AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ

ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ್ದ ಸಹದೇವ್​ ದಿರ್ಡೋಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಶಾ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ
ಸಹದೇವ್​, ಬಾದ್​ ಶಾ
TV9 Web
| Edited By: |

Updated on:Dec 29, 2021 | 9:50 AM

Share

ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ್ದ ಸಹದೇವ್​ ದಿರ್ಡೋಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಲಿವುಡ್​ ರಾಪ್​ ಸಿಂಗರ್​ ಬಾದ್​ ಶಾ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಛತ್ತೀಸ್​ಘಡದ 10 ವರ್ಷದ ಬಾಲಕ ಸಹದೇವ್​ ತಂದೆಯೊಂದಿಗೆ  ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದ್ದು ಸಹದೇವ್​ ಬೈಕ್​ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್​ನಿಂದ ಬಿದ್ದ ಸಹದೇವ್​ ಅವರ  ತಲೆಗೆ ಬಲವಾಗಿ ಏಟು ಬಿದ್ದಿದೆ ಎನ್ನಲಾಗಿದ್ದು, ಸಹದೇವ್​ ಅವರನ್ನು ಜಗದಲ್ಪುರ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಾದ್​ ಶಾ, ಸಹದೇವ್​ ಕುಟುಂಬದೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ. ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುತ್ತೇನೆ ಎಂದಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಟ್ವೀಟ್​ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.  ತೀವ್ರವಾಗಿ ಗಾಯಗೊಂಡಿರುವ ಸಹದೇವ್​ ಅವರ ಮೇಲೆ ವೈದ್ಯರು ನಿಗಾ ವಹಿಸಿದ್ದು, ಸ್ಥಳೀಯ ಜಿಲ್ಲಾಧಿಕಾರಿ ಕೂಡ ಆಸ್ಪತ್ರೆಗೆ ತೆರಳಿ ಸಹದೇವ್​ ಆರೋಗ್ಯ ವಿಚಾರಿಸಿದ್ದಾರೆ.

2021ರಲ್ಲಿ ಬಚ್​ಪನ್​ಕಾ ಪ್ಯಾರ್​ ಹಾಡಿನ ಮೂಲಕ ಸಹದೇವ್ ಇಡೀ ದೇಶದಲ್ಲಿ ಹೊಸ ಟ್ರೆಂಡ್​ ಕ್ರಿಯೇಟ್ ಮಾಡಿದ್ದರು. ಛತ್ತೀಸ್​​ಘಡ ಮುಖ್ಯಮಂತ್ರಿಗಳು ಕೂಡ ಸಹದೇವ್​ ಅವರನ್ನು ಸನ್ಮಾನಿಸಿದ್ದರು. ಅಲ್ಲದೆ ಅಗಸ್ಟ್​ನಲ್ಲಿ ಬಾಲಿವುಡ್​ನ ರಾಪ್ ಸಿಂಗರ್​ ಬಾದ್​ ಶಾ ಸಹದೇವ್​ ಅವರನ್ನು ಭೇಟಿಯಾಗಿ ಅವರೊಂದಿಗೆ ಹಾಡನ್ನೂ ಹಾಡಿದ್ದರು. ಅವರಿಬ್ಬರ ರಿಮಿಕ್ಸ್​ ಎಲ್ಲೆಡೆ ವೈರಲ್​ ಆಗಿತ್ತು.

Published On - 9:35 am, Wed, 29 December 21

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ