AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್​ ರಾಹುಲ್​-ಸಂಜೀವ್​ ಗೋಯೆಂಕಾ ವಿವಾದ ಅಂತ್ಯ; ಪ್ರತಿಕ್ರಿಯೆ ನೀಡಿದ ಅಥಿಯಾ ಶೆಟ್ಟಿ

ಲಖನೌ ಸೂಪರ್​ ಜೈಂಟ್ಸ್​ ತಂಡದ ಮಾಲಿಕ ಸಂಜೀವ್​ ಗೋಯೆಂಕಾ ಹಾಗೂ ಕ್ಯಾಪ್ಟನ್​ ಕೆಎಲ್​ ರಾಹುಲ್​ ನಡುವೆ ಎದಿದ್ದ ಬಿರುಗಾಳಿ ಈಗ ಶಾಂತವಾಗಿದೆ. ಆ ಬಗ್ಗೆ ಕೆಎಲ್​ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಮುಂದಿನ ವರ್ಷ ಕೆಎಲ್​ ರಾಹುಲ್ ಅವರು ಬೇರೆ ಟೀಮ್​ಗೆ ಆಡಲಿದ್ದಾರೆ ಎಂಬ ಊಹಾಪೋಹ ಹರಡಿತ್ತು. ಅದಕ್ಕೂ ಈಗ ಪೂರ್ಣವಿರಾಮ ಬಿದ್ದಂತೆ ಆಗಿದೆ.

ಕೆಎಲ್​ ರಾಹುಲ್​-ಸಂಜೀವ್​ ಗೋಯೆಂಕಾ ವಿವಾದ ಅಂತ್ಯ; ಪ್ರತಿಕ್ರಿಯೆ ನೀಡಿದ ಅಥಿಯಾ ಶೆಟ್ಟಿ
ಸಂಜೀವ್​ ಗೋಯೆಂಕಾ, ಅಥಿಯಾ ಶೆಟ್ಟಿ, ಕೆಎಲ್​ ರಾಹುಲ್​
ಮದನ್​ ಕುಮಾರ್​
|

Updated on: May 14, 2024 | 5:45 PM

Share

ಈ ಬಾರಿಯ ಇಂಡಿಯನ್​​ ಪ್ರೀಮಿಯರ್​ ಲೀಗ್​ ರೋಚಕ ಹಂತ ತಲುಪಿದೆ. ಈ ನಡುವೆ ಲಖನೌ ಸೂಪರ್​ ಜೈಂಟ್ಸ್​ ತಂಡದ ಕ್ಯಾಪ್ಟನ್​ ಕೆಎಲ್​ ರಾಹುಲ್​ (KL Rahul) ಅಭಿಮಾನಿಗಳು ತೀವ್ರ ಬೇಸರ ಮಾಡಿಕೊಂಡಿದ್ದಾರೆ. ತಂಡ ಮಾಲಿಕ ಸಂಜೀವ್​ ಗೋಯೆಂಕಾ (Sanjiv Goenka) ಜೊತೆ ನಡೆದ ಬಿರುಸಿನ ಮಾತುಕಥೆಯ ದೃಶ್ಯ ವೈರಲ್​ ಆದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ಹತ್ತಾರು ಬಗೆಯ ಚರ್ಚೆ ನಡೆದಿದೆ. ಈ ನಡುವೆ ಕೆಎಲ್​ ರಾಹುಲ್​ ಅವರ ಪತ್ನಿ, ನಟಿ ಅಥಿಯಾ ಶೆಟ್ಟಿ (Athiya Shetty) ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ಒಂದು ಸಾಲನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿನ ಐಪಿಎಲ್​ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್​ ತಂಡದ ಎದುರು ಲಖನೌ ಸೂಪರ್​ ಜೈಂಟ್ಸ್​ ತಂಡ ಹೀನಾಯವಾಗಿ ಸೋಲು ಅನುಭವಿಸಿತು. ಪಂದ್ಯ ಮುಗಿದ ಕೂಡಲೇ ತಂಡದ ಮಾಲಿಕ ಸಂಜೀವ್​ ಗೋಯೆಂಕಾ ಅವರು ಮೈದಾನಕ್ಕೆ ಬಂದು ಕೆಎಲ್​ ರಾಹುಲ್​ ಜೊತೆ ಮಾತಿನ ಚಕಮಕಿ ನಡೆಸಿದರು. ಹತ್ತಾರು ಕ್ಯಾಮೆರಾಗಳ ಎದುರಿನಲ್ಲೇ ತಂಡದ ನಾಯಕನ್ನು ಆ ರೀತಿ ನಡೆಸಿಕೊಂಡಿದ್ದು ಸರಿಯಲ್ಲ ಎಂದು ಕ್ರಿಕೆಟ್​ಪ್ರೇಮಿಗಳು ಕಮೆಂಟ್​ ಮಾಡಿದ್ದಾರೆ.

ಆದರೆ ಈಗ ಸಂಜೀವ್​ ಗೋಯೆಂಕಾ ಮತ್ತು ಕೆಎಲ್​ ರಾಹುಲ್​ ನಡುವಿನ ಜಟಾಪಟಿ ಅಂತ್ಯವಾದಂತಿದೆ. ಸೋಮವಾರ ರಾತ್ರಿ ಸಂಜೀವ್​ ಗೋಯೆಂಕಾ ಅವರು ಕೆಎಲ್​ ರಾಹುಲ್​ ಅವರನ್ನು ಊಟಕ್ಕೆ ಆಹ್ವಾನಿಸಿದ್ದಾರೆ. ಆ ಸಂದರ್ಭದ ಫೋಟೋ ವೈರಲ್​ ಆಗಿದೆ. ಇಬ್ಬರೂ ನಗುನಗುತ್ತಲೇ ಪರಸ್ಪರ ತಬ್ಬಿಕೊಂಡಿದ್ದಾರೆ. ಇದರಿಂದ ಕೆಎಲ್​ ರಾಹುಲ್​ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಇದನ್ನೂ ಓದಿ: ಲಕ್ನೋ ತೊರೆಯುತ್ತಾರಾ ಕೆಎಲ್ ರಾಹುಲ್? ವಿವಾದದ ಬಗ್ಗೆ ಮೌನ ಮುರಿದ ಕೋಚ್

ಅಥಿಯಾ ಶೆಟ್ಟಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ‘ಬಿರುಗಾಳಿ ನಂತರದ ಪ್ರಶಾಂತತೆ’ ಎಂದು ಬರೆದುಕೊಂಡಿದ್ದಾರೆ. ಅಂದರೆ, ಕೆಎಲ್​ ರಾಹುಲ್​ ಹಾಗೂ ಸಂಜೀವ್​ ಗೋಯೆಂಕಾ ನಡುವೆ ಎದ್ದಿದ್ದ ಬಿರುಗಾಳಿ ಈಗ ಶಾಂತವಾಗಿದೆ ಎಂಬ ಅರ್ಥದಲ್ಲೇ ಅವರು ಈ ಸಾಲುಗಳನ್ನು ಬರೆದುಕೊಂಡಿದ್ದಾರೆ ಎಂದು ಅನೇಕರು ಊಹಿಸಿದ್ದಾರೆ. ಅದರ ಸ್ಕ್ರೀನ್​ ಶಾಟ್​ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?