AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಾವಿನ ನಡುವಿನ ವಿಚಿತ್ರ ಕಾಕತಾಳೀಯ

Asha Bhosle: ಮಹಾನ್ ಗಾಯಕಿ ಆಶಾ ಭೋಸ್ಲೆ ಅವರು 92ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರ ನಿಧನವು ಚಿತ್ರೋದ್ಯಮ ಮತ್ತು ಅಭಿಮಾನಿಗಳಲ್ಲಿ ದುಃಖವನ್ನುಂಟುಮಾಡಿದೆ. ಗಮನಾರ್ಹ ಸಂಗತಿಯೆಂದರೆ, ಆಶಾ ಭೋಸ್ಲೆ ಅವರ ಸಹೋದರಿ ಲತಾ ಮಂಗೇಶ್ಕರ್ ಕೂಡ 92ನೇ ವಯಸ್ಸಿನಲ್ಲಿ, ಅದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಾವಿನ ನಡುವಿನ ವಿಚಿತ್ರ ಕಾಕತಾಳೀಯ
ಆಶಾ ಭೋಸ್ಲೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 13, 2026 | 8:47 AM

Share

ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ (Asha Bhosle) ಏಪ್ರಿಲ್ 12ರಂದು ಮುಂಬೈನಲ್ಲಿ ನಿಧನರಾದರು. ಅವರು ತಮ್ಮ 92 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಪುತ್ರ ಆನಂದ್ ಭೋಸ್ಲೆ, ಮಹಾರಾಷ್ಟ್ರ ಸಂಸ್ಕೃತಿ ಸಚಿವ ಆಶಿಶ್ ಶೇಲಾರ್ ಮತ್ತು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತಿ ಸಮದಾನಿ ಅವರ ಸಾವಿನ ಬಗ್ಗೆ ಮಾಹಿತಿ ನೀಡಿದರು. ಈ ಸುದ್ದಿ ಚಲನಚಿತ್ರೋದ್ಯಮ ಹಾಗೂ ಅವರ ಅಭಿಮಾನಿಗಳಲ್ಲಿ ದುಃಖವನ್ನುಂಟು ಮಾಡಿದೆ. ಆಶಾ ಭೋಸ್ಲೆ ಮತ್ತು ಅವರ ಸಹೋದರಿ ಮತ್ತು ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರ ಸಾವಿನ ನಡುವೆ ಕಾಕತಾಳೀಯತೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಆಶಾ ಮತ್ತು ಲತಾ ಮಂಗೇಶ್ಕರ್ ಇಬ್ಬರು ಸಹೋದರಿಯರು. ಅವರು ಭಾರತೀಯ ಸಂಗೀತ ಉದ್ಯಮದ ದಂತಕಥೆಗಳು. ಲತಾ ಮಂಗೇಶ್ಕರ್ ಅವರನ್ನು ಭಾರತದ ಕೋಗಿಲೆ ಎಂದು ಕರೆಯಲಾಗುತ್ತಿತ್ತು. ಇಬ್ಬರೂ ಸಾವಿರಾರು ಬಾಲಿವುಡ್ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಫೆಬ್ರವರಿ 6, 2022 ರ ಭಾನುವಾರದಂದು, ಲತಾ ಮಂಗೇಶ್ಕರ್ ತಮ್ಮ 92 ನೇ ವಯಸ್ಸಿನಲ್ಲಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಅದೇ ರೀತಿ, ನಿಖರವಾಗಿ 4 ವರ್ಷಗಳ ನಂತರ, ಏಪ್ರಿಲ್ 22, 2026 ರ ಭಾನುವಾರದಂದು, ಆಶಾ ಭೋಸ್ಲೆ ಕೂಡ 92 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮುಂಬೈನ ಅದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇದು ಒಂದು ವಿಶಿಷ್ಟ ಕಾಕತಾಳೀಯ.

ಆಶಾ ಭೋಸ್ಲೆ ಅವರ ಆರೋಗ್ಯ ಸ್ವಲ್ಪ ಸಮಯದಿಂದ ಹದಗೆಡುತ್ತಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಹೊರಬಂದ ಅವರ ಮಗ ಆನಂದ್ ಸಾವಿನ ಬಗ್ಗೆ ಮಾಹಿತಿ ನೀಡಿದರು. ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು ಎಂದು ಡಾ. ಪ್ರತಿ ಸಂದಾನಿ ತಿಳಿಸಿದ್ದಾರೆ. ಈ ಮಧ್ಯೆ, ಸಂಸ್ಕೃತಿ ಸಚಿವ ಆಶಿಶ್ ಶೆಲಾರ್, ‘ಇಂದು ಇಡೀ ದೇಶ ದುಃಖದ ಸಾಗರದಲ್ಲಿ ಮುಳುಗಿದೆ. ಒಂದು ಯುಗ ಅಂತ್ಯಗೊಂಡಿದೆ’ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಆಶಾ ಭೋಸ್ಲೆ ಗಳಿಸಿದ ಆಸ್ತಿಗಳೇನು? ಅವರ ಹಾಡು, ಬ್ಯುಸಿನೆಸ್, ರಿಯಲ್ ಎಸ್ಟೇಟ್ ಆದಾಯ ಎಷ್ಟಿತ್ತು ಗೊತ್ತಾ?

ಆಶಾ ಭೋಸ್ಲೆ ಅವರ ಹೆಸರು ಭಾರತೀಯ ಸಂಗೀತ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಶಾಶ್ವತವಾಗಿ ಬರೆಯಲ್ಪಡುತ್ತದೆ. 8 ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ, ಅವರು ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರ ಧ್ವನಿಯು ವಿಭಿನ್ನವಾದ ಮಾಂತ್ರಿಕತೆ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ