AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ

ಹಲ್ಲೆ ಘಟನೆ ಕುರಿತಂತೆ ನಟಿ ರವೀನಾ ಟಂಡನ್​ ಮೇಲೆ ಕೇಳಿಬಂದ ಆರೋಪಗಳು ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿದರು. ಆ ನಂತರ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ನಟಿ ಮನವಿ ಮಾಡಿದರು. ಆದರೆ ಡಿಲೀಟ್​ ಮಾಡಲು ಆತ ಒಪ್ಪಲಿಲ್ಲ ಎನ್ನಲಾಗಿದೆ. ಹಾಗಾಗಿ ಕಾನೂನಿನ ಮೂಲಕ ಆತನಿಗೆ ಬುದ್ಧಿ ಕಲಿಸಲು ರವೀನಾ ಟಂಡನ್​ ಈಗ ಮುಂದಾಗಿದ್ದಾರೆ.

ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ
ರವೀನಾ ಟಂಡನ್​
ಮದನ್​ ಕುಮಾರ್​
|

Updated on: Jun 14, 2024 | 5:28 PM

Share

ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟಿ ರವೀನಾ ಟಂಡನ್​ (Raveena Tandon) ಅವರ ವಿಡಿಯೋ ವೈರಲ್​ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಆ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಮಾನನಷ್ಟ ಕೇಸ್​ (Defamation Case) ಹಾಕಲಾಗಿದೆ. ಅಷ್ಟಕ್ಕೂ, ನೈಜ ಘಟನೆಯ ವಿಡಿಯೋವನ್ನು (Raveena Tandon Viral Video) ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಕ್ಕೆ ಮಾನನಷ್ಟ ಮೊಕದ್ದಮೆ ಹಾಕಿದ್ದು ಯಾಕೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

ಕೇವಲ ರವೀನಾ ಟಂಡನ್​ ಅವರ ವಿಡಿಯೋವನ್ನು ಪೋಸ್ಟ್​ ಮಾಡಿದ್ದಕ್ಕೆ ಆ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ಆ ವಿಡಿಯೋದ ಜೊತೆ ನೀಡಿದ ಕ್ಯಾಪ್ಷನ್​ನಿಂದ ನಟಿಗೆ ಸಿಟ್ಟು ಬಂದಿದೆ. ರವೀನಾ ಟಂಡನ್​ ಅವರು ಮದ್ಯಪಾನ ಮಾಡಿದ್ದಾರೆ, ರ‍್ಯಾಶ್​ ಡ್ರೈವಿಂಗ್​ ಮಾಡಿದ್ದಾರೆ ಹಾಗೂ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕ್ಯಾಪ್ಷನ್​ನಲ್ಲಿ ಆರೋಪಿಸಲಾಗಿತ್ತು.

ರವೀನಾ ಟಂಡನ್​ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್​ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್​ ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ಮುಂಬೈನ ಬೀದಿಯಲ್ಲಿ ರವೀನಾ ಟಂಡನ್​ ಮೇಲೆ ನಡೆದ ಹಲ್ಲೆ ಘಟನೆ ಕುರಿತು ಅವರು ಕೆಲವು ದಿನಗಳ ಬಳಿಕ ಇನ್​ಸ್ಟಾಗ್ರಾಮ್​ ಸೋರಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ‘ನಿಮ್ಮೆಲ್ಲರ ಅಪಾರವಾದ ಬೆಂಬಲ, ಪ್ರೀತಿ ಹಾಗೂ ನಂಬಿಕೆಗೆ ಧನ್ಯವಾದಗಳು. ಈ ಕಥೆಯ ನೀತಿ ಏನು? ಈಗಲೇ ಡ್ಯಾಶ್​ಕ್ಯಾಮ್​ ಹಾಗೂ ಸಿಸಿಟಿವಿ ಹಾಕಿಸಿಕೊಳ್ಳಿ’ ಎಂದು ರವೀನಾ ಟಂಡನ್​ ಬರೆದುಕೊಂಡಿದ್ದರು. ಆ ಮೂಲಕ ತಮ್ಮ ಅಭಿಮಾನಿಗಳಿಗೆ, ಆಪ್ತರಿಗೆ ರವೀನಾ ಕಿವಿಮಾತು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?