AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Dixit: ಸಲ್ಮಾನ್​ ಖಾನ್​ ಸಿನಿಮಾದ ಸಹಾಯಕ ನಿರ್ದೇಶಕನಿಗೆ ಥಳಿತ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ

ದೆಹಲಿಯ ಲಕ್ಷ್ಮೀ ನಗರ್​ ಏರಿಯಾದಲ್ಲಿ ಈ ಘಟನೆ ನಡೆದಿದೆ. ಮಯಾಂಕ್​ ದೀಕ್ಷಿತ್​ ಮೇಲೆ 6 ಜನರು ಹಲ್ಲೆ ಮಾಡಿ ಪರಾರಿ ಆಗಿದ್ದಾರೆ. ಆಸ್ಪತ್ರೆಯಲ್ಲಿ ಮಯಾಂಕ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

Mayank Dixit: ಸಲ್ಮಾನ್​ ಖಾನ್​ ಸಿನಿಮಾದ ಸಹಾಯಕ ನಿರ್ದೇಶಕನಿಗೆ ಥಳಿತ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ
ಮಯಾಂಕ್​ ದೀಕ್ಷಿತ್​
ಮದನ್​ ಕುಮಾರ್​
|

Updated on: Jul 06, 2023 | 4:17 PM

Share

ಬಾಲಿವುಡ್​ನಲ್ಲಿ ಕಾಸ್ಟಿಂಗ್​ ಡೈರೆಕ್ಟರ್​ ಆಗಿ ಮತ್ತು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮಯಾಂಕ್​ ದೀಕ್ಷಿತ್​ (Mayank Dixit) ಅವರ ಮೇಲೆ ಹಲ್ಲೆ ಮಾಡಲಾಗಿದೆ. ಭಾನುವಾರ (ಜುಲೈ 2) ರಾತ್ರಿ ಈ ಘಟನೆ ನಡೆದಿದೆ ಎಂಬುದು ತಿಳಿದುಬಂದಿದೆ. 6 ಜನರ ಗುಂಪು ಮಯಾಂಕ್​ ದೀಕ್ಷಿತ್​ ಮೇಲೆ ಹಲ್ಲೆ (Assault) ಮಾಡಿದೆ. ಆರೋಪಿಗಳು ಈಗ ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಲ್ಮಾನ್​ ಖಾನ್​ (Salman Khan) ನಟನೆಯ ‘ಯುವರಾಜ್​’ ಸಿನಿಮಾಗೆ ಮಯಾಂಕ್​ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದರು. ಅವರ ಮೇಲೆ 6 ಮಂದಿಗೆ ಯಾವ ದ್ವೇಷ ಇತ್ತು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ದೆಹಲಿಯ ಲಕ್ಷ್ಮೀ ನಗರ್​ ಏರಿಯಾದಲ್ಲಿ ಈ ಘಟನೆ ನಡೆದಿದೆ. ಕಾರು ನಿಲ್ಲಿಸುವ ವಿಚಾರಕ್ಕೆ ಮಯಾಂಕ್​ ದೀಕ್ಷಿತ್​ ಮತ್ತು 6 ಜನರ ನಡುವೆ ಜಗಳು ಶುರುವಾಯಿತು. ಅದು ವಿಕೋಪಕ್ಕೆ ತಿರುಗಿದಾಗ ಮಯಾಂಕ್​ ಮೇಲೆ ಹಲ್ಲೆ ನಡೆಯಿತು. ಈ ಜಗಳದಲ್ಲಿ ಮಯಾಂಕ್​ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇದನ್ನೂ ಓದಿ: ರಸ್ತೆ ಬದಿ ಸೊಪ್ಪು ಮಾರುತ್ತಿದ್ದ ವೃದ್ಧೆ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ

ಮಯಾಂಕ್​ ದೀಕ್ಷಿತ್​ ಮೇಲೆ ಹಲ್ಲೆ ಮಾಡಿದ ಆ 6 ಮಂದಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ಸ್ಥಳದ ಅಕ್ಕಪಕ್ಕದ ಏರಿಯಾಗಳ ಸಿಸಿಟಿವಿ ದೃಶ್ಯಗಳನ್ನು ದೆಹಲಿ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹಲ್ಲೆ ಕುರಿತಂತೆ ಎಫ್​ಐಆರ್​ ದಾಖಲು ಮಾಡಿಕೊಳ್ಳಲಾಗಿದೆ. ಘಟನೆಯ ಬಗ್ಗೆ ಮಯಾಂಕ್​ ದೀಕ್ಷಿತ್​ ಅವರು ಇನ್ನೂ ತಮ್ಮ ಹೇಳಿಕೆ ನೀಡುವುದು ಬಾಕಿ ಇದೆ. ಅವರ ತಲೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

ಆಸ್ಪತ್ರೆಯ ಬೆಡ್​ನಲ್ಲಿ ಮಯಾಂಕ್​ ದೀಕ್ಷಿತ್​ ಅವರು ಮಲಗಿರುವ ಫೋಟೋಗಳು ವೈರಲ್​ ಆಗಿವೆ. ಅವರ ಕಣ್ಣಿನ ಭಾಗ ನೀಲಿ ಆಗಿದೆ. ಕುತ್ತಿಗೆಗೆ ಬ್ಯಾಂಡೇಜ್​ ಹಾಕಲಾಗಿದೆ. ಮಯಾಂಕ್ ಕೆಲಸ ಮಾಡುವುದು ಮುಂಬೈನಲ್ಲಿ ಆದರೂ ಮೂಲತಃ ಅವರು ದೆಹಲಿಯವರು. ದೆಹಲಿಯಲ್ಲಿ ಜರ್ನಲಿಸಂ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಮುಂಬೈಗೆ ಬಂದು ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದರು. ಕಾಸ್ಟಿಂಗ್​ ಡೈರೆಕ್ಟರ್​ ಆಗಿಯೂ ಅವರು ಫೇಮಸ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!