AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ನಟಿಸಲ್ವಾ ಆಯುಷ್ಮಾನ್​ ಖುರಾನಾ? ಎದುರಾಯ್ತು ವಿಘ್ನ

ಕ್ರಿಕೆಟರ್​ಗಳ ಬಯೋಪಿಕ್​ನಲ್ಲಿ ನಟಿಸುವ ಅವಕಾಶ ಸಿಕ್ಕರೆ ಕಲಾವಿದರು ಖುಷಿಯಿಂದ ಒಪ್ಪಿಕೊಳ್ಳುತ್ತಾರೆ. ಆಯುಷ್ಮಾನ್​ ಖುರಾನಾ ಅವರು ಸೌರವ್​ ಗಂಗೂಲಿ ಪಾತ್ರದಲ್ಲಿ ಅಭಿನಯಿಸಲು ಉತ್ಸುಕರಾಗಿದ್ದರು. ಆದರೆ ಈಗ ಅವರು ಮನಸ್ಸು ಬದಲಾಯಿಸಿದ್ದಾರೆ ಎಂದು ಸುದ್ದಿ ಹಬ್ಬಿದೆ. ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ.

ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ನಟಿಸಲ್ವಾ ಆಯುಷ್ಮಾನ್​ ಖುರಾನಾ? ಎದುರಾಯ್ತು ವಿಘ್ನ
ಆಯುಷ್ಮಾನ್​ ಖುರಾನಾ, ಸೌರವ್​ ಗಂಗೂಲಿ
Follow us
ಮದನ್​ ಕುಮಾರ್​
|

Updated on: Aug 22, 2024 | 7:04 PM

ಯಾವುದೇ ಪಾತ್ರವನ್ನು ಕೊಟ್ಟರೂ ನಟ ಆಯುಷ್ಮಾನ್​ ಖುರಾನಾ ಅವರು ಅದಕ್ಕೆ ಜೀವ ತುಂಬುತ್ತಾರೆ. ಈಗಾಗಲೇ ಅವರು ‘ಡ್ರೀಮ್​ ಗರ್ಲ್​’, ‘ಬಾಲಾ’ ಮುಂತಾದ ಸಿನಿಮಾಗಳ ಚಾಲೆಂಜಿಂಗ್​ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಳ್ಳೊಳ್ಳೆಯ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಅವುಗಳಲ್ಲಿ ಪ್ರಮುಖವಾದದ್ದು ಸೌರವ್​ ಗಂಗೂಲಿ ಬಯೋಪಿಕ್​. ಹೌದು, ಬಹಳ ಹಿಂದೆಯೇ ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿತ್ತು. ಬಯೋಪಿಕ್​ನಲ್ಲಿ ಸೌರವ್​ ಗಂಗೂಲಿಯ ಪಾತ್ರವನ್ನು ಆಯುಷ್ಮಾನ್​ ಖುರಾನಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆ ಪ್ರಾಜೆಕ್ಟ್​ಗೆ ವಿಘ್ನ ಎದುರಾದಂತಿದೆ. ಈ ಸಿನಿಮಾದಿಂದ ಆಯುಷ್ಮಾನ್​ ಖುರಾನಾ ಹೊರ ನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ನಿರ್ದೇಶಕ ಲವ್ ರಂಜನ್​ ಅವರು ಸೌರವ್​ ಗಂಗೂಲಿ ಜೀವನಾಧಾರಿತ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. 2021ರಿಂದಲೂ ಆಯುಷ್ಮಾನ್​ ಖುರಾನಾ ಜೊತೆ ಅವರು ಮಾತುಕಥೆ ನಡೆಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಯುಷ್ಮಾನ್​ ಖುರಾನಾ ಅವರು 2024ರ ಕೊನೆಯಲ್ಲಿ ಈ ಚಿತ್ರದ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಒಂದು ಸಮಸ್ಯೆ ಎದುರಾಗಿದೆ.

ವರದಿಗಳ ಪ್ರಕಾರ, ಆಯುಷ್ಮಾನ್​ ಖುರಾನಾ ಅವರು ಡೇಟ್ಸ್​ ಕೊರತೆಯಿಂದಾಗಿ ಸೌರವ್​ ಗಂಗೂಲಿಯ ಬಯೋಪಿಕ್​ನಿಂದ ಹೊರನಡೆದಿದ್ದಾರೆ. ಅಲ್ಲದೇ, ಈಗಾಗಲೇ ಬಾಲಿವುಡ್​ನಲ್ಲಿ ಬಯೋಪಿಕ್​ಗಳ ಸಂಖ್ಯೆ ಮಿತಿ ಮೀರಿದೆ ಎಂದು ತಮ್ಮ ನಿರ್ಧಾರಕ್ಕೆ ಆಯುಷ್ಮಾನ್​ ಕಾರಣ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಚಿತ್ರತಂಡಕ್ಕೆ ಶಾಕ್​ ಆಗಿದೆ. ಹೊಸದಾಗಿ ಪಾತ್ರವರ್ಗದ ಆಯ್ಕೆ ನಡೆಯಬೇಕಿದೆ. ಸೌರವ್​ ಗಂಗೂಲಿ ಪಾತ್ರಕ್ಕೆ ಹೊಸದಾಗಿ ಯಾವ ನಟ ಆಯ್ಕೆ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಗಂಗೂಲಿ ಪಾತ್ರದಲ್ಲಿ ಆಯುಷ್ಮಾನ್​ ಖುರಾನಾ ಅವರನ್ನು ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ.

ಇದನ್ನೂ ಓದಿ: ಮೊದಲ ದಲಿತ ಕ್ರಿಕೇಟಿಗನ ಬಗ್ಗೆ ಬಯೋಪಿಕ್; ಮುಖ್ಯಭೂಮಿಕೆಯಲ್ಲಿ ಅಜಯ್ ದೇವಗನ್

ಇನ್ನೊಂದು ಮೂಲದ ಪ್ರಕಾರ, ಆಯುಷ್ಮಾನ್​ ಖುರಾನಾ ಅವರು ಈ ರೀತಿಯ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅವರಿನ್ನೂ ಪೂರ್ತಿ ಸ್ಕ್ರಿಪ್ಟ್​ ನರೇಷನ್​ ಕೇಳುವುದು ಬಾಕಿ ಇದೆ. ಹಾಗಿದ್ದರೂ ಕೂಡ ಗಾಸಿಪ್​ ಹಬ್ಬಿದೆ. ಬೆಂಕಿ ಇಲ್ಲದೇ ಹೊಗೆ ಆಡಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಸ್ವತಃ ಆಯುಷ್ಮಾನ್​ ಖುರಾನಾ ಅವರೇ ಈ ವಿಚಾರಕ್ಕೆ ಸ್ಪಷ್ಟನೆ ನೀಡಿದರೆ ಎಲ್ಲ ಅನುಮಾನಗಳು ಬಗೆಹರಿಯಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್