AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಮಾವನ ಜತೆ ಆಗಾಗ ವಾದ ಮಾಡುವ ಕೆಎಲ್​ ರಾಹುಲ್; ಕಾರಣವೇನು? ಎಲ್ಲವನ್ನೂ ಹೇಳಿಕೊಂಡ ಕ್ರಿಕೆಟ್ ತಾರೆ

KL Rahul | Athiya Shetty | Suniel Shetty: ಸಾಮಾಜಿಕ ಜಾಲತಾಣದಲ್ಲಿ ಸುನೀಲ್ ಶೆಟ್ಟಿ- ಕೆಎಲ್ ರಾಹುಲ್ ಆಗಾಗ ತಮಾಷೆಯ ಸಂಭಾಷಣೆಗಳನ್ನು ನಡೆಸುತ್ತಿರುತ್ತಾರೆ. ಇದೀಗ ಸಂದರ್ಶನವೊಂದರಲ್ಲಿ ರಾಹುಲ್ ಭಾವಿ ಮಾವನ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಸುನೀಲ್ ಶೆಟ್ಟಿ ಜತೆ ವಾದ ಮಾಡುವ ಸಂದರ್ಭಗಳ ಬಗ್ಗೆಯೂ ಹೇಳಿಕೊಂಡಿದ್ದಾರೆ.

ಭಾವಿ ಮಾವನ ಜತೆ ಆಗಾಗ ವಾದ ಮಾಡುವ ಕೆಎಲ್​ ರಾಹುಲ್; ಕಾರಣವೇನು? ಎಲ್ಲವನ್ನೂ ಹೇಳಿಕೊಂಡ ಕ್ರಿಕೆಟ್ ತಾರೆ
ಸುನೀಲ್ ಶೆಟ್ಟಿ, ಕೆಎಲ್ ರಾಹುಲ್-ಆಥಿಯಾ ಶೆಟ್ಟಿ
TV9 Web
| Edited By: |

Updated on: Apr 03, 2022 | 6:59 PM

Share

ಭಾರತ ಕ್ರಿಕೆಟ್ ತಂಡದ ತಾರೆ, ಲಕ್ನೋ ಸೂಪರ್ ಜೈಂಟ್ಸ್ ಕ್ರಿಕೆಟ್ ತಂಡದ ನಾಯಕ ಕೆ.ಎಲ್.ರಾಹುಲ್ (KL Rahul) ಕಳೆದ ಕೆಲವು ಸಮಯದಿಂದ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಜತೆ ಸುತ್ತಾಡುತ್ತಿದ್ದಾರೆ. ಮೊದಮೊದಲು ಈರ್ವರೂ ತಮ್ಮ ಸಂಬಂಧವನ್ನು ಗುಟ್ಟಾಗಿಟ್ಟಿದ್ದರೂ ಕೂಡ, ಈಗ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ವ್ಯಾಲಂಟೈನ್ಸ್ ಡೇ ದಿನ ಆಥಿಯಾ ಜತೆಗಿರುವ ಚಿತ್ರವನ್ನು ಹಂಚಿಕೊಂಡು ರಾಹುಲ್ ಶುಭಾಶಯ ಹೇಳಿದ್ದರು. ಆ ಮೂಲಕ ಗಾಸಿಪ್​ಗಳಿಗೆ ತೆರೆ ಎಳೆದಿದ್ದರು. ಆಥಿಯಾ ತಂದೆ ಸುನೀಲ್ ಶೆಟ್ಟಿ ಕನ್ನಡದಲ್ಲೂ ನಟಿಸಿದ್ದು, ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆ ಅವರು ಹಲವು ಬಾರಿ ರಾಹುಲ್ ಹಾಗೂ ಆಥಿಯಾ ಗೆಳೆತನದ ಬಗ್ಗೆ ನಗುತ್ತಾ ಮಾತನಾಡಿದ್ದರು. ಇದೀಗ ರಾಹುಲ್ ಸರದಿ. ಸಾಮಾಜಿಕ ಜಾಲತಾಣದಲ್ಲಿ ಭಾವಿ ಮಾವ- ಅಳಿಯರಾದ ಸುನೀಲ್- ರಾಹುಲ್ ಆಗಾಗ ತಮಾಷೆಯ ಸಂಭಾಷಣೆಗಳನ್ನು ಕಾಮೆಂಟ್​ಗಳ ಮೂಲಕ ನಡೆಸುತ್ತಿರುತ್ತಾರೆ. ಇದೀಗ ರಾಹುಲ್ ಸಂದರ್ಶನದಲ್ಲಿ ಸುನೀಲ್ ಶೆಟ್ಟಿ ಬಗ್ಗೆ ಮಾತನಾಡಿದ್ದಾರೆ. ಜತೆಗೆ ಅವರೊಂದಿಗೆ ಜತೆ ವಾದ ಮಾಡುವ ಸಂದರ್ಭಗಳ ಬಗ್ಗೆಯೂ ಹೇಳಿಕೊಂಡಿದ್ದಾರೆ.

ಸುನೀಲ್ ಶೆಟ್ಟಿ ರಾಹುಲ್​ಗೆ ಸದಾ ಫಿಟ್​ನೆಸ್ ಬಗ್ಗೆ ಗಮನ ಹರಿಸುವಂತೆ ಹೇಳುತ್ತಿರುತ್ತಾರಂತೆ. ಸುನೀಲ್ ಶೆಟ್ಟಿಗೆ ಈಗ 60ರ ಪ್ರಾಯ. ಆದರೆ ಅವರು ಈ ವಯಸ್ಸಿನಲ್ಲಿ ಯುವಕರೂ ನಾಚುವಂತೆ ದೇಹವನ್ನು ಕಟ್ಟುಮಸ್ತಾಗಿ ಇಟ್ಟುಕೊಂಡಿದ್ದಾರೆ. ಸಹಜವಾಗಿಯೆ ಫಿಟ್​ನೆಸ್, ತಿನ್ನುವ ಆಹಾರ, ಜೀವನ ಶೈಲಿಯ ಬಗ್ಗೆ ಅವರಿಗೆ ಅಪಾರ ಕಾಳಜಿ ಇದೆ. ರಾಹುಲ್​ಗೂ ಈ ಬಗ್ಗೆ ಸುನೀಲ್ ಸದಾ ಎಚ್ಚರಿಸುತ್ತಿರುತ್ತಾರಂತೆ.

ಗೌರವ್ ಕಪೂರ್​ರೊಂದಿಗಿನ ಸಂದರ್ಶನದಲ್ಲಿ ರಾಹುಲ್ ಈ ಬಗ್ಗೆ ಮಾತನಾಡಿದ್ದಾರೆ. ಸುನೀಲ್ ಶೆಟ್ಟಿಗಿರುವ ಕ್ರಿಕೆಟ್ ಜ್ಞಾನದ ಬಗ್ಗೆಯೂ ಮಾತನಾಡಿರುವ ರಾಹುಲ್, ‘‘ಇಲ್ಲ, ಅವರು ಕೇವಲ ಕ್ರಿಕೆಟ್ ಫ್ಯಾನ್​​ ಅಲ್ಲ. ಅವರಿಗೆ ಕ್ರಿಕೆಟ್ ಬಗ್ಗೆ ಆಳವಾದ ಜ್ಞಾನವಿದೆ. ಆಟವನ್ನು ಬಹಳ ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ನಮ್ಮ ನಡುವೆ ಕ್ರಿಕೆಟ್ ಬಗ್ಗೆ ಚರ್ಚೆಗಳು ನಡೆಯುತ್ತವೆ. ಕೆಲವೊಮ್ಮೆ ವಾದಗಳೂ ನಡೆಯುತ್ತವೆ’’ ಎಂದಿದ್ದಾರೆ.

ಫಿಟ್​ನೆಸ್ ಬಗ್ಗೆ ಸುನೀಲ್ ಸಲಹೆ:

ಕೆ.ಎಲ್.ರಾಹುಲ್​ಗೆ ಫಿಟ್​ನೆಸ್ ಬಗ್ಗೆ ಸುನೀಲ್ ಶೆಟ್ಟಿ ಹೇಳುತ್ತಲೇ ಇರುತ್ತಾರಂತೆ. ‘‘ನೀನು ಫಿಟ್ ಆಗಿರುವುದು ಸಾಲದು. ಆಗಾಗ ಗಾಯಕ್ಕೆ ತುತ್ತಾಗುತ್ತೀಯ. ಆರೋಗ್ಯಕ್ಕೆ ಅವಶ್ಯಕವಾಗಿದ್ದು ಹಾಗೂ ಅಗತ್ಯವಾಗಿದ್ದನ್ನು ನೀನು ತಿನ್ನುತ್ತಿಲ್ಲ’’ ಎಂದು ಕೆಎಲ್​ಗೆ ಸುನೀಲ್ ಎಚ್ಚರಿಸುತ್ತಿರುತ್ತಾರಂತೆ. ‘‘ಸುನೀಲ್​ ಶೆಟ್ಟಿಯವರಿಗೆ 60 ದಾಟಿದರೂ ಫಿಟ್​ ಆಗಿ ವರ್ಕೌಟ್ ಮಾಡುತ್ತಾರೆ. ಅವರಿಗೆ ಸಾಧ್ಯವಿರುವುದು ನನಗೇಕೆ ಸಾಧ್ಯವಾಗಬಾರದು? ಎಂದು ನಾನು ಯೋಚಿಸುತ್ತಿರುತ್ತೇನೆ’’ ಎಂದಿದ್ದಾರೆ ರಾಹುಲ್.

ಶೆಟ್ಟಿ ಕುಟುಂಬದ ನಂಟಿನ ಬಗ್ಗೆ ಮಾತನಾಡಿರುವ ರಾಹುಲ್, ‘‘ನನ್ನ ಜೀವನದಲ್ಲಿ ಏನು ನಡೆಯುತ್ತಿದೆಯೋ ಅದರ ಬಗ್ಗೆ ಖುಷಿ ಇದೆ. ಸರಳವಾಗಿ ಹೇಳುವುದಾದರೆ, ನನಗೇನು ಬೇಕೋ ಅದು ಆಗುತ್ತಿದೆ’’ ಎಂದು ಸಂತಸ ಹಂಚಿಕೊಂಡಿದ್ದಾರೆ.

ಕೆಲ ಸಮಯದ ಹಿಂದೆ ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ ಮೊದಲ ಚಿತ್ರ ‘ತಡಪ್’ನ ಸ್ಕ್ರೀನಿಂಗ್​​ಗೆ ಕೆಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿ ಆಗಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಬಹಿರಂಗವಾಗಿ ಈರ್ವರೂ ಜತೆಯಾಗಿ ಕಾಣಿಸಿಕೊಂಡಿದ್ದು ಅದೇ ಮೊದಲಾಗಿತ್ತು.

ಇದನ್ನೂ ಓದಿ: RRR Box Office Collection: ಬಾಕ್ಸಾಫೀಸ್​ನಲ್ಲಿ ‘ಆರ್​ಆರ್​ಆರ್​’ ದಾಖಲೆಯ ಓಟ; ₹ 1,000 ಕೋಟಿ ಕ್ಲಬ್​ಗೆ ಇನ್ನೆಷ್ಟು ದೂರ?

ಬಿಗ್​ ಬಾಸ್​ ವೈಷ್ಣವಿ ಗೌಡ ಹೊಸ ಸಿನಿಮಾ ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’; ಇದರಲ್ಲಿದೆ ಡಿಫರೆಂಟ್​ ಕಾನ್ಸೆಪ್ಟ್​​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು