AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ

ಚಾಕು ಇರಿತದಿಂದ ಸೈಫ್ ಅಲಿ ಖಾನ್ ಅವರಿಗೆ ಗಂಭೀರ ಗಾಯಗಳು ಆಗಿವೆ. ಈ ಘಟನೆ ಬಳಿಕ ಆತಂಕ ಹೆಚ್ಚಾಗಿದೆ. ಶಂಕಿತ ವ್ಯಕ್ತಿಯು ಅಪಾರ್ಟ್​ಮೆಂಟ್​ ಮೆಟ್ಟಿಲುಗಳನ್ನು ಹತ್ತುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಆತನ ಗುರುತು ಪತ್ತೆ ಆಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ
Suspect, Saif Ali Khan
ಮದನ್​ ಕುಮಾರ್​
|

Updated on: Jan 16, 2025 | 6:15 PM

Share

ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಕೂಡ ಲಭ್ಯವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್​ಮೆಂಟ್​ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ. ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದರು. ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್​ ಮನೆಯ ಕೆಲಸದವರು. ಕೂಡಲೇ ಅವರು ಸೈಫ್​ ಅಲಿ ಖಾನ್​ ಅವರನ್ನು ಎಚ್ಚರಿಸಿದರು. ಈ ವೇಳೆ ಆಕ್ರಮಣ ಮಾಡಿದ ದರೋಡೆಕೋರನು ಸೈಫ್ ಅಲಿ ಖಾನ್​ಗೆ 6 ಬಾರಿ ಚಾಕುವಿನಿಂದ ತಿವಿದಿದ್ದಾನೆ. ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗೊಳಿಸಿದ್ದಾನೆ. ಕೂಡಲೇ ಸೈಫ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: ಹೃದ್ರೋಗ ತಜ್ಞರ ಸಮ್ಮುಖದಲ್ಲಿ ಸೈಫ್ ಅಲಿ ಖಾನ್​ಗೆ ಸರ್ಜರಿ; ಆರೋಗ್ಯ ಸ್ಥಿರ, ಅಪಾಯದಿಂದ ಪಾರು: ಲೀಲಾವತಿ ಆಸ್ಪತ್ರೆ ವೈದ್ಯರು

ಈ ಘಟನೆ ಬಗ್ಗೆ ಅನೇಕ ಅನುಮಾನಗಳು ಮೂಡಿವೆ. ಸೈಫ್ ಕುಟುಂಬದವರು ವಾಸವಾಗಿರುವ ಅಪಾರ್ಟ್​ಮೆಂಟ್​ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲವೇ? ದರೋಡೆಗೆ ಯತ್ನಿಸಿದ ವ್ಯಕ್ತಿಗಳ ಹಿನ್ನೆಲೆ ಏನು ಎಂಬ ಪ್ರಶ್ನೆ ಎದ್ದಿದೆ. ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಬೆನ್ನಿನಲ್ಲಿ ಇದ್ದ ಚಾಕು ಹೊರತೆಗೆಯಲಾಗಿದೆ. ಎಡಗೈ ಮತ್ತು ಕುತ್ತಿಗೆ ಭಾಗಕ್ಕೆ ಪ್ಲಾಸ್ಟಿಕ್ ಸರ್ಜರಿ ತಂಡವರು ಚಿಕಿತ್ಸೆ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?