AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ನಟಿಸಲ್ವಾ ಆಯುಷ್ಮಾನ್​ ಖುರಾನಾ? ಎದುರಾಯ್ತು ವಿಘ್ನ

ಕ್ರಿಕೆಟರ್​ಗಳ ಬಯೋಪಿಕ್​ನಲ್ಲಿ ನಟಿಸುವ ಅವಕಾಶ ಸಿಕ್ಕರೆ ಕಲಾವಿದರು ಖುಷಿಯಿಂದ ಒಪ್ಪಿಕೊಳ್ಳುತ್ತಾರೆ. ಆಯುಷ್ಮಾನ್​ ಖುರಾನಾ ಅವರು ಸೌರವ್​ ಗಂಗೂಲಿ ಪಾತ್ರದಲ್ಲಿ ಅಭಿನಯಿಸಲು ಉತ್ಸುಕರಾಗಿದ್ದರು. ಆದರೆ ಈಗ ಅವರು ಮನಸ್ಸು ಬದಲಾಯಿಸಿದ್ದಾರೆ ಎಂದು ಸುದ್ದಿ ಹಬ್ಬಿದೆ. ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ.

ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ನಟಿಸಲ್ವಾ ಆಯುಷ್ಮಾನ್​ ಖುರಾನಾ? ಎದುರಾಯ್ತು ವಿಘ್ನ
ಆಯುಷ್ಮಾನ್​ ಖುರಾನಾ, ಸೌರವ್​ ಗಂಗೂಲಿ
ಮದನ್​ ಕುಮಾರ್​
|

Updated on: Aug 22, 2024 | 7:04 PM

Share

ಯಾವುದೇ ಪಾತ್ರವನ್ನು ಕೊಟ್ಟರೂ ನಟ ಆಯುಷ್ಮಾನ್​ ಖುರಾನಾ ಅವರು ಅದಕ್ಕೆ ಜೀವ ತುಂಬುತ್ತಾರೆ. ಈಗಾಗಲೇ ಅವರು ‘ಡ್ರೀಮ್​ ಗರ್ಲ್​’, ‘ಬಾಲಾ’ ಮುಂತಾದ ಸಿನಿಮಾಗಳ ಚಾಲೆಂಜಿಂಗ್​ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಳ್ಳೊಳ್ಳೆಯ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಅವುಗಳಲ್ಲಿ ಪ್ರಮುಖವಾದದ್ದು ಸೌರವ್​ ಗಂಗೂಲಿ ಬಯೋಪಿಕ್​. ಹೌದು, ಬಹಳ ಹಿಂದೆಯೇ ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿತ್ತು. ಬಯೋಪಿಕ್​ನಲ್ಲಿ ಸೌರವ್​ ಗಂಗೂಲಿಯ ಪಾತ್ರವನ್ನು ಆಯುಷ್ಮಾನ್​ ಖುರಾನಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆ ಪ್ರಾಜೆಕ್ಟ್​ಗೆ ವಿಘ್ನ ಎದುರಾದಂತಿದೆ. ಈ ಸಿನಿಮಾದಿಂದ ಆಯುಷ್ಮಾನ್​ ಖುರಾನಾ ಹೊರ ನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ನಿರ್ದೇಶಕ ಲವ್ ರಂಜನ್​ ಅವರು ಸೌರವ್​ ಗಂಗೂಲಿ ಜೀವನಾಧಾರಿತ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. 2021ರಿಂದಲೂ ಆಯುಷ್ಮಾನ್​ ಖುರಾನಾ ಜೊತೆ ಅವರು ಮಾತುಕಥೆ ನಡೆಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಯುಷ್ಮಾನ್​ ಖುರಾನಾ ಅವರು 2024ರ ಕೊನೆಯಲ್ಲಿ ಈ ಚಿತ್ರದ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಒಂದು ಸಮಸ್ಯೆ ಎದುರಾಗಿದೆ.

ವರದಿಗಳ ಪ್ರಕಾರ, ಆಯುಷ್ಮಾನ್​ ಖುರಾನಾ ಅವರು ಡೇಟ್ಸ್​ ಕೊರತೆಯಿಂದಾಗಿ ಸೌರವ್​ ಗಂಗೂಲಿಯ ಬಯೋಪಿಕ್​ನಿಂದ ಹೊರನಡೆದಿದ್ದಾರೆ. ಅಲ್ಲದೇ, ಈಗಾಗಲೇ ಬಾಲಿವುಡ್​ನಲ್ಲಿ ಬಯೋಪಿಕ್​ಗಳ ಸಂಖ್ಯೆ ಮಿತಿ ಮೀರಿದೆ ಎಂದು ತಮ್ಮ ನಿರ್ಧಾರಕ್ಕೆ ಆಯುಷ್ಮಾನ್​ ಕಾರಣ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಚಿತ್ರತಂಡಕ್ಕೆ ಶಾಕ್​ ಆಗಿದೆ. ಹೊಸದಾಗಿ ಪಾತ್ರವರ್ಗದ ಆಯ್ಕೆ ನಡೆಯಬೇಕಿದೆ. ಸೌರವ್​ ಗಂಗೂಲಿ ಪಾತ್ರಕ್ಕೆ ಹೊಸದಾಗಿ ಯಾವ ನಟ ಆಯ್ಕೆ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಗಂಗೂಲಿ ಪಾತ್ರದಲ್ಲಿ ಆಯುಷ್ಮಾನ್​ ಖುರಾನಾ ಅವರನ್ನು ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ.

ಇದನ್ನೂ ಓದಿ: ಮೊದಲ ದಲಿತ ಕ್ರಿಕೇಟಿಗನ ಬಗ್ಗೆ ಬಯೋಪಿಕ್; ಮುಖ್ಯಭೂಮಿಕೆಯಲ್ಲಿ ಅಜಯ್ ದೇವಗನ್

ಇನ್ನೊಂದು ಮೂಲದ ಪ್ರಕಾರ, ಆಯುಷ್ಮಾನ್​ ಖುರಾನಾ ಅವರು ಈ ರೀತಿಯ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅವರಿನ್ನೂ ಪೂರ್ತಿ ಸ್ಕ್ರಿಪ್ಟ್​ ನರೇಷನ್​ ಕೇಳುವುದು ಬಾಕಿ ಇದೆ. ಹಾಗಿದ್ದರೂ ಕೂಡ ಗಾಸಿಪ್​ ಹಬ್ಬಿದೆ. ಬೆಂಕಿ ಇಲ್ಲದೇ ಹೊಗೆ ಆಡಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಸ್ವತಃ ಆಯುಷ್ಮಾನ್​ ಖುರಾನಾ ಅವರೇ ಈ ವಿಚಾರಕ್ಕೆ ಸ್ಪಷ್ಟನೆ ನೀಡಿದರೆ ಎಲ್ಲ ಅನುಮಾನಗಳು ಬಗೆಹರಿಯಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ