AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ಬಾಲಿವುಡ್ ಹೀರೋ ಫೈನಲ್? ಐಶ್ವರ್ಯಾ ರಜನಿಕಾಂತ್ ನಿರ್ದೇಶನ

ಈ ಚಿತ್ರಕ್ಕೆ ರಜನಿಕಾಂತ್ ಮಗಳು ಐಶ್ವರ್ಯಾ ನಿರ್ದೇಶನ ಮಾಡುತ್ತಾರೆ ಎನ್ನುವ ಮಾತಿದೆ. ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈಗ ಅವರ ಕೈಗೆ ಬಯೋಪಿಕ್ ನೀಡಲಾಗುತ್ತಿದೆ.

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ಬಾಲಿವುಡ್ ಹೀರೋ ಫೈನಲ್? ಐಶ್ವರ್ಯಾ ರಜನಿಕಾಂತ್ ನಿರ್ದೇಶನ
ಸೌರವ್​ ಗಂಗೂಲಿ-ಐಶ್ವರ್ಯಾ ರಜನಿಕಾಂತ್
Follow us
ರಾಜೇಶ್ ದುಗ್ಗುಮನೆ
|

Updated on: May 31, 2023 | 10:33 AM

ಇತ್ತೀಚೆಗೆ ಬಯೋಪಿಕ್ ಟ್ರೆಂಡ್ ಜೋರಾಗಿದೆ. ಹಲವು ವ್ಯಕ್ತಿಗಳ ಕುರಿತು ಬಯೋಪಿಕ್ ಸಿದ್ಧಗೊಳ್ಳುತ್ತಿದೆ. ಈ ಪೈಕಿ ಅನೇಕ ಸಿನಿಮಾಗಳು ಹಿಟ್ ಆಗಿವೆ. ಈಗ ಭಾರತ ಕಂಡ ಅಪ್ರತಿಮ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ (Sourav Ganguly) ಬಗ್ಗೆ ಬಯೋಪಿಕ್ ಸಿದ್ಧವಾಗುತ್ತಿದೆ. ಟೀಂ ಇಂಡಿಯಾ ನಾಯಕನಾಗಿ, ಬಿಸಿಸಿಐನ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಅವರ ಬಯೋಪಿಕ್ ಮಾಡಲು ಸಿದ್ಧತೆ ನಡೆದಿದೆ. ಸದ್ಯ ಪ್ರೀಪ್ರೊಡಕ್ಷನ್ ಹಂತದಲ್ಲಿ ಈ ಸಿನಿಮಾ ಇದ್ದು, ಶೀಘ್ರವೇ ಸೆಟ್ಟೇರಲಿದೆ. ಸೌರವ್ ಗಂಗೂಲಿ ಪಾತ್ರಕ್ಕೆ ಆಯುಷ್ಮಾನ್ ಖುರಾನ (Ayushmann Khurrana) ಅವರು ನಾಯಕನಾಗಿ ನಟಿಸುತ್ತಿದ್ದಾರೆ ಎಂದು ವರದಿ ಆಗಿದೆ.

ಆಯುಷ್ಮಾನ್ ಖುರಾನ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅವರ ಚಿತ್ರಕ್ಕೆ ಬಂಡವಾಳ ಹೂಡಿದರೆ ಮಿನಿಮಮ್ ಬಿಸ್ನೆಸ್ ಆಗುತ್ತದೆ ಅನ್ನೋದು ನಿರ್ಮಾಪಕರ ನಂಬಿಕೆ. ಹಾಸ್ಯ ಪ್ರಧಾನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ಆಯುಷ್ಮಾನ್​ ಈಗ ದಾದಾ ಬಯೋಪಿಕ್​ನಲ್ಲಿ ಮಿಂಚಲು ರೆಡಿ ಆಗಿದ್ದಾರೆ.

ಆಯುಷ್ಮಾನ್ ಖುರಾನಾ ಜೊತೆ ನಿರ್ಮಾಪಕರು ಈಗಾಗಲೇ ಕೆಲವು ಹಂತದ ಮಾತುಕತೆ ನಡೆಸಿದ್ದಾರೆ. ಕಳೆದ ಕೆಲ ತಿಂಗಳಿಂದ ಚರ್ಚೆ ನಡೆಯುತ್ತಿದೆ. ಆಯುಷ್ಮಾನ್ ಅವರು ಹಲವು ರೀತಿಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಈಗ ಅವರು ಸೌರವ್ ಗಂಗೂಲಿ ಪಾತ್ರಕ್ಕೆ ಹೊಂದಿಕೆ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಐಶ್ವರ್ಯಾ ರಜನಿಕಾಂತ್​ ಮನೆಯಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಇಬ್ಬರ ಬಂಧನ

ಈ ಚಿತ್ರಕ್ಕೆ ರಜನಿಕಾಂತ್ ಮಗಳು ಐಶ್ವರ್ಯಾ ನಿರ್ದೇಶನ ಮಾಡುತ್ತಾರೆ ಎನ್ನುವ ಮಾತಿದೆ. ಐಶ್ವರ್ಯಾ ರಜನಿಕಾಂತ್ ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈಗ ಅವರ ಕೈಗೆ ಬಯೋಪಿಕ್ ನೀಡಲಾಗುತ್ತಿದೆ. ವಿಕ್ರಮಾದಿತ್ಯ ಮೋಟ್ವಾನೆ ಅವರು ಸೌರವ್ ಗಂಗೂಲಿ ಬಯೋಪಿಕ್ ನಿರ್ದೇಶನಕ್ಕೆ ಮೊದಲ ಆಯ್ಕೆ ಆಗಿತ್ತು. ಆದರೆ, ಅವರು ಈ ಪ್ರಾಜೆಕ್ಟ್​ನಿಂದ ಹಿಂದೆ ಸರಿದ ಕಾರಣ ಈ ಬಯೋಪಿಕ್ ಐಶ್ವರ್ಯಾ ಅವರ ಕೈ ಸೇರಿದೆ.

ಈ ಮೊದಲು ತೆರೆಗೆ ಬಂದಿದ್ದ ‘83’ ಸಿನಿಮಾ ಸಾಧಾರಣ ಗಳಿಕೆ ಮಾಡಿತ್ತು. 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಕಥೆಯನ್ನು ಆಧರಿಸಿ ಈ ಚಿತ್ರ ಸಿದ್ಧಗೊಂಡಿತ್ತು. ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು