AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್​ ರಾಹುಲ್​-ಸಂಜೀವ್​ ಗೋಯೆಂಕಾ ವಿವಾದ ಅಂತ್ಯ; ಪ್ರತಿಕ್ರಿಯೆ ನೀಡಿದ ಅಥಿಯಾ ಶೆಟ್ಟಿ

ಲಖನೌ ಸೂಪರ್​ ಜೈಂಟ್ಸ್​ ತಂಡದ ಮಾಲಿಕ ಸಂಜೀವ್​ ಗೋಯೆಂಕಾ ಹಾಗೂ ಕ್ಯಾಪ್ಟನ್​ ಕೆಎಲ್​ ರಾಹುಲ್​ ನಡುವೆ ಎದಿದ್ದ ಬಿರುಗಾಳಿ ಈಗ ಶಾಂತವಾಗಿದೆ. ಆ ಬಗ್ಗೆ ಕೆಎಲ್​ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಮುಂದಿನ ವರ್ಷ ಕೆಎಲ್​ ರಾಹುಲ್ ಅವರು ಬೇರೆ ಟೀಮ್​ಗೆ ಆಡಲಿದ್ದಾರೆ ಎಂಬ ಊಹಾಪೋಹ ಹರಡಿತ್ತು. ಅದಕ್ಕೂ ಈಗ ಪೂರ್ಣವಿರಾಮ ಬಿದ್ದಂತೆ ಆಗಿದೆ.

ಕೆಎಲ್​ ರಾಹುಲ್​-ಸಂಜೀವ್​ ಗೋಯೆಂಕಾ ವಿವಾದ ಅಂತ್ಯ; ಪ್ರತಿಕ್ರಿಯೆ ನೀಡಿದ ಅಥಿಯಾ ಶೆಟ್ಟಿ
ಸಂಜೀವ್​ ಗೋಯೆಂಕಾ, ಅಥಿಯಾ ಶೆಟ್ಟಿ, ಕೆಎಲ್​ ರಾಹುಲ್​
ಮದನ್​ ಕುಮಾರ್​
|

Updated on: May 14, 2024 | 5:45 PM

Share

ಈ ಬಾರಿಯ ಇಂಡಿಯನ್​​ ಪ್ರೀಮಿಯರ್​ ಲೀಗ್​ ರೋಚಕ ಹಂತ ತಲುಪಿದೆ. ಈ ನಡುವೆ ಲಖನೌ ಸೂಪರ್​ ಜೈಂಟ್ಸ್​ ತಂಡದ ಕ್ಯಾಪ್ಟನ್​ ಕೆಎಲ್​ ರಾಹುಲ್​ (KL Rahul) ಅಭಿಮಾನಿಗಳು ತೀವ್ರ ಬೇಸರ ಮಾಡಿಕೊಂಡಿದ್ದಾರೆ. ತಂಡ ಮಾಲಿಕ ಸಂಜೀವ್​ ಗೋಯೆಂಕಾ (Sanjiv Goenka) ಜೊತೆ ನಡೆದ ಬಿರುಸಿನ ಮಾತುಕಥೆಯ ದೃಶ್ಯ ವೈರಲ್​ ಆದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ಹತ್ತಾರು ಬಗೆಯ ಚರ್ಚೆ ನಡೆದಿದೆ. ಈ ನಡುವೆ ಕೆಎಲ್​ ರಾಹುಲ್​ ಅವರ ಪತ್ನಿ, ನಟಿ ಅಥಿಯಾ ಶೆಟ್ಟಿ (Athiya Shetty) ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅವರು ಒಂದು ಸಾಲನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿನ ಐಪಿಎಲ್​ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್​ ತಂಡದ ಎದುರು ಲಖನೌ ಸೂಪರ್​ ಜೈಂಟ್ಸ್​ ತಂಡ ಹೀನಾಯವಾಗಿ ಸೋಲು ಅನುಭವಿಸಿತು. ಪಂದ್ಯ ಮುಗಿದ ಕೂಡಲೇ ತಂಡದ ಮಾಲಿಕ ಸಂಜೀವ್​ ಗೋಯೆಂಕಾ ಅವರು ಮೈದಾನಕ್ಕೆ ಬಂದು ಕೆಎಲ್​ ರಾಹುಲ್​ ಜೊತೆ ಮಾತಿನ ಚಕಮಕಿ ನಡೆಸಿದರು. ಹತ್ತಾರು ಕ್ಯಾಮೆರಾಗಳ ಎದುರಿನಲ್ಲೇ ತಂಡದ ನಾಯಕನ್ನು ಆ ರೀತಿ ನಡೆಸಿಕೊಂಡಿದ್ದು ಸರಿಯಲ್ಲ ಎಂದು ಕ್ರಿಕೆಟ್​ಪ್ರೇಮಿಗಳು ಕಮೆಂಟ್​ ಮಾಡಿದ್ದಾರೆ.

ಆದರೆ ಈಗ ಸಂಜೀವ್​ ಗೋಯೆಂಕಾ ಮತ್ತು ಕೆಎಲ್​ ರಾಹುಲ್​ ನಡುವಿನ ಜಟಾಪಟಿ ಅಂತ್ಯವಾದಂತಿದೆ. ಸೋಮವಾರ ರಾತ್ರಿ ಸಂಜೀವ್​ ಗೋಯೆಂಕಾ ಅವರು ಕೆಎಲ್​ ರಾಹುಲ್​ ಅವರನ್ನು ಊಟಕ್ಕೆ ಆಹ್ವಾನಿಸಿದ್ದಾರೆ. ಆ ಸಂದರ್ಭದ ಫೋಟೋ ವೈರಲ್​ ಆಗಿದೆ. ಇಬ್ಬರೂ ನಗುನಗುತ್ತಲೇ ಪರಸ್ಪರ ತಬ್ಬಿಕೊಂಡಿದ್ದಾರೆ. ಇದರಿಂದ ಕೆಎಲ್​ ರಾಹುಲ್​ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಇದನ್ನೂ ಓದಿ: ಲಕ್ನೋ ತೊರೆಯುತ್ತಾರಾ ಕೆಎಲ್ ರಾಹುಲ್? ವಿವಾದದ ಬಗ್ಗೆ ಮೌನ ಮುರಿದ ಕೋಚ್

ಅಥಿಯಾ ಶೆಟ್ಟಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ‘ಬಿರುಗಾಳಿ ನಂತರದ ಪ್ರಶಾಂತತೆ’ ಎಂದು ಬರೆದುಕೊಂಡಿದ್ದಾರೆ. ಅಂದರೆ, ಕೆಎಲ್​ ರಾಹುಲ್​ ಹಾಗೂ ಸಂಜೀವ್​ ಗೋಯೆಂಕಾ ನಡುವೆ ಎದ್ದಿದ್ದ ಬಿರುಗಾಳಿ ಈಗ ಶಾಂತವಾಗಿದೆ ಎಂಬ ಅರ್ಥದಲ್ಲೇ ಅವರು ಈ ಸಾಲುಗಳನ್ನು ಬರೆದುಕೊಂಡಿದ್ದಾರೆ ಎಂದು ಅನೇಕರು ಊಹಿಸಿದ್ದಾರೆ. ಅದರ ಸ್ಕ್ರೀನ್​ ಶಾಟ್​ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ