AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?

Ayush Sharma | Salman Khan: ಸಲ್ಮಾನ್​ ಖಾನ್​ ಮತ್ತು ಆಯುಷ್​​ ಶರ್ಮಾ ನಡುವೆ ಉತ್ತಮ ಬಾಂಧವ್ಯ ಇತ್ತು. ಆದರೆ ಈಗ ಕಿರಿಕ್​ ಶುರುವಾಗಿದೆ ಎಂದು ವರದಿ ಆಗಿದೆ.

ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
ಸಲ್ಮಾನ್​ ಖಾನ್​. ಅರ್ಪಿತಾ ಖಾನ್​, ಆಯುಶ್​ ಶರ್ಮಾ
TV9 Web
| Edited By: |

Updated on: May 22, 2022 | 9:09 AM

Share

ಇತ್ತೀಚಿನ ವರ್ಷಗಳಲ್ಲಿ ಸಲ್ಮಾನ್​ ಖಾನ್​ (Salman Khan) ಅವರ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ. ಹಾಗಾಗಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಾಗಿದೆ. ಸಲ್ಮಾನ್​ ಖಾನ್​ ನಟಿಸುತ್ತಿರುವ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ಕಾರಣಗಳಿಂದಾಗಿ ಈ ಚಿತ್ರ ಸುದ್ದಿ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ನಟಿ ಪೂಜಾ ಹೆಗ್ಡೆ ಅವರು ‘ಕಭಿ ಈದ್​ ಕಭಿ ದಿವಾಲಿ’ (Kabhi Eid Kabhi Diwali) ಸಿನಿಮಾದ ಶೂಟಿಂಗ್ ಆರಂಭಿಸಿದರು. ಇದೇ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ತಂಗಿ ಅರ್ಪಿತಾ ಖಾನ್​ ಅವರ ಗಂಡ ಆಯುಷ್​​ ಶರ್ಮಾ ಕೂಡ ನಟಿಸುತ್ತಿದ್ದಾರೆ. ಆದರೆ ಈಗ ಈ ಸಿನಿಮಾದ ಬಗ್ಗೆ ಕೆಲವು ಅಚ್ಚರಿಯ ಮಾಹಿತಿ ಕೇಳಿಬರುತ್ತಿವೆ. ಚಿತ್ರತಂಡದ ಜೊತೆ ಕಿರಿಕ್​ ಆಗಿದ್ದರಿಂದ ಆಯುಷ್​​ ಶರ್ಮಾ (Ayush Sharma) ಅವರು ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ತಂಡದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈ ಬೆಳವಣಿಗೆ ಬಗ್ಗೆ ಮೂಲಗಳು ತಿಳಿಸಿವೆ ಎಂದು ‘ಬಾಲಿವುಡ್​ ಹಂಗಾಮ’ ವರದಿ ಮಾಡಿದೆ.

ಸಹೋದರಿ ಅರ್ಪಿತಾ ಖಾನ್​ ಅವರ ಗಂಡ ಆಯುಷ್​ ಶರ್ಮಾ ಜೊತೆಗೆ ಸಲ್ಮಾನ್​ ಖಾನ್​ ಅವರಿಗೆ ಉತ್ತಮ ಬಾಂಧವ್ಯ ಇದೆ. ಈ ಹಿಂದೆ ಆಯುಷ್​​ ಶರ್ಮಾ ನಟಿಸಿದ್ದ ಮೊದಲ ಚಿತ್ರ ‘ಲವ್​ ಯಾತ್ರಿ’ ನಿರ್ಮಾಣ ಆಗಿದ್ದೇ ಸಲ್ಮಾನ್​ ಖಾನ್​ ಅವರ ಬ್ಯಾನರ್​ ಮೂಲಕ. ಆಯುಷ್​​ ಶರ್ಮಾ ಅವರ ಎರಡನೇ ಸಿನಿಮಾ ‘ಅಂತಿಮ್​’ ಕೂಡ ಸಲ್ಲು ನಿರ್ಮಾಣದಲ್ಲಿ ಮೂಡಿಬಂತು. ಆ ಚಿತ್ರದಲ್ಲಿ ಬಾಮೈದನ ಜೊತೆ ಸಲ್ಮಾನ್​ ಖಾನ್​ ಕೂಡ ನಟಿಸಿದರು. ಈಗ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದಲ್ಲಿ ಆಯುಷ್​ ಶರ್ಮಾ ಮತ್ತು ಸಲ್ಮಾನ್​ ಖಾನ್​ ಒಟ್ಟಾಗಿ ನಟಿಸುತ್ತಿದ್ದರು. ಆದರೆ ಸಿನಿಮಾ ತಂಡದಿಂದಲೇ ಆಯುಷ್​​ ಶರ್ಮಾ ಹೊರನಡೆದಿದ್ದಾರೆ ಎಂಬ ಸುದ್ದಿ ಈಗ ಹರಡಿದೆ.

ಇದನ್ನೂ ಓದಿ: ‘ಇನ್ಮುಂದೆ ನಾನು ಒಂಟಿ ಅಲ್ಲ’ ಎಂದು ಸಲ್ಮಾನ್​ ಖಾನ್​ ಕಡೆ ಕೈ ತೋರಿಸಿ ಹೇಳಿದ ಕಂಗನಾ; ಫ್ಯಾನ್ಸ್​ ಫುಲ್​ ಖುಷ್​​

ಇದನ್ನೂ ಓದಿ
Image
ಎಲ್ಲರ ಎದುರು ಸಲ್ಮಾನ್​ ಖಾನ್​ಗೆ ಕಿಸ್​ ಮಾಡಿದ ಸಿದ್ದಾರ್ಥ್​ ಶುಕ್ಲಾ ಪ್ರೇಯಸಿ ಶೆಹನಾಜ್ ಗಿಲ್​; ವಿಡಿಯೋ ವೈರಲ್​
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?
Image
ಅವರಂತೆ ಸಿನಿಮಾ ಮಾಡೋಕೆ ನಮ್ಮ ಬಳಿ ಸಾಧ್ಯವಾಗುತ್ತಿಲ್ಲ ಎಂದು ಒಪ್ಪಿಕೊಂಡ ಸಲ್ಮಾನ್​ ಖಾನ್
Image
‘ಸಲ್ಮಾನ್​ ಖಾನ್​ಗೆ ತಂಗಿ ಆಗಲು ಯಾರಿಗೂ ಇಷ್ಟವಿಲ್ಲ’; ತೆರೆ ಹಿಂದಿನ ಸತ್ಯ ತೆರೆದಿಟ್ಟ ನಟಿ ಸ್ವರಾ ಭಾಸ್ಕರ್​

‘ಕ್ರಿಯೇಟಿವ್​ ವಿಚಾರಕ್ಕೆ ಆಯುಷ್​​ ಶರ್ಮಾ ಮತ್ತು ‘ಸಲ್ಮಾನ್​ ಖಾನ್​ ಫಿಲ್ಮ್ಸ್​’ ಬ್ಯಾನರ್​ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗಿದೆ. ಈ ಮೊದಲು ಸಾಜಿದ್​ ನಾಡಿಯದ್ವಾಲ ಅವರು ಕೂಡ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗಿದ್ದರು. ಆದರೆ ಈಗ ಅವರು ಕೂಡ ಹಿಂದೆ ಸರಿದಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಾಗಾಗಿ ಸಲ್ಮಾನ್​ ಖಾನ್​ ಒಬ್ಬರೇ ಈ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದಾರೆ ಎನ್ನಲಾಗುತ್ತಿದೆ. ಚಿತ್ರತಂಡವೇ ಈ ಬಗ್ಗೆ ಸ್ಪಷ್ಟನೆ ನೀಡುವವರೆಗೂ ಸತ್ಯ ಏನೆಂಬುದು ಅಭಿಮಾನಿಗಳಿಗೆ ತಿಳಿಯುವುದು ಕಷ್ಟ. ಹಾಗಾಗಿ ಸಲ್ಮಾನ್​ ಖಾನ್​ ಅಥವಾ ಆಯುಷ್​​ ಶರ್ಮಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲಿ ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್

2022ರ ಡಿಸೆಂಬರ್​ಗೆ ರಿಲೀಸ್​ ಆಗಬೇಕು ಎಂಬ ಗುರಿ ಇಟ್ಟುಕೊಂಡು ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾದ ಶೂಟಿಂಗ್​ ಮಾಡಲಾಗುತ್ತಿತ್ತು. ಆದರೆ ಈಗ ಆಯುಷ್​​ ಶರ್ಮಾ ಚಿತ್ರತಂಡದಿಂದ ಹೊರನಡೆದಿರುವುದು ನಿಜವೇ ಹೌದಾದರೆ ರಿಲೀಸ್​ ದಿನಾಂಕ ಮುಂದೂಡಲ್ಪಡುವ ಸಾಧ್ಯತೆ ಹೆಚ್ಚಿದೆ. ಆಯುಷ್​​ ಶರ್ಮಾ ಬದಲಿಗೆ ಬೇರೆ ಯಾವ ನಟನಿಗೆ ಮಣೆ ಹಾಕಲಾಗುತ್ತದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಆ ಪಾತ್ರಕ್ಕೆ ಹೊಸದಾಗಿ ಶೂಟಿಂಗ್​ ಮಾಡಬೇಕಾದ ಅನಿವಾರ್ಯತೆ ಕೂಡ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ