Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದನೇ ದಿನಕ್ಕೆ ನೆಲಕಚ್ಚಿದ ಅಕ್ಷಯ್ ಕುಮಾರ್ ಸಿನಿಮಾ; ಮುಗಿಯಿತು ಆಟ

Bade Miyan Chote Miyan Collection: ಮೊದಲು ಹಾಸ್ಯ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಅಕ್ಷಯ್ ಕುಮಾರ್ ಈಗ ಗಂಭೀರ ಹಾಗೂ ಆ್ಯಕ್ಷನ್ ಸಿನಿಮಾ ಮಾಡುತ್ತಿದ್ದಾರೆ. ಇದು ಜನರಿಗೆ ಅಷ್ಟಾಗಿ ಇಷ್ಟ ಆಗುತ್ತಿಲ್ಲ. ಈಗ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅವರಿಗೆ ಮತ್ತೆ ಸೋಲಾಗಿದೆ.

ಐದನೇ ದಿನಕ್ಕೆ ನೆಲಕಚ್ಚಿದ ಅಕ್ಷಯ್ ಕುಮಾರ್ ಸಿನಿಮಾ; ಮುಗಿಯಿತು ಆಟ
ಅಕ್ಷಯ್-ಟೈಗರ್
Follow us
ರಾಜೇಶ್ ದುಗ್ಗುಮನೆ
|

Updated on: Apr 16, 2024 | 8:45 AM

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ. ಏಪ್ರಿಲ್ 11ರಂದು ರಿಲೀಸ್ ಆದ ಈ ಚಿತ್ರ ಐದನೇ ದಿನಕ್ಕೆ ನೆಲಕಚ್ಚಿದೆ. ಈದ್ ಹಬ್ಬದ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಆದ ಹೊರತಾಗಿಯೂ ಚಿತ್ರವನ್ನು ಜನರು ಮೆಚ್ಚಿಕೊಂಡಿಲ್ಲ. ಈ ಚಿತ್ರ 100 ಕೋಟಿ ರೂಪಾಯಿ ತಲುಪೋದು ಅನುಮಾನ ಎನ್ನಲಾಗುತ್ತಿದೆ.

ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ಕಂಡ ಸೋಲುಗಳ ಸಂಖ್ಯೆ ಕಡಿಮೆ ಏನಿಲ್ಲ. ಆದಾಗ್ಯೂ ಅವರು ಸುಮ್ಮನೆ ಕುಳಿತಿಲ್ಲ. ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮೊದಲು ಹಾಸ್ಯ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಅವರು, ಈಗ ಗಂಭೀರ ಹಾಗೂ ಆ್ಯಕ್ಷನ್ ಸಿನಿಮಾ ಮಾಡುತ್ತಿದ್ದಾರೆ. ಇದು ಜನರಿಗೆ ಅಷ್ಟಾಗಿ ಇಷ್ಟ ಆಗುತ್ತಿಲ್ಲ. ಈಗ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅವರಿಗೆ ಮತ್ತೆ ಸೋಲಾಗಿದೆ.

‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೊದಲ ದಿನ (ಶನಿವಾರ) 15 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ (ಶುಕ್ರವಾರ) ಈ ಸಿನಿಮಾ 7.6 ಕೋಟಿ ರೂಪಾಯಿ, ಮೂರನೇ ದಿನ (ಶನಿವಾರ) 8.5 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ (ಭಾನುವಾರ) 9.5 ಕೋಟಿ ರೂಪಾಯಿ ಗಳಿಕೆ ಮಾಡಿತು. ಸೋಮವಾರ (ಏಪ್ರಿಲ್ 15) ಸಿನಿಮಾದ ಗಳಿಕೆ ಸಂಪೂರ್ಣ ನೆಲಕಚ್ಚಿದೆ. ಈ ಚಿತ್ರ ಕೇವಲ 2.50 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ಒಟ್ಟೂ ಕಲೆಕ್ಷನ್ 43 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ಬಡೇ ಮಿಯಾ ಚೋಟೆ ಮಿಯಾ’ ಟ್ವಿಟರ್ ವಿಮರ್ಶೆ; ಅಕ್ಷಯ್, ಟೈಗರ್​ಗಿಂತ ಪೃಥ್ವಿರಾಜ್​ಗೆ ಹೆಚ್ಚು ಅಂಕ

ಮುಂದಿನ ದಿನಗಳಲ್ಲಿ ಅಕ್ಷಯ್ ಕುಮಾರ್ ನಟನೆಯ ಈ ಚಿತ್ರಕ್ಕೆ ಮತ್ತಷ್ಟು ತೊಂದರೆ ಆಗೋ ಸಾಧ್ಯತೆ ಇದೆ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಜೊತೆ ಟೈಗರ್ ಶ್ರಾಫ್, ಪೃಥ್ವಿರಾಜ್​ ಸುಕುಮಾರನ್ ಸೇರಿ ಅನೇಕರು ನಟಿಸಿದ್ದರು. ಈ ಚಿತ್ರ 1100 ಕೋಟಿ ರೂಪಾಯಿ ಗಳಿಕೆ ಮಾಡಲಿದೆ ಎಂದು ತಂಡದವರು ಈ ಮೊದಲು ಹೇಳಿಕೊಂಡಿದ್ದರು. ಈಗ 100 ಕೋಟಿ ಗಳಿಸಲೂ ಸಿನಿಮಾ ಒದ್ದಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ