AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ಬೆಲೆಯ ಫ್ಲ್ಯಾಟ್ ಖರೀದಿಸಿದ ಬಚ್ಚನ್ ಕುಟುಂಬ; ವಿಚ್ಛೇದನ ವದಂತಿ ಮಧ್ಯೆಯೇ 100 ಕೋಟಿ ರೂ. ಹೂಡಿಕೆ

ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್ ಅವರು ಪಶ್ಚಿಮ ಮುಂಬೈನಲ್ಲಿ 24.95 ಕೋಟಿ ರೂಪಾಯಿಗಳ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ಒಂದು ವರ್ಷದಲ್ಲಿ ಅವರು 100 ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದಾರೆ. ಈ ಹೂಡಿಕೆಯು ಅವರ ಕುಟುಂಬದ ಆರ್ಥಿಕ ಸ್ಥಿತಿಯ ಬಗ್ಗೆ ಹೊಸ ಬೆಳಕು ಚೆಲ್ಲುತ್ತದೆ.

25 ಕೋಟಿ ಬೆಲೆಯ ಫ್ಲ್ಯಾಟ್ ಖರೀದಿಸಿದ ಬಚ್ಚನ್ ಕುಟುಂಬ; ವಿಚ್ಛೇದನ ವದಂತಿ ಮಧ್ಯೆಯೇ 100 ಕೋಟಿ ರೂ. ಹೂಡಿಕೆ
ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on:Oct 25, 2024 | 11:00 AM

Share

ಎಲ್ಲ ಕಡೆಗಳಲ್ಲಿ ಅಮಿತಾಭ್ ಬಚ್ಚನ್ ಅವರ ವಿಚ್ಛೇದನ ವದಂತಿ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಅಮಿತಾಭ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಸೇರಿ ರಿಯಲ್ ಎಸ್ಟೇಟ್​ ಮೇಲೆ ಬರೋಬ್ಬರಿ 24.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಪಶ್ಚಿಮ ಮುಂಬೈನಲ್ಲಿ ತಂದೆ-ಮಗ ಒಟ್ಟಾಗಿ ಅಪಾರ್ಟ್​ಮೆಂಟ್​ ಖರೀದಿ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಇವರು ಮಾಡಿದ ಹೂಡಿಕೆ 100 ಕೋಟಿ ರೂಪಾಯಿ ದಾಟಿದೆ.

ಮುಲುಂದ್ ಭಾಗದಲ್ಲಿ 3 ಬಿಎಚ್​ಕೆ ಹಾಗೂ 4 ಬಿಎಚ್​​ಕೆ ಫ್ಲ್ಯಾಟ್​ಗಳನ್ನು ಅಭಿಷೇಕ್ ಹಾಗೂ ಅಮಿತಾಭ್ ಒಟ್ಟಾಗಿ ಖರೀದಿ ಮಾಡಿದ್ದಾರೆ. ಒಂದೇ ಕಟ್ಟಡದಲ್ಲಿ 10 ಫ್ಲ್ಯಾಟ್​ಗಳು ಇವೆ. ಈ ಪೈಕಿ ಅಭಿಷೇಕ್ ಬಚ್ಚನ್ ಅವರು ಆರು ಫ್ಲ್ಯಾಟ್​ಗಳನ್ನು ಖರೀದಿ ಮಾಡಿದ್ದು 14.77 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಉಳಿದ ನಾಲ್ಕು ಫ್ಲ್ಯಾಟ್​ಗಳನ್ನು ಅಮಿತಾಭ್ ಬಚ್ಚನ್ ಅವರು 10 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ.

ಕೊವಿಡ್ ನಂತರ ಅಮಿತಾಭ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ನಿರಂತರವಾಗಿ ಹೂಡಿಕೆ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳಲ್ಲಿ ಮುಂಬೈ ಭಾಗದಲ್ಲೇ 2019 ಕೋಟಿ ರೂಪಾಯಿ ಹೂಡಿಕೆ ಆಗಿದೆ. ಈ ವರ್ಷವೇ 100 ಕೋಟಿ ರೂಪಾಯಿನ ತಂದೆ-ಮಗ ರಿಯಲ್​ ಎಸ್ಟೇಟ್​ಮೇಲೆ ಹಾಕಿದ್ದಾರೆ.

ಇದನ್ನೂ ಓದಿ:  ಬರ್ತ್ ಡೇ ಪಾರ್ಟಿಗೆ ಐಶ್ವರ್ಯಾ-ಆರಾಧ್ಯ ಜೊತೆ ಅಭಿಷೇಕ್ ಬಚ್ಚನ್ ಬಂದಿಲ್ಲ ಎಂಬುದು ನಿಜವೇ?

ಅಭಿಷೇಕ್ ಬಚ್ಚನ್ ಕುಟುಂಬದಲ್ಲಿ ಯಾವುದೂ ಸರಿ ಇಲ್ಲ ಎನ್ನಲಾಗುತ್ತಿದೆ. ಅಭಿಷೇಕ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿದೆ. ಇವರು ಬೇರೆ ಆದರೆ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ರೈಗೆ ಜೀವನಾಂಶ ನೀಡಬೇಕಾಗುತ್ತದೆ. ಅದು ನೂರಾರು ಕೋಟಿ ರೂಪಾಯಿ ಮೇಲೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:57 am, Fri, 25 October 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ