ವಿಮಾನ ತಡ ಆಗಿದ್ದಕ್ಕೆ ಪೈಲೆಟ್​ ಮೇಲೆ ಹಲ್ಲೆ; ವೈರಲ್​ ವಿಡಿಯೋಗೆ ಸೋನು ಸೂದ್​ ಪ್ರತಿಕ್ರಿಯೆ

ವಿಮಾನ ತಡವಾಗಿದೆ ಎಂದು ಘೋಷಿಸಿದ ಪೈಲೆಟ್​ ಮೇಲೆ ವ್ಯಕ್ತಿಯೊಬ್ಬನು ಹಲ್ಲೆ ಮಾಡಿದ್ದಾನೆ. ‘ವಿಮಾನ ಚಲಾಯಿಸು. ಇಲ್ಲದಿದ್ದರೆ ಬಾಗಿಲು ತೆಗಿ’ ಎಂದು ಆವಾಜ್​ ಹಾಕಿ ವಿಮಾನದೊಳಗೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಇದನ್ನು ನೋಡಿ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋನು ಸೂದ್​ ಕೂಡ ಪ್ರತಿಕ್ರಿಯಿಸಿದ್ದಾರೆ.

ವಿಮಾನ ತಡ ಆಗಿದ್ದಕ್ಕೆ ಪೈಲೆಟ್​ ಮೇಲೆ ಹಲ್ಲೆ; ವೈರಲ್​ ವಿಡಿಯೋಗೆ ಸೋನು ಸೂದ್​ ಪ್ರತಿಕ್ರಿಯೆ
ಪೈಲೆಟ್​ ಮೇಲೆ ಹಲ್ಲೆ, ಸೋನು ಸೂದ್​
Follow us
|

Updated on: Jan 15, 2024 | 5:59 PM

ಉತ್ತರ ಭಾರತದಲ್ಲಿ ಹವಾಮಾನ ವೈಪರಿತ್ಯ ಉಂಟಾಗಿದೆ. ಅದರ ಪರಿಣಾಮವಾಗಿ ಅನೇಕ ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಾಸ ಉಂಟಾಗಿದೆ. ಪ್ರಮುಖ ನಗರಗಳ ಏರ್​ಪೋರ್ಟ್​ಗಳಲ್ಲಿ ಪ್ರಯಾಣಿಕರು ಹಲವು ಗಂಟೆಗಳ ಕಾಲ ಕಾಯುವಂತಾಗಿದೆ. ತಾಳ್ಮೆ ಕಳೆದುಕೊಂಡ ಪ್ರಯಾಣಿಕನೊಬ್ಬ ಅನಾಗರಿಕನಂತೆ ವರ್ತಿಸಿದ್ದಾನೆ. ವಿಮಾನ ತಡವಾಗಿದೆ ಎಂದು ಘೋಷಿಸಿದ ಪೈಲೆಟ್​ ಮೇಲೆ ಆತ ಹಲ್ಲೆ (Assault on pilot) ಮಾಡಿದ್ದಾನೆ. ‘ವಿಮಾನ ಚಲಾಯಿಸು. ಇಲ್ಲದಿದ್ದರೆ ಬಾಗಿಲು ತೆಗಿ’ ಎಂದು ಆವಾಜ್​ ಹಾಕುತ್ತಾ, ವಿಮಾನದೊಳಗೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ (viral video) ನೋಡಿ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ನಟ ಸೋನು ಸೂದ್​ (Sonu Sood) ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಹವಾಮಾನದ ಮೇಲೆ ಮನುಷ್ಯನ ನಿಯಂತ್ರಣ ಇಲ್ಲ. ಅದರ ಸ್ವಭಾವ ಬೇರೆ. ನಾನು ವಿಮಾನ ನಿಲ್ದಾಣದಲ್ಲಿ ತಾಳ್ಮೆಯಿಂದ ಮೂರು ಗಂಟೆಯಿಂದ ಕಾಯುತ್ತಿದ್ದೇನೆ. ಇದು ಕಷ್ಟ ಎಂಬುದು ಗೊತ್ತು. ಆದರೂ ವಿಮಾನದ ಸಿಬ್ಬಂದಿ ಜೊತೆ ಸಮಾಧಾನದಿಂದ ವರ್ತಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಸೋನು ಸೂದ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಜನರಿಗೆ ಸಂದೇಶ ನೀಡಿದ್ದಾರೆ.

‘ವಿಮಾನದ ಸಿಬ್ಬಂದಿಯ ಜೊತೆ ಜನರು ಕೆಟ್ಟದಾಗಿ ನಡೆದುಕೊಳ್ಳುವ ವಿಡಿಯೋವನ್ನು ನಾನು ಆಗಾಗ ನೋಡಿದ್ದೇನೆ. ಕೆಲವು ಸಂದರ್ಭಗಳು ಯಾರ ನಿಯಂತ್ರಣದಲ್ಲೂ ಇರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲರನ್ನೂ ನಾವು ಗೌರವಿಸಬೇಕು. ವಿಮಾನದ ಸಿಬ್ಬಂದಿಯಿಂದಾಗಿ ತಡ ಆಗುವುದಿಲ್ಲ’ ಎಂಬುದನ್ನು ಸೋನು ಸೂದ್​ ಅವರು ತಿಳಿಸಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಸೆಟ್​ನಲ್ಲಿ ದಕ್ಷಿಣ ಭಾರತದವರ ಈ ನಡೆಯಿಂದ ಸೋನು ಸೂದ್​ಗೆ ಆಗಿತ್ತು ಶಾಕ್

ಪೈಲೆಟ್​ ಮೇಲೆ ಪ್ರಯಾಣಿಕ ಹಲ್ಲೆ ಮಾಡುತ್ತಿರುವ ವಿಡಿಯೋದ ಸ್ಕ್ರೀನ್​ ಶಾಟ್​ ಅನ್ನು ಸೋನು ಸೂದ್​ ಶೇರ್​ ಮಾಡಿಕೊಂಡಿದ್ದಾರೆ. ‘ಈ ರೀತಿ ಜನರು ವರ್ತಿಸುವುದನ್ನು ಮುಂದುವರಿಸಿದರೆ ವಿಮಾನದ ಸಿಬ್ಬಂದಿಗೆ ಆತ್ಮರಕ್ಷಣೆಯ ತರಬೇತಿ ಕಡ್ಡಾಯ ಆಗಲಿದೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತಿಗೆ ಅಭಿಮಾನಿಗಳು ಮತ್ತು ನೆಟ್ಟಿಗರು ಸಹಮತ ಸೂಚಿಸಿದ್ದಾರೆ. ಅನೇಕ ಸಿನಿಮಾಗಳಲ್ಲಿ ಸೋನು ಸೂದ್​ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಹಲವು ಸಾಮಾಜಿಕ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!