್ದಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಅಲ್ಲದೇ, ಈ ಕೇಸ್​ನಲ್ಲಿ ಆರ್ಯನ್​ಗೆ ಶಿಕ್ಷೆ ಆಗುವುದಿಲ್ಲ ಎಂದು ಕಮಾಲ್​ ಆರ್​. ಖಾನ್​ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ.

‘ಈ ಹಿಂದೆ ಬಾಲಿವುಡ್​ ನಟ ಫರ್ದೀನ್​ ಖಾನ್​ ಕೂಡ ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದರು. ಆದರೆ ಅವರಿಗೆ ಶಿಕ್ಷೆ ಆಗಲಿಲ್ಲ. ಒಂದಷ್ಟು ದಿನ ಜೈಲಿನಲ್ಲಿ ಇದ್ದರು. ಪತ್ತೆಯಾದ ಡ್ರಗ್ಸ್​ನ ಪ್ರಮಾಣ ಆ ವೇಳೆಗಾಗಲೇ ಕಡಿಮೆ ಆಗಿಬಿಟ್ಟಿತ್ತು. ಅಷ್ಟು ಪ್ರಮಾಣದ ಮಾದಕ ವಸ್ತುವನ್ನು ಸಾಕ್ಷಿಯಾಗಿ ಇಟ್ಟುಕೊಂಡು ಶಿಕ್ಷೆ ನೀಡುವುದು ಕೂಡ ಕಷ್ಟವಾಯಿತು. ಪ್ರಕರಣ ಕೋರ್ಟ್​ಗೆ ಹೋದಾಗ ನ್ಯಾಯಾಧೀಶರ ಮುಂದೆ ಫರ್ದೀನ್​ ಖಾನ್​ ಕ್ಷಮೆ ಕೇಳಿದರು. ಇನ್ಮುಂದೆ ಇಂಥ ಕೆಲಸ ಮಾಡುವುದಿಲ್ಲ ಅಂತ ಹೇಳಿ ಬಚಾವ್​ ಆದರು. ಕೇಸ್​ ಮುಕ್ತಾಯ ಆಯಿತು. ಆರ್ಯನ್​ ಖಾನ್​ ವಿಚಾರದಲ್ಲೂ ಹೀಗೆಯೇ ಆಗಲಿದೆ’ ಎಂದು ಕಮಾಲ್​ ಆರ್. ಖಾನ್​ ಹೇಳಿದ್ದಾರೆ.

ಇದನ್ನೂ ಓದಿ:

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ