AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಯಾದ ವ್ಯಕ್ತಿ ನಿಮಗೆ ನೋವು ಮಾಡಲ್ಲ’; ಆಶಿಷ್​ ವಿದ್ಯಾರ್ಥಿ ಮರು ಮದುವೆಯಿಂದ ಮೊದಲ ಪತ್ನಿಗೆ ಬೇಸರ?

Rajoshi Vidyarthi: ಆಶಿಷ್ ವಿದ್ಯಾರ್ಥಿ ಅವರು ರೂಪಾಲಿ ಅವರನ್ನು ಮದುವೆ ಆಗಿರುವ ಬಗ್ಗೆ ಮೊದಲ ಪತ್ನಿ ರಾಜೋಶಿ ಪರೋಕ್ಷವಾಗಿ ಮಾತನಾಡಿದ್ದಾರೆ.  

‘ಸರಿಯಾದ ವ್ಯಕ್ತಿ ನಿಮಗೆ ನೋವು ಮಾಡಲ್ಲ’; ಆಶಿಷ್​ ವಿದ್ಯಾರ್ಥಿ ಮರು ಮದುವೆಯಿಂದ ಮೊದಲ ಪತ್ನಿಗೆ ಬೇಸರ?
ಆಶಿಷ್ ವಿದ್ಯಾರ್ಥಿ,ರೂಪಾಲಿ-ರಾಜೋಶಿ
ರಾಜೇಶ್ ದುಗ್ಗುಮನೆ
|

Updated on: May 26, 2023 | 11:14 AM

Share

ಹಿರಿಯ ನಟ ಆಶಿಷ್ ವಿದ್ಯಾರ್ಥಿ (Ashish Vidyarthi) ಅವರು 60ನೇ ವಯಸ್ಸಿನಲ್ಲಿ ಎರಡನೇ ಮದುವೆ ಆಗುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ರೂಪಾಲಿ ಬರುವಾ ಅವರನ್ನು ಇತ್ತೀಚೆಗೆ ಮದುವೆ ಆಗಿದ್ದಾರೆ. ಇದು ಕೋರ್ಟ್ ಮ್ಯಾರೇಜ್ ಆಗಿದ್ದು, ಕೆಲವೇ ಕೆಲವು ಆಪ್ತರು ಈ ವಿವಾಹಕ್ಕೆ ಹಾಜರಿ ಹಾಕಿದ್ದರು. ಈ ಮದುವೆ ಆಶಿಷ್ ವಿದ್ಯಾರ್ಥಿ ಅವರ ಮೊದಲ ಪತ್ನಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಅವರು ಗೂಡಾರ್ಥದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ. ಇದರ ಹಿಂದಿರೋ ಅರ್ಥ ಏನು ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ.

ಆಶಿಷ್ ವಿದ್ಯಾರ್ಥಿ ಹಾಗೂ ರಾಜೋಶಿ ವಿದ್ಯಾರ್ಥಿ ಮದುವೆ ಆಗಿದ್ದರು. ರಾಜೋಶಿ ಅವರು ಬೆಂಗಾಲಿ ನಟಿ ಶಾಕುಂತಲಾ ಬರುವಾ ಅವರ ಮಗಳು. ಇವರು ಆಶಿಷ್​ ವಿದ್ಯಾರ್ಥಿ ಆ್ಯಂಡ್ ಅಸೋಸಿಯೇಟ್​ನ ಸಹಸಂಸ್ಥಾಪಕಿ ಕೂಡ ಹೌದು. ಇಬ್ಬರೂ ನಂತರ ಬೇರೆ ಆಗಿದ್ದಾರೆ. ಆಶಿಷ್ ವಿದ್ಯಾರ್ಥಿ ಅವರು ರೂಪಾಲಿ ಅವರನ್ನು ಮದುವೆ ಆಗಿರುವ ಬಗ್ಗೆ ರಾಜೋಶಿ ಪರೋಕ್ಷವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುದ್ದೆ ಊಟ ಸವಿದ ಆಶಿಶ್ ವಿದ್ಯಾರ್ಥಿ; ಏನು ವಿಶೇಷ? ಇಲ್ಲಿದೆ ನೋಡಿ

‘ನಿಮಗೆ ನೋವುಂಟಾಗುತ್ತದೆ ಎಂಬ ವಿಚಾರ ಗೊತ್ತಿದ್ದರೆ ಸರಿಯಾದ ವ್ಯಕ್ತಿ ಅದನ್ನು ಮಾಡುವುದಿಲ್ಲ. ನೆನಪಿನಲ್ಲಿಡಿ’ ಎಂದು ಮೊದಲ ಪೋಸ್ಟ್​ನಲ್ಲಿ ರಾಜೋಶಿ ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್ ಮಾಡಿರುವ ಅವರು, ‘ಅತಿಯಾದ ಆಲೋಚನೆ ಮತ್ತು ಅನುಮಾನವು ಇದೀಗ ನಿಮ್ಮ ಮನಸ್ಸಿನಿಂದ ಹೊರಬರಲಿ. ಸ್ಪಷ್ಟತೆ ಗೊಂದಲವನ್ನು ಬದಲಾಯಿಸಬಹುದು. ನಿಮ್ಮ ಜೀವನದಲ್ಲಿ ಶಾಂತಿ ತುಂಬಲಿ. ನಾನು ಸಾಕಷ್ಟು ಬಲಶಾಲಿ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ

ಆಶಿಷ್ ವಿದ್ಯಾರ್ಥಿ ಭಾರತದ ಜನಪ್ರಿಯ ಪೋಷಕ ನಟ ಹಾಗೂ ವಿಲನ್​ಗಳಲ್ಲಿ ಒಬ್ಬರು. ಕನ್ನಡ ಸೇರಿದಂತೆ 11 ಭಾಷೆಗಳ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದಿರುವ ಆಶಿಷ್ ವಿದ್ಯಾರ್ಥಿ ಕೋವಿಡ್ ಬಳಿಕ ಯೂಟ್ಯೂಬ್​ ವಿಡಿಯೋ ಮಾಡುತ್ತಿದ್ದಾರೆ. ಹಲವು ನಗರಗಳಿಗೆ ತೆರಳಿ ಅಲ್ಲಿನ ಜನಪ್ರಿಯ ಖಾದ್ಯಗಳನ್ನು ಸವಿಯುತ್ತಾ ಈ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!