AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ

ಹಲ್ಲೆ ಘಟನೆ ಕುರಿತಂತೆ ನಟಿ ರವೀನಾ ಟಂಡನ್​ ಮೇಲೆ ಕೇಳಿಬಂದ ಆರೋಪಗಳು ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿದರು. ಆ ನಂತರ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ನಟಿ ಮನವಿ ಮಾಡಿದರು. ಆದರೆ ಡಿಲೀಟ್​ ಮಾಡಲು ಆತ ಒಪ್ಪಲಿಲ್ಲ ಎನ್ನಲಾಗಿದೆ. ಹಾಗಾಗಿ ಕಾನೂನಿನ ಮೂಲಕ ಆತನಿಗೆ ಬುದ್ಧಿ ಕಲಿಸಲು ರವೀನಾ ಟಂಡನ್​ ಈಗ ಮುಂದಾಗಿದ್ದಾರೆ.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ
ರವೀನಾ ಟಂಡನ್​
Follow us
ಮದನ್​ ಕುಮಾರ್​
|

Updated on: Jun 14, 2024 | 5:28 PM

ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟಿ ರವೀನಾ ಟಂಡನ್​ (Raveena Tandon) ಅವರ ವಿಡಿಯೋ ವೈರಲ್​ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಆ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಮಾನನಷ್ಟ ಕೇಸ್​ (Defamation Case) ಹಾಕಲಾಗಿದೆ. ಅಷ್ಟಕ್ಕೂ, ನೈಜ ಘಟನೆಯ ವಿಡಿಯೋವನ್ನು (Raveena Tandon Viral Video) ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ಮಾನನಷ್ಟ ಮೊಕದ್ದಮೆ ಹಾಕಿದ್ದು ಯಾಕೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

ಕೇವಲ ರವೀನಾ ಟಂಡನ್​ ಅವರ ವಿಡಿಯೋವನ್ನು ಪೋಸ್ಟ್​ ಮಾಡಿದ್ದಕ್ಕೆ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ಆ ವಿಡಿಯೋದ ಜೊತೆ ನೀಡಿದ ಕ್ಯಾಪ್ಷನ್​ನಿಂದ ನಟಿಗೆ ಸಿಟ್ಟು ಬಂದಿದೆ. ರವೀನಾ ಟಂಡನ್​ ಅವರು ಮದ್ಯಪಾನ ಮಾಡಿದ್ದಾರೆ, ರ‍್ಯಾಶ್​ ಡ್ರೈವಿಂಗ್​ ಮಾಡಿದ್ದಾರೆ ಹಾಗೂ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ಯಾಪ್ಷನ್​ನಲ್ಲಿ ಆರೋಪಿಸಲಾಗಿತ್ತು.

ರವೀನಾ ಟಂಡನ್​ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್​ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್​ ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ಮುಂಬೈನ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಘಟನೆ ಕುರಿತು ಅವರು ಕೆಲವು ದಿನಗಳ ಬಳಿಕ ಇನ್​ಸ್ಟಾಗ್ರಾಮ್​ ಸೋರಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ‘ನಿಮ್ಮೆಲ್ಲರ ಅಪಾರವಾದ ಬೆಂಬಲ, ಪ್ರೀತಿ ಹಾಗೂ ನಂಬಿಕೆಗೆ ಧನ್ಯವಾದಗಳು. ಈ ಕಥೆಯ ನೀತಿ ಏನು? ಈಗಲೇ ಡ್ಯಾಶ್​ಕ್ಯಾಮ್​ ಹಾಗೂ ಸಿಸಿಟಿವಿ ಹಾಕಿಸಿಕೊಳ್ಳಿ’ ಎಂದು ರವೀನಾ ಟಂಡನ್​ ಬರೆದುಕೊಂಡಿದ್ದರು. ಆ ಮೂಲಕ ತಮ್ಮ ಅಭಿಮಾನಿಗಳಿಗೆ, ಆಪ್ತರಿಗೆ ರವೀನಾ ಕಿವಿಮಾತು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು