AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ತಡ ಆಗಿದ್ದಕ್ಕೆ ಪೈಲೆಟ್​ ಮೇಲೆ ಹಲ್ಲೆ; ವೈರಲ್​ ವಿಡಿಯೋಗೆ ಸೋನು ಸೂದ್​ ಪ್ರತಿಕ್ರಿಯೆ

ವಿಮಾನ ತಡವಾಗಿದೆ ಎಂದು ಘೋಷಿಸಿದ ಪೈಲೆಟ್​ ಮೇಲೆ ವ್ಯಕ್ತಿಯೊಬ್ಬನು ಹಲ್ಲೆ ಮಾಡಿದ್ದಾನೆ. ‘ವಿಮಾನ ಚಲಾಯಿಸು. ಇಲ್ಲದಿದ್ದರೆ ಬಾಗಿಲು ತೆಗಿ’ ಎಂದು ಆವಾಜ್​ ಹಾಕಿ ವಿಮಾನದೊಳಗೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಇದನ್ನು ನೋಡಿ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋನು ಸೂದ್​ ಕೂಡ ಪ್ರತಿಕ್ರಿಯಿಸಿದ್ದಾರೆ.

ವಿಮಾನ ತಡ ಆಗಿದ್ದಕ್ಕೆ ಪೈಲೆಟ್​ ಮೇಲೆ ಹಲ್ಲೆ; ವೈರಲ್​ ವಿಡಿಯೋಗೆ ಸೋನು ಸೂದ್​ ಪ್ರತಿಕ್ರಿಯೆ
ಪೈಲೆಟ್​ ಮೇಲೆ ಹಲ್ಲೆ, ಸೋನು ಸೂದ್​
ಮದನ್​ ಕುಮಾರ್​
|

Updated on: Jan 15, 2024 | 5:59 PM

Share

ಉತ್ತರ ಭಾರತದಲ್ಲಿ ಹವಾಮಾನ ವೈಪರಿತ್ಯ ಉಂಟಾಗಿದೆ. ಅದರ ಪರಿಣಾಮವಾಗಿ ಅನೇಕ ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಾಸ ಉಂಟಾಗಿದೆ. ಪ್ರಮುಖ ನಗರಗಳ ಏರ್​ಪೋರ್ಟ್​ಗಳಲ್ಲಿ ಪ್ರಯಾಣಿಕರು ಹಲವು ಗಂಟೆಗಳ ಕಾಲ ಕಾಯುವಂತಾಗಿದೆ. ತಾಳ್ಮೆ ಕಳೆದುಕೊಂಡ ಪ್ರಯಾಣಿಕನೊಬ್ಬ ಅನಾಗರಿಕನಂತೆ ವರ್ತಿಸಿದ್ದಾನೆ. ವಿಮಾನ ತಡವಾಗಿದೆ ಎಂದು ಘೋಷಿಸಿದ ಪೈಲೆಟ್​ ಮೇಲೆ ಆತ ಹಲ್ಲೆ (Assault on pilot) ಮಾಡಿದ್ದಾನೆ. ‘ವಿಮಾನ ಚಲಾಯಿಸು. ಇಲ್ಲದಿದ್ದರೆ ಬಾಗಿಲು ತೆಗಿ’ ಎಂದು ಆವಾಜ್​ ಹಾಕುತ್ತಾ, ವಿಮಾನದೊಳಗೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ (viral video) ನೋಡಿ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ನಟ ಸೋನು ಸೂದ್​ (Sonu Sood) ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಹವಾಮಾನದ ಮೇಲೆ ಮನುಷ್ಯನ ನಿಯಂತ್ರಣ ಇಲ್ಲ. ಅದರ ಸ್ವಭಾವ ಬೇರೆ. ನಾನು ವಿಮಾನ ನಿಲ್ದಾಣದಲ್ಲಿ ತಾಳ್ಮೆಯಿಂದ ಮೂರು ಗಂಟೆಯಿಂದ ಕಾಯುತ್ತಿದ್ದೇನೆ. ಇದು ಕಷ್ಟ ಎಂಬುದು ಗೊತ್ತು. ಆದರೂ ವಿಮಾನದ ಸಿಬ್ಬಂದಿ ಜೊತೆ ಸಮಾಧಾನದಿಂದ ವರ್ತಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಸೋನು ಸೂದ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಜನರಿಗೆ ಸಂದೇಶ ನೀಡಿದ್ದಾರೆ.

‘ವಿಮಾನದ ಸಿಬ್ಬಂದಿಯ ಜೊತೆ ಜನರು ಕೆಟ್ಟದಾಗಿ ನಡೆದುಕೊಳ್ಳುವ ವಿಡಿಯೋವನ್ನು ನಾನು ಆಗಾಗ ನೋಡಿದ್ದೇನೆ. ಕೆಲವು ಸಂದರ್ಭಗಳು ಯಾರ ನಿಯಂತ್ರಣದಲ್ಲೂ ಇರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲರನ್ನೂ ನಾವು ಗೌರವಿಸಬೇಕು. ವಿಮಾನದ ಸಿಬ್ಬಂದಿಯಿಂದಾಗಿ ತಡ ಆಗುವುದಿಲ್ಲ’ ಎಂಬುದನ್ನು ಸೋನು ಸೂದ್​ ಅವರು ತಿಳಿಸಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಸೆಟ್​ನಲ್ಲಿ ದಕ್ಷಿಣ ಭಾರತದವರ ಈ ನಡೆಯಿಂದ ಸೋನು ಸೂದ್​ಗೆ ಆಗಿತ್ತು ಶಾಕ್

ಪೈಲೆಟ್​ ಮೇಲೆ ಪ್ರಯಾಣಿಕ ಹಲ್ಲೆ ಮಾಡುತ್ತಿರುವ ವಿಡಿಯೋದ ಸ್ಕ್ರೀನ್​ ಶಾಟ್​ ಅನ್ನು ಸೋನು ಸೂದ್​ ಶೇರ್​ ಮಾಡಿಕೊಂಡಿದ್ದಾರೆ. ‘ಈ ರೀತಿ ಜನರು ವರ್ತಿಸುವುದನ್ನು ಮುಂದುವರಿಸಿದರೆ ವಿಮಾನದ ಸಿಬ್ಬಂದಿಗೆ ಆತ್ಮರಕ್ಷಣೆಯ ತರಬೇತಿ ಕಡ್ಡಾಯ ಆಗಲಿದೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತಿಗೆ ಅಭಿಮಾನಿಗಳು ಮತ್ತು ನೆಟ್ಟಿಗರು ಸಹಮತ ಸೂಚಿಸಿದ್ದಾರೆ. ಅನೇಕ ಸಿನಿಮಾಗಳಲ್ಲಿ ಸೋನು ಸೂದ್​ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಹಲವು ಸಾಮಾಜಿಕ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು