ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ

ಹಲ್ಲೆ ಘಟನೆ ಕುರಿತಂತೆ ನಟಿ ರವೀನಾ ಟಂಡನ್​ ಮೇಲೆ ಕೇಳಿಬಂದ ಆರೋಪಗಳು ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿದರು. ಆ ನಂತರ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ನಟಿ ಮನವಿ ಮಾಡಿದರು. ಆದರೆ ಡಿಲೀಟ್​ ಮಾಡಲು ಆತ ಒಪ್ಪಲಿಲ್ಲ ಎನ್ನಲಾಗಿದೆ. ಹಾಗಾಗಿ ಕಾನೂನಿನ ಮೂಲಕ ಆತನಿಗೆ ಬುದ್ಧಿ ಕಲಿಸಲು ರವೀನಾ ಟಂಡನ್​ ಈಗ ಮುಂದಾಗಿದ್ದಾರೆ.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ
ರವೀನಾ ಟಂಡನ್​
Follow us
|

Updated on: Jun 14, 2024 | 5:28 PM

ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟಿ ರವೀನಾ ಟಂಡನ್​ (Raveena Tandon) ಅವರ ವಿಡಿಯೋ ವೈರಲ್​ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಆ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಮಾನನಷ್ಟ ಕೇಸ್​ (Defamation Case) ಹಾಕಲಾಗಿದೆ. ಅಷ್ಟಕ್ಕೂ, ನೈಜ ಘಟನೆಯ ವಿಡಿಯೋವನ್ನು (Raveena Tandon Viral Video) ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ಮಾನನಷ್ಟ ಮೊಕದ್ದಮೆ ಹಾಕಿದ್ದು ಯಾಕೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

ಕೇವಲ ರವೀನಾ ಟಂಡನ್​ ಅವರ ವಿಡಿಯೋವನ್ನು ಪೋಸ್ಟ್​ ಮಾಡಿದ್ದಕ್ಕೆ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ಆ ವಿಡಿಯೋದ ಜೊತೆ ನೀಡಿದ ಕ್ಯಾಪ್ಷನ್​ನಿಂದ ನಟಿಗೆ ಸಿಟ್ಟು ಬಂದಿದೆ. ರವೀನಾ ಟಂಡನ್​ ಅವರು ಮದ್ಯಪಾನ ಮಾಡಿದ್ದಾರೆ, ರ‍್ಯಾಶ್​ ಡ್ರೈವಿಂಗ್​ ಮಾಡಿದ್ದಾರೆ ಹಾಗೂ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ಯಾಪ್ಷನ್​ನಲ್ಲಿ ಆರೋಪಿಸಲಾಗಿತ್ತು.

ರವೀನಾ ಟಂಡನ್​ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್​ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್​ ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ಮುಂಬೈನ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಘಟನೆ ಕುರಿತು ಅವರು ಕೆಲವು ದಿನಗಳ ಬಳಿಕ ಇನ್​ಸ್ಟಾಗ್ರಾಮ್​ ಸೋರಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ‘ನಿಮ್ಮೆಲ್ಲರ ಅಪಾರವಾದ ಬೆಂಬಲ, ಪ್ರೀತಿ ಹಾಗೂ ನಂಬಿಕೆಗೆ ಧನ್ಯವಾದಗಳು. ಈ ಕಥೆಯ ನೀತಿ ಏನು? ಈಗಲೇ ಡ್ಯಾಶ್​ಕ್ಯಾಮ್​ ಹಾಗೂ ಸಿಸಿಟಿವಿ ಹಾಕಿಸಿಕೊಳ್ಳಿ’ ಎಂದು ರವೀನಾ ಟಂಡನ್​ ಬರೆದುಕೊಂಡಿದ್ದರು. ಆ ಮೂಲಕ ತಮ್ಮ ಅಭಿಮಾನಿಗಳಿಗೆ, ಆಪ್ತರಿಗೆ ರವೀನಾ ಕಿವಿಮಾತು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ