AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಕೋಟಿ ಬೆಲೆಯ ಫ್ಲ್ಯಾಟ್ ಖರೀದಿಸಿದ ಬಚ್ಚನ್ ಕುಟುಂಬ; ವಿಚ್ಛೇದನ ವದಂತಿ ಮಧ್ಯೆಯೇ 100 ಕೋಟಿ ರೂ. ಹೂಡಿಕೆ

ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್ ಅವರು ಪಶ್ಚಿಮ ಮುಂಬೈನಲ್ಲಿ 24.95 ಕೋಟಿ ರೂಪಾಯಿಗಳ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ಒಂದು ವರ್ಷದಲ್ಲಿ ಅವರು 100 ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದಾರೆ. ಈ ಹೂಡಿಕೆಯು ಅವರ ಕುಟುಂಬದ ಆರ್ಥಿಕ ಸ್ಥಿತಿಯ ಬಗ್ಗೆ ಹೊಸ ಬೆಳಕು ಚೆಲ್ಲುತ್ತದೆ.

25 ಕೋಟಿ ಬೆಲೆಯ ಫ್ಲ್ಯಾಟ್ ಖರೀದಿಸಿದ ಬಚ್ಚನ್ ಕುಟುಂಬ; ವಿಚ್ಛೇದನ ವದಂತಿ ಮಧ್ಯೆಯೇ 100 ಕೋಟಿ ರೂ. ಹೂಡಿಕೆ
ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on:Oct 25, 2024 | 11:00 AM

Share

ಎಲ್ಲ ಕಡೆಗಳಲ್ಲಿ ಅಮಿತಾಭ್ ಬಚ್ಚನ್ ಅವರ ವಿಚ್ಛೇದನ ವದಂತಿ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಅಮಿತಾಭ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಸೇರಿ ರಿಯಲ್ ಎಸ್ಟೇಟ್​ ಮೇಲೆ ಬರೋಬ್ಬರಿ 24.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಪಶ್ಚಿಮ ಮುಂಬೈನಲ್ಲಿ ತಂದೆ-ಮಗ ಒಟ್ಟಾಗಿ ಅಪಾರ್ಟ್​ಮೆಂಟ್​ ಖರೀದಿ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಇವರು ಮಾಡಿದ ಹೂಡಿಕೆ 100 ಕೋಟಿ ರೂಪಾಯಿ ದಾಟಿದೆ.

ಮುಲುಂದ್ ಭಾಗದಲ್ಲಿ 3 ಬಿಎಚ್​ಕೆ ಹಾಗೂ 4 ಬಿಎಚ್​​ಕೆ ಫ್ಲ್ಯಾಟ್​ಗಳನ್ನು ಅಭಿಷೇಕ್ ಹಾಗೂ ಅಮಿತಾಭ್ ಒಟ್ಟಾಗಿ ಖರೀದಿ ಮಾಡಿದ್ದಾರೆ. ಒಂದೇ ಕಟ್ಟಡದಲ್ಲಿ 10 ಫ್ಲ್ಯಾಟ್​ಗಳು ಇವೆ. ಈ ಪೈಕಿ ಅಭಿಷೇಕ್ ಬಚ್ಚನ್ ಅವರು ಆರು ಫ್ಲ್ಯಾಟ್​ಗಳನ್ನು ಖರೀದಿ ಮಾಡಿದ್ದು 14.77 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಉಳಿದ ನಾಲ್ಕು ಫ್ಲ್ಯಾಟ್​ಗಳನ್ನು ಅಮಿತಾಭ್ ಬಚ್ಚನ್ ಅವರು 10 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ.

ಕೊವಿಡ್ ನಂತರ ಅಮಿತಾಭ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ನಿರಂತರವಾಗಿ ಹೂಡಿಕೆ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳಲ್ಲಿ ಮುಂಬೈ ಭಾಗದಲ್ಲೇ 2019 ಕೋಟಿ ರೂಪಾಯಿ ಹೂಡಿಕೆ ಆಗಿದೆ. ಈ ವರ್ಷವೇ 100 ಕೋಟಿ ರೂಪಾಯಿನ ತಂದೆ-ಮಗ ರಿಯಲ್​ ಎಸ್ಟೇಟ್​ಮೇಲೆ ಹಾಕಿದ್ದಾರೆ.

ಇದನ್ನೂ ಓದಿ:  ಬರ್ತ್ ಡೇ ಪಾರ್ಟಿಗೆ ಐಶ್ವರ್ಯಾ-ಆರಾಧ್ಯ ಜೊತೆ ಅಭಿಷೇಕ್ ಬಚ್ಚನ್ ಬಂದಿಲ್ಲ ಎಂಬುದು ನಿಜವೇ?

ಅಭಿಷೇಕ್ ಬಚ್ಚನ್ ಕುಟುಂಬದಲ್ಲಿ ಯಾವುದೂ ಸರಿ ಇಲ್ಲ ಎನ್ನಲಾಗುತ್ತಿದೆ. ಅಭಿಷೇಕ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿದೆ. ಇವರು ಬೇರೆ ಆದರೆ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ರೈಗೆ ಜೀವನಾಂಶ ನೀಡಬೇಕಾಗುತ್ತದೆ. ಅದು ನೂರಾರು ಕೋಟಿ ರೂಪಾಯಿ ಮೇಲೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:57 am, Fri, 25 October 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!