AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ

ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ್ದ ಸಹದೇವ್​ ದಿರ್ಡೋಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಶಾ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ
ಸಹದೇವ್​, ಬಾದ್​ ಶಾ
TV9 Web
| Updated By: Digi Tech Desk|

Updated on:Dec 29, 2021 | 9:50 AM

Share

ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ್ದ ಸಹದೇವ್​ ದಿರ್ಡೋಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಶಾ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಛತ್ತೀಸ್​ಘಡದ 10 ವರ್ಷದ ಬಾಲಕ ಸಹದೇವ್​ ತಂದೆಯೊಂದಿಗೆ  ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದ್ದು ಸಹದೇವ್​ ಬೈಕ್​ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್​ನಿಂದ ಬಿದ್ದ ಸಹದೇವ್​ ಅವರ  ತಲೆಗೆ ಬಲವಾಗಿ ಏಟು ಬಿದ್ದಿದೆ ಎನ್ನಲಾಗಿದ್ದು, ಸಹದೇವ್​ ಅವರನ್ನು ಜಗದಲ್ಪುರ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಾದ್​ ಶಾ, ಸಹದೇವ್​ ಕುಟುಂಬದೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ. ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುತ್ತೇನೆ ಎಂದಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಟ್ವೀಟ್​ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.  ತೀವ್ರವಾಗಿ ಗಾಯಗೊಂಡಿರುವ ಸಹದೇವ್​ ಅವರ ಮೇಲೆ ವೈದ್ಯರು ನಿಗಾ ವಹಿಸಿದ್ದು, ಸ್ಥಳೀಯ ಜಿಲ್ಲಾಧಿಕಾರಿ ಕೂಡ ಆಸ್ಪತ್ರೆಗೆ ತೆರಳಿ ಸಹದೇವ್​ ಆರೋಗ್ಯ ವಿಚಾರಿಸಿದ್ದಾರೆ.

2021ರಲ್ಲಿ ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ಸಹದೇವ್ ಇಡೀ ದೇಶದಲ್ಲಿ ಹೊಸ ಟ್ರೆಂಡ್​ ಕ್ರಿಯೇಟ್ ಮಾಡಿದ್ದರು. ಛತ್ತೀಸ್​​ಘಡ ಮುಖ್ಯಮಂತ್ರಿಗಳು ಕೂಡ ಸಹದೇವ್​ ಅವರನ್ನು ಸನ್ಮಾನಿಸಿದ್ದರು. ಅಲ್ಲದೆ ಅಗಸ್ಟ್​ನಲ್ಲಿ ಬಾಲಿವುಡ್​ನ ರಾಪ್ ಸಿಂಗರ್​ ಬಾದ್​ ಶಾ ಸಹದೇವ್​ ಅವರನ್ನು ಭೇಟಿಯಾಗಿ ಅವರೊಂದಿಗೆ ಹಾಡನ್ನೂ ಹಾಡಿದ್ದರು. ಅವರಿಬ್ಬರ ರಿಮಿಕ್ಸ್​ ಎಲ್ಲೆಡೆ ವೈರಲ್​ ಆಗಿತ್ತು.

Published On - 9:35 am, Wed, 29 December 21

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ