Suniel Shetty: ತಂದೆ ಸುನೀಲ್ ಶೆಟ್ಟಿ ಹುಟ್ಟುಹಬ್ಬಕ್ಕೆ ವಿಶೇಷ ಚಿತ್ರ ಹಂಚಿಕೊಂಡು ಶುಭಾಶಯ ಕೋರಿದ ಆಥಿಯಾ ಶೆಟ್ಟಿ

Athiya Shetty: ಬಾಲಿವುಡ್​ನ ಖ್ಯಾತ ನಟ ಸುನೀಲ್ ಶೆಟ್ಟಿ ಹುಟ್ಟುಹಬ್ಬಕ್ಕೆ ಅವರ ಮಗಳು, ನಟಿ ಆಥಿಯಾ ಶೆಟ್ಟಿ ಎರಡು ಸುಂದರ ಚಿತ್ರ ಮತ್ತು ಬರಹದೊಂದಿಗೆ ಶುಭಾಶಯ ಕೋರಿದ್ದಾರೆ.

Suniel Shetty: ತಂದೆ ಸುನೀಲ್ ಶೆಟ್ಟಿ ಹುಟ್ಟುಹಬ್ಬಕ್ಕೆ ವಿಶೇಷ ಚಿತ್ರ ಹಂಚಿಕೊಂಡು ಶುಭಾಶಯ ಕೋರಿದ ಆಥಿಯಾ ಶೆಟ್ಟಿ
ಆಥಿಯಾ ಹಂಚಿಕೊಂಡ ಚಿತ್ರ
Follow us
| Updated By: shivaprasad.hs

Updated on:Aug 11, 2021 | 2:53 PM

ಬಾಲಿವುಡ್ ನಟ ಸುನೀಲ್ ಶೆಟ್ಟಿ ಜನ್ಮದಿನಕ್ಕೆ ಮಗಳು ಆಥಿಯಾ ಶೆಟ್ಟಿ ಎರಡು ವಿಶೇಷ ಚಿತ್ರಗಳನ್ನು ಹಂಚಿಕೊಂಡು ಶುಭಾಶಯ ಕೋರಿದ್ದು ಎಲ್ಲರ ಗಮನ ಸೆಳೆದಿದೆ. ಕಪ್ಪು ಬಿಳುಪಿನ ಎರಡು ಚಿತ್ರಗಳನ್ನು ಹಂಚಿಕೊಂಡಿರುವ ಆಥಿಯಾ, ಅದಕ್ಕೆ ಸುಂದರ ಒಕ್ಕಣೆಯನ್ನೂ ಬರೆದು ತಂದೆಗೆ ಶುಭಾಶಯ ಕೋರಿದ್ದಾರೆ. ಮೊದಲ ಚಿತ್ರದಲ್ಲಿ ಆಥಿಯಾ ಮತ್ತು ಸುನೀಲ್ ಇತ್ತೀಚೆಗೆ ತೆಗೆಸಿಕೊಂಡ ಭಾವಚಿತ್ರವಿದ್ದರೆ, ಮತ್ತೊಂದರಲ್ಲಿ ಆಥಿಯಾ ಬಾಲ್ಯದಲ್ಲಿರುವಾಗ ಆಕೆಯನ್ನು ಕರೆದುಕೊಂಡ ಸುನೀಲ್ ಅವರ ಚಿತ್ರವಿದೆ.

ನಟ ಸುನೀಲ್ ಶೆಟ್ಟಿ ಇಂದು (ಆಗಸ್ಟ್ 11) 60ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.  ಆಥಿಯಾ ಹಂಚಿಕೊಂಡ ಪೋಸ್ಟ್​ನಲ್ಲಿ ತಂದೆಯಾಗಿ ಸುನೀಲ್ ಶೆಟ್ಟಿ ಹಂಚಿಕೊಂಡ ಪ್ರೀತಿಗೆ, ಸಮಯಕ್ಕೆ ಧನ್ಯವಾದಗಳನ್ನು ತಿಳಿಸಿದ್ದು, ಅವರನ್ನು ಪಡೆಯುವುದಕ್ಕೆ ತಾನು ಪುಣ್ಯ ಮಾಡಿದ್ದೆ ಎಂದು ಬರೆದುಕೊಂಡಿದ್ದಾರೆ. ಹಾಗೆಯೇ ಆದರ್ಶ ವ್ಯಕ್ತಿಯಾಗಿ ನಿಂತು, ಅವರನ್ನು ಪೂರ್ಣವಾಗಿ ಬೆಂಬಲಿಸಿದ್ದಕ್ಕೆ ಆಥಿಯಾ ಕೃತಜ್ಞತೆ ಸಲ್ಲಿಸಿದ್ದಾರೆ.

ಆಥಿಯಾ ಶೆಟ್ಟಿ ಹಂಚಿಕೊಂಡ ಪೋಸ್ಟ್:

ಸದ್ಯ ಆಥಿಯಾ ಶೆಟ್ಟಿ ಲಂಡನ್​ನಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಕೆ.ಎಲ್.ರಾಹುಲ್ ಅವರೊಂದಿಗೆ ಆಥಿಯಾ ತೆರಳಿದ್ದು, ಅಲ್ಲಿ ಸುತ್ತಾಡುತ್ತಿರುವ ಚಿತ್ರಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಕೆ.ಎಲ್.ರಾಹುಲ್ ಜನ್ಮದಿನಕ್ಕೆ ಆಥಿಯಾ ಶುಭ ಕೋರಿದ್ದಾಗ, ಸುನೀಲ್ ಶೆಟ್ಟಿ ಅದಕ್ಕೆ ಕಾಮೆಂಟ್ ಮಾಡಿದ್ದು ಸುದ್ದಿಯಾಗಿತ್ತು. ಮಗಳು ಆಥಿಯಾ ಹಾಗೂ ರಾಹುಲ್ ಜೊತೆ ನಿಂತಿದ್ದ ಫೊಟೊಕ್ಕೆ ಸುನೀಲ್ ನಿಜವಾಗಿಯೂ ಎಂದು ಕಾಮೆಂಟ್ ಮಾಡಿದ್ದರು. ಅಲ್ಲಿಂದ ರಾಹುಲ್ ಹಾಗೂ ಆಥಿಯಾ ಜೊತೆಯಲ್ಲಿ ಸುತ್ತಾಡುತ್ತಿದ್ದಾರೆ ಎಂಬ ಸುದ್ದಿ ಅಧಿಕೃತವಾದಂತಾಗಿತ್ತು.

ಇದನ್ನೂ ಓದಿ:

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

(Athiya Shetty wishes to her father Suniel Shetty on birthday with a long note and two beautiful photos)

Published On - 2:52 pm, Wed, 11 August 21

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ