AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಗೆದ್ದ ಎ.ಹರ್ಷ; ‘ಬಾಘಿ 4’ ಚಿತ್ರದ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?

ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಎ. ಹರ್ಷ ಅವರು ಬಾಲಿವುಡ್‌ನಲ್ಲಿ ತಮ್ಮ ಮೊದಲ ಸಿನಿಮಾ ‘ಬಾಘಿ 4’ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಟೈಗರ್ ಶ್ರಾಫ್ ಅಭಿನಯದ ಈ ಚಿತ್ರವು ಬಿಡುಗಡೆಯ ಮೊದಲ ದಿನವೇ ಭಾರಿ ಗಳಿಕೆ ಮಾಡಿದೆ. ಈ ಯಶಸ್ಸಿನ ಹಿಂದೆ ದಕ್ಷಿಣ ಭಾರತದ ಸಿನಿಮಾ ನಿರ್ಮಾಣ ಶೈಲಿಯ ಪ್ರಭಾವವಿದೆ ಎಂದು ಹೇಳಲಾಗುತ್ತಿದೆ.

ಬಾಲಿವುಡ್​ನಲ್ಲಿ ಗೆದ್ದ ಎ.ಹರ್ಷ; ‘ಬಾಘಿ 4’ ಚಿತ್ರದ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?
ಟೈಗರ್-ಹರ್ಷ
ರಾಜೇಶ್ ದುಗ್ಗುಮನೆ
|

Updated on:Sep 06, 2025 | 3:06 PM

Share

ಕನ್ನಡದ ನಿರ್ದೇಶಕ ಎ.ಹರ್ಷ (A Harsha) ಅವರು ಬಾಲಿವುಡ್​ಗೆ ಹೋಗಿ ಸದ್ದು ಮಾಡಿದ್ದಾರೆ. ಹೌದು, ಅವರ ನಿರ್ದೇಶನದ ‘ಬಾಘಿ 4’ ಸಿನಿಮಾ ಸೆಪ್ಟೆಂಬರ್ 5ರಂದು ರಿಲಿಸ್ ಆಗಿ ಮೆಚ್ಚುಗೆ ಪಡೆದಿದೆ. ನಟ ಟೈಗರ್ ಶ್ರಾಫ್ ಅವರು ಈ ಚಿತ್ರದ ಹೀರೋ. ಟೈಗರ್ ಸಿನಿಮಾ ಎಂದರೆ ಕೇವಲ ಫೈಟ್ ಹಾಗೂ ವೈಲೆನ್ಸ್​ಗಳು ಮಾತ್ರ ಇರುತ್ತಿದ್ದವು. ಆದರೆ, ಈ ಸಿನಿಮಾ ಭಿನ್ನವಾಗಿದೆ ಎಂಬ ಅಭಿಪ್ರಾಯ ಮೂಡಿ ಬಂದಿದೆ. ಈ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ.

‘ಬಾಘಿ ’ ಸಿನಿಮಾ ಸರಣಿಯಲ್ಲಿ ಈಗಾಗಲೇ ನಾಲ್ಕು ಸಿನಿಮಾಗಳು ಬಂದು ಹೋಗಿವೆ. ಮೊದಲ ಪಾರ್ಟ್​ಗಿಂತ ಎರಡನೇ ಪಾರ್ಟ್​ ಚಾರ್ಮ್ ಕಳೆದುಕೊಂಡಿತ್ತು. ಮೂರನೇ ಪಾರ್ಟ್​ ಸಾಧಾರಣ ಎನಿಸಿಕೊಂಡಿತ್ತು. ಆದರೆ, ಬಿಸ್ನೆಸ್ ದೃಷ್ಟಿಯಿಂದ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಹೀಗಾಗಿ, ನಿರ್ಮಾಪಕರು ನಾಲ್ಕನೇ ಪಾರ್ಟ್ ಮಾಡಿದ್ದಾರೆ. ಇದಕ್ಕೆ ಕನ್ನಡದ ನಿರ್ದೇಶಕ ಎ. ಹರ್ಷ ಆ್ಯಕ್ಷನ್ ಹೇಳಿದ್ದಾರೆ. ಅವರು ಬಾಲಿವುಡ್​ನಲ್ಲಿ ಗೆದ್ದಿದ್ದಾರೆ.

‘ಬಾಘಿ 4’ ಸಿನಿಮಾ ಮೊದಲ ದಿನ ಬರೋಬ್ಬರಿ 12 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದೆ. ಬುಕ್ ಮೈ ಶೋನಲ್ಲಿ 8+ರೇಟಿಂಗ್ ಚಿತ್ರಕ್ಕೆ ಸಿಕ್ಕಿದೆ. ಹೀಗಾಗಿ, ಶನಿವಾರ ಹಾಗೂ ಭಾನುವಾರ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಈ ಚಿತ್ರ 100+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದರೆ ಹರ್ಷಗೆ ಬಾಲಿವುಡ್ ಆಫರ್ ಹೆಚ್ಚಲಿದೆ.

ಇದನ್ನೂ ಓದಿ
Image
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ
Image
SIIMA 2025 Telugu: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಅವಾರ್ಡ್
Image
ಸೈಮಾ 2025: ಸುದೀಪ್ ಅತ್ಯುತ್ತಮ ನಟ, ಸಂಪೂರ್ಣ ವಿನ್ನರ್ ಪಟ್ಟಿ
Image
ಬಿಗ್ ಬಾಸ್​ಗೆ ನಿರ್ಮಾಣ ಆಗಿದೆ ಬೇರೆಯದೇ ಮನೆ; ಹೇಗಿದೆ ಈ ಬಾರಿಯ ಸೆಟ್?

ಇದನ್ನೂ ಓದಿ:  ಟೈಗರ್ ಶ್ರಾಫ್​ಗೆ ಸಿನಿಮಾ ನಿರ್ದೇಶಿಸಲಿರುವ ಕನ್ನಡದ ನಿರ್ದೇಶಕ

ದಕ್ಷಿಣ ನಿರ್ದೇಶಕರ ಸಿನಿಮಾ ಮೇಕಿಂಗ್ ಸ್ಟೈಲ್​ಗೂ ಬಾಲಿವುಡ್ ಸಿನಿಮಾ ನಿರ್ದೇಶಕರ ಶೈಲಿಗೂ ಸಾಕಷ್ಟು ವ್ಯತ್ಯಾಸ ಇದೆ. ಇಲ್ಲಿಯವರು ಸಿನಿಮಾಗಳನ್ನು ಸಖತ್ ಸ್ಪೈಸಿಯಾಗಿ ಮಾಡಬಲ್ಲರು ಎಂಬುದು ಬಾಲಿವುಡ್ ನಿರ್ಮಾಪಕರಿಗೆ ಅರ್ಥವಾಗಿದೆ. ಈ ಕಾರಣದಿಂದಲೇ ಸಾಕಷ್ಟು ಬಾಲಿವುಡ್ ನಿರ್ಮಾಪಕರು ದಕ್ಷಿಣದ ನಿರ್ದೇಶಕರನ್ನು ಕರೆಸುತ್ತಿದ್ದಾರೆ. ‘ಬಾಘಿ 4’ ಚಿತ್ರದ ನಿರ್ಮಾಪಕರು ಮಾಡಿದ್ದೂ ಅದನ್ನೇ. ಕಥೆ, ಸ್ಕ್ರಿಪ್ಟ್ ಎಲ್ಲವನ್ನೂ ನಿರ್ಮಾಪಕರೇ ನೀಡಿದ್ದರು. ಎ. ಹರ್ಷ ನಿರ್ದೇಶನದ ಜವಾಬ್ದಾರಿ ಮಾತ್ರ ಹೊತ್ತುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:03 pm, Sat, 6 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!