AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಆರ್ಯನ್ ಕಾಲ್​ಶೀಟ್ ಕೊಡಿಸೋದಾಗಿ ಮೋಸ; ಕರ್ನಾಟಕದಲ್ಲಿ ವಂಚಕ ಅರೆಸ್ಟ್

ಐಶ್ವರ್ಯಾ ಶರ್ಮಾ ಅವರಿಗೆ ಕಾರ್ತಿಕ್ ಆರ್ಯನ್ ಜೊತೆ ಸಿನಿಮಾ ಮಾಡಬೇಕು ಎಂದಿತ್ತು. ಈ ಚಿತ್ರಕ್ಕೆ ‘ಲವ್​ ಇನ್ ಲಂಡನ್’ ಎಂದು ಟೈಟಲ್ ಇಡೋಕೆ ನಿರ್ಧರಿಸಿದ್ದರು. ಈ ವಿಚಾರ ಕೃಷ್ಣ ಕುಮಾರ್​ಗೆ ಗೊತ್ತಾಗಿತ್ತು. ಆತ ಐಶ್ವರ್ಯಾನ ಸಂಪರ್ಕಿಸಿ, ನಟನ ಭೇಟಿ ಮಾಡಿಸೋದಾಗಿ ಹೇಳಿದ್ದರು.

ಕಾರ್ತಿಕ್ ಆರ್ಯನ್ ಕಾಲ್​ಶೀಟ್ ಕೊಡಿಸೋದಾಗಿ ಮೋಸ; ಕರ್ನಾಟಕದಲ್ಲಿ ವಂಚಕ ಅರೆಸ್ಟ್
ಕಾರ್ತಿಕ್ ಆರ್ಯನ್
ರಾಜೇಶ್ ದುಗ್ಗುಮನೆ
|

Updated on: Jun 07, 2024 | 2:25 PM

Share

ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕು ಎಂದು ಕನಸು ಕಾಣುವ ಅನೇಕರು ಮೋಸ ಹೋಗುತ್ತಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸೋದಾಗಿ ಮೋಸ ಮಾಡುವವರ ಸಂಖ್ಯೆ ಹೆಚ್ಚಿದೆ. ಈಗ ಬಾಲಿವುಡ್​ನಲ್ಲಿ ನಿರ್ಮಾಪಕಿ ಆಗಬೇಕು ಎಂದು ಕನಸು ಕಾಣುತ್ತಿದ್ದ ಐಶ್ವರ್ಯಾ ಶರ್ಮಾ (Aishwarya Sharma) ಅವರಿಗೆ ಮೋಸ ಆಗಿದೆ. ಕಾರ್ತಿಕ್ ಆರ್ಯನ್​ ಅವರ ಕಾಲ್​ಶೀಟ್ ಕೊಡಿಸೋ ನೆಪದಲ್ಲಿ ಬರೋಬ್ಬರಿ 82.75 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಸದ್ಯ ಕೃಷ್ಣ ಕುಮಾರ್ ಶರ್ಮಾ ಎಂಬಾತನನ್ನು ಬಂಧಿಸಲಾಗಿದೆ.

ಐಶ್ವರ್ಯಾ ಶರ್ಮಾ ಅವರಿಗೆ ಕಾರ್ತಿಕ್ ಆರ್ಯನ್ ಜೊತೆ ಸಿನಿಮಾ ಮಾಡಬೇಕು ಎಂದಿತ್ತು. ಈ ಚಿತ್ರಕ್ಕೆ ‘ಲವ್​ ಇನ್ ಲಂಡನ್’ ಎಂದು ಟೈಟಲ್ ಇಡೋಕೆ ನಿರ್ಧರಿಸಿದ್ದರು. ಈ ವಿಚಾರ ಕೃಷ್ಣ ಕುಮಾರ್​ಗೆ ಗೊತ್ತಾಗಿತ್ತು. ಆತ ಐಶ್ವರ್ಯಾನ ಸಂಪರ್ಕಿಸಿ, ನಟನ ಭೇಟಿ ಮಾಡಿಸೋದಾಗಿ ಹೇಳಿದ್ದರು. ಈ ಭೇಟಿಗೆ ಒಂದಷ್ಟು ಹಣದ ಅವಶ್ಯಕತೆ ಇದೆ ಎಂದಿದ್ದ ಕೃಷ್ಣ, ಐಶ್ವರ್ಯಾ ಅವರಿಂದ ಬರೋಬ್ಬರಿ 82 ಲಕ್ಷ ರೂಪಾಯಿ ಪಡೆದಿದ್ದ.

ಹಣ ಸಿಕ್ಕ ಬಳಿಕ ಕಾರ್ತಿಕ್ ಆರ್ಯನ್​ನ ಕೃಷ್ಣ ಭೇಟಿ ಮಾಡಿಸಲೇ ಇಲ್ಲ. ಈ ಬಗ್ಗೆ ಕೇಳಿದಾಗೆಲ್ಲ ಕಾರ್ತಿಕ್ ಆರ್ಯನ್ ಬ್ಯುಸಿ ಇದ್ದಾರೆ ಎನ್ನುತ್ತಿದ್ದ. ನಿಧಾನವಾಗಿ ಐಶ್ವರ್ಯಾಗೆ ತಾವು ಮೋಸ ಹೋಗಿದ್ದು ಗೊತ್ತಾಗಿದೆ. ಆತನಿಗೆ ಚಿತ್ರರಂಗದ ಜೊತೆ ನಂಟೇ ಇಲ್ಲ ಎಂಬ ವಿಚಾರ ತಿಳಿಸಿದೆ. .

ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆತ ಕರ್ನಾಟಕದಲ್ಲಿ ಇದ್ದ ಎನ್ನಲಾಗಿದೆ. ಇತ್ತೀಚೆಗೆ ಆತನ ಬಂಧಿಸಲಾಗಿದೆ. ಸದ್ಯ ಆತನ ವಿರುದ್ಧ ಮುಂಬೈ, ದೆಹಲಿ ಹಾಗೂ ಚೆನ್ನೈನಲ್ಲಿ ವಂಚನೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕಾರ್ತಿಕ್ ಆರ್ಯನ್ ಜೊತೆ ನಟಿಸೋ ಚಾನ್ಸ್ ಪಡೆದ ತೃಪ್ತಿ ದಿಮ್ರಿ; ಹಾರರ್ ಸಿನಿಮಾಗೆ ಆಯ್ಕೆ

ಈ ಬಗ್ಗೆ ಕಾರ್ತಿಕ್ ಆರ್ಯನ್​ಗೆ ಮಾಹಿತಿಯೇ ಇರಲಿಲ್ಲ. ಅವರು ‘ಚಂದು ಚಾಂಪಿಯನ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಕಬಿರ್ ಖಾನ್ ಅವರು ನಿರ್ದೇಶನ ಮಾಡಿದ್ದಾರೆ. ಜೂನ್ 14ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಇದರ ಜೊತೆಗೆ ‘ಭೂಲ್ ಭುಲಯ್ಯ 3’ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ