‘ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಮರುಕ

ಹಿಂದೂಗಳನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಈ ಘಟನೆ ಬಗ್ಗೆ ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ವಿಡಿಯೋ ಮೂಲಕ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಮರುಕ
Salim Merchant

Updated on: Apr 24, 2025 | 8:23 PM

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ನಡೆದಿದ ದಾಳಿ ಬಗ್ಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಸಲ್ಮಾನ್ ಖಾನ್, ಶಾರುಖ್ ಖಾನ್, ಅಕ್ಷಯ್ ಕುಮಾರ್, ರಶ್ಮಿಕಾ ಮಂದಣ್ಣ, ಕಿಯಾರಾ ಅಡ್ವಾಣಿ ಸೇರಿದಂತೆ ಹಲವು ಕಲಾವಿದರು ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ. ಈಗ ಖ್ಯಾತ ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಅವರು ಕೂಡ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ.

‘ಹಿಂದೂಗಳು ಎಂಬ ಕಾರಣಕ್ಕೆ ಪಹಲ್ಗಾಮ್​ನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗಿದೆ. ಹಂತಕರು ಮುಸ್ಲಿಮರೇ? ಅಲ್ಲ, ಅವರು ಭಯೋತ್ಪಾದಕರು. ಯಾಕೆಂದರೆ ಇಸ್ಲಾಂ ಇದನ್ನು ಹೇಳಿಕೊಡುವುದಿಲ್ಲ. ಧರ್ಮದ ವಿಚಾರದಲ್ಲಿ ಯಾವುದೇ ಬಲವಂತ ಮಾಡುವಂತಿಲ್ಲ ಎಂದು ಖುರಾನ್​ನಲ್ಲಿ ಬರೆದಿದೆ’ ಎಂದು ಸಲೀಂ ಮರ್ಚೆಂಟ್ ಅವರು ವಿಡಿಯೋ ಆರಂಭಿಸಿದ್ದಾರೆ.

ಇದನ್ನೂ ಓದಿ
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
ಪಾಕ್ ಸೇನೆಗೆ ನಡುಕ ಶುರು: ಉಪಗ್ರಹ ಚಿತ್ರಗಳಿಂದ ಬಹಿರಂಗವಾಯ್ತು ರಹಸ್ಯ
ಮೆಹಂದಿ ಮಾಸುವ ಮುನ್ನವೇ ನವವಿವಾಹಿತೆಯ ಕುಂಕುಮ ಅಳಿಸಿದ ಉಗ್ರರು
ಪಹಲ್ಗಾಮ್ ದಾಳಿ: ಅಜಿತ್ ದೋವಲ್, ಜೈಶಂಕರ್ ಭೇಟಿಯಾದ ಪ್ರಧಾನಿ ಮೋದಿ

‘ಇಂಥ ಒಂದು ದಿನವನ್ನು ನೋಡುವಂತಾಯಿತಲ್ಲ ಎಂದು ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ. ನನ್ನ ಅಮಾಯಕ ಹಿಂದೂ ಸಹೋದರ, ಸಹೋದರಿಯರನ್ನು ಹತ್ಯೆ ಮಾಡಲಾಗಿದೆ. ಈ ದ್ವೇಷ ಯಾವಾಗ ಮುಗಿಯುತ್ತದೆ? ಕಳೆದ 2-3 ವರ್ಷಗಳಿಂದ ಕಾಶ್ಮೀರದ ಜನರು ಸರಿಯಾಗಿ ಜೀವನ ಮಾಡುತ್ತಿದ್ದರು. ಅವರ ಜೀವನದಲ್ಲಿ ಮತ್ತೆ ಅದೇ ಸಮಸ್ಯೆ ಶುರುವಾಗಿದೆ’ ಎಂದು ಸಲೀಂ ಮರ್ಚೆಂಟ್ ಅವರು ಹೇಳಿದ್ದಾರೆ.

‘ನನ್ನ ನೋವು ಮತ್ತು ಕೋಪವನ್ನು ಹೇಗೆ ವ್ಯಕ್ತಪಡಿಸಲಿ ಎಂಬುದೇ ತಿಳಿಯುತ್ತಿಲ್ಲ. ಅಮಾಯಕ ಜನರು ಪ್ರಾಣ ತೆತ್ತಿದ್ದಾರೆ. ತಲೆ ಬಾಗಿ ನಾನು ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬದವರಿಗೆ ದೇವರು ಶಕ್ತಿ ನೀಡಲಿ. ಓಂ ಶಾಂತಿ’ ಎನ್ನುವ ಮೂಲ ಸಲೀಂ ಮರ್ಚೆಂಟ್ ಅವರು ವಿಡಿಯೋ ಪೂರ್ಣಗೊಳಿಸಿದ್ದಾರೆ. ಅವರ ಮಾತುಗಳಿಗೆ ಅನೇಕರು ಸಹಮತ ಸೂಚಿಸಿದ್ದಾರೆ.

ಇದನ್ನೂ ಓದಿ: ‘ಕಾಶ್ಮೀರ ನರಕ ಆಗುತ್ತಿದೆ’: ಪಹಲ್ಗಾಮ್‌ ಉಗ್ರರ ದಾಳಿಗೆ ನಟ ಸಲ್ಮಾನ್ ಖಾನ್ ಖಂಡನೆ

ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್​ನಲ್ಲಿ ಗುಂಡಿನ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕೃತ್ಯದ ಹಿಂದೆ ಪಾಕ್ ಕೈವಾಡ ಇದೆ. ಹಾಗಾಗಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಕಲಿಸಲು ಭಾರತ ಸರ್ಕಾರ ಮುಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:10 pm, Thu, 24 April 25