AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ

ಹಲ್ಲೆ ಘಟನೆ ಕುರಿತಂತೆ ನಟಿ ರವೀನಾ ಟಂಡನ್​ ಮೇಲೆ ಕೇಳಿಬಂದ ಆರೋಪಗಳು ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿದರು. ಆ ನಂತರ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ನಟಿ ಮನವಿ ಮಾಡಿದರು. ಆದರೆ ಡಿಲೀಟ್​ ಮಾಡಲು ಆತ ಒಪ್ಪಲಿಲ್ಲ ಎನ್ನಲಾಗಿದೆ. ಹಾಗಾಗಿ ಕಾನೂನಿನ ಮೂಲಕ ಆತನಿಗೆ ಬುದ್ಧಿ ಕಲಿಸಲು ರವೀನಾ ಟಂಡನ್​ ಈಗ ಮುಂದಾಗಿದ್ದಾರೆ.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ
ರವೀನಾ ಟಂಡನ್​
ಮದನ್​ ಕುಮಾರ್​
|

Updated on: Jun 14, 2024 | 5:28 PM

Share

ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟಿ ರವೀನಾ ಟಂಡನ್​ (Raveena Tandon) ಅವರ ವಿಡಿಯೋ ವೈರಲ್​ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಆ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಮಾನನಷ್ಟ ಕೇಸ್​ (Defamation Case) ಹಾಕಲಾಗಿದೆ. ಅಷ್ಟಕ್ಕೂ, ನೈಜ ಘಟನೆಯ ವಿಡಿಯೋವನ್ನು (Raveena Tandon Viral Video) ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ಮಾನನಷ್ಟ ಮೊಕದ್ದಮೆ ಹಾಕಿದ್ದು ಯಾಕೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

ಕೇವಲ ರವೀನಾ ಟಂಡನ್​ ಅವರ ವಿಡಿಯೋವನ್ನು ಪೋಸ್ಟ್​ ಮಾಡಿದ್ದಕ್ಕೆ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ಆ ವಿಡಿಯೋದ ಜೊತೆ ನೀಡಿದ ಕ್ಯಾಪ್ಷನ್​ನಿಂದ ನಟಿಗೆ ಸಿಟ್ಟು ಬಂದಿದೆ. ರವೀನಾ ಟಂಡನ್​ ಅವರು ಮದ್ಯಪಾನ ಮಾಡಿದ್ದಾರೆ, ರ‍್ಯಾಶ್​ ಡ್ರೈವಿಂಗ್​ ಮಾಡಿದ್ದಾರೆ ಹಾಗೂ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ಯಾಪ್ಷನ್​ನಲ್ಲಿ ಆರೋಪಿಸಲಾಗಿತ್ತು.

ರವೀನಾ ಟಂಡನ್​ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್​ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್​ ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ಮುಂಬೈನ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಘಟನೆ ಕುರಿತು ಅವರು ಕೆಲವು ದಿನಗಳ ಬಳಿಕ ಇನ್​ಸ್ಟಾಗ್ರಾಮ್​ ಸೋರಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ‘ನಿಮ್ಮೆಲ್ಲರ ಅಪಾರವಾದ ಬೆಂಬಲ, ಪ್ರೀತಿ ಹಾಗೂ ನಂಬಿಕೆಗೆ ಧನ್ಯವಾದಗಳು. ಈ ಕಥೆಯ ನೀತಿ ಏನು? ಈಗಲೇ ಡ್ಯಾಶ್​ಕ್ಯಾಮ್​ ಹಾಗೂ ಸಿಸಿಟಿವಿ ಹಾಕಿಸಿಕೊಳ್ಳಿ’ ಎಂದು ರವೀನಾ ಟಂಡನ್​ ಬರೆದುಕೊಂಡಿದ್ದರು. ಆ ಮೂಲಕ ತಮ್ಮ ಅಭಿಮಾನಿಗಳಿಗೆ, ಆಪ್ತರಿಗೆ ರವೀನಾ ಕಿವಿಮಾತು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ