AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿಗೆ ಇಳಿದ ಅಕ್ಷಯ್ ಕುಮಾರ್ ಸಿನಿಮಾ ಕಲೆಕ್ಷನ್; ಹೀನಾಯ ಸೋಲು

Bade Miyan Chote Miyan 2nd Day Collection: ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ದೊಡ್ಡ ಜಯ ಕಾಣುವ ನಿರೀಕ್ಷೆಯನ್ನು ಅವರು ಇಟ್ಟುಕೊಂಡಿದ್ದರು. ಈ ಸಿನಿಮಾ ಕಮಾಲ್ ಮಾಡಲಿದೆ ಎಂದು ಭಾವಿಸಲಾಗಿತ್ತು. ನಾನಾ ವೇದಿಕೆಗಳಲ್ಲಿ ಸಿನಿಮಾದ ಪ್ರಚಾರ ಮಾಡಲಾಗಿತ್ತು. ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ಗೆಲ್ಲಲು ವಿಫಲವಾಗಿದೆ.

ಒಂದಂಕಿಗೆ ಇಳಿದ ಅಕ್ಷಯ್ ಕುಮಾರ್ ಸಿನಿಮಾ ಕಲೆಕ್ಷನ್; ಹೀನಾಯ ಸೋಲು
ಬಡೇ ಮಿಯಾ ಚೋಟೆ ಮಿಯಾ ತಂಡ
ರಾಜೇಶ್ ದುಗ್ಗುಮನೆ
|

Updated on: Apr 13, 2024 | 8:58 AM

Share

ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ದೊಡ್ಡ ಮಟ್ಟದ ಗಳಿಕೆ ಮಾಡಲಿದೆ ಎಂದು ಊಹಿಸಲಾಗಿತ್ತು. ಆದರೆ, ಈ ಊಹೆ ತಪ್ಪಾಗಿದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಎರಡನೇ ದಿನದ ಗಳಿಕೆ ಒಂದಂಕಿಗೆ ಇಳಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 100 ಕೋಟಿ ರೂಪಾಯಿ ಆಗೋದು ಅನುಮಾನ ಎನ್ನಲಾಗುತ್ತಿದೆ. ಬಾಕ್ಸ್ ಆಫೀಸ್ ಪಂಡಿತರು ಇದನ್ನು ಹೀನಾಯ ಸೋಲು ಎಂದು ಘೋಷಿಸಿದ್ದಾರೆ.

ಅಕ್ಷಯ್ ಕುಮಾರ್ ಸತತ ಸೋಲು ಕಾಣುತ್ತಿದ್ದಾರೆ. ‘ಸೂರ್ಯವಂಶಿ’ ಬಳಿಕ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ದೊಡ್ಡ ಜಯ ಕಾಣುವ ನಿರೀಕ್ಷೆಯನ್ನು ಅವರು ಇಟ್ಟುಕೊಂಡಿದ್ದರು. ಈ ಸಿನಿಮಾ ಕಮಾಲ್ ಮಾಡಲಿದೆ ಎಂದು ಭಾವಿಸಲಾಗಿತ್ತು. ನಾನಾ ವೇದಿಕೆಗಳಲ್ಲಿ ಸಿನಿಮಾದ ಪ್ರಚಾರ ಮಾಡಲಾಗಿತ್ತು. ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ಗೆಲ್ಲಲು ವಿಫಲವಾಗಿದೆ.

ಮೊದಲ ದಿನ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ 15.65 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಏಪ್ರಿಲ್ 12) ಕೇವಲ 7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ 22.65 ಕೋಟಿ ರೂಪಾಯಿ ಗಳಿಕೆ ಆಗಿದೆ. ಇಂದು (ಏಪ್ರಿಲ್ 13) ಹಾಗೂ ನಾಳೆ (ಏಪ್ರಿಲ್ 14) ಸಿನಿಮಾ ದೊಡ್ಡ ಮೊತ್ತ ಕಲೆಕ್ಷನ್ ಮಾಡಿದರೂ ಸೋಮವಾರದಿಂದ ಕಲೆಕ್ಷನ್ ಕಡಿಮೆ ಆಗಲಿದೆ.

ಇದನ್ನೂ ಓದಿ:  ಮೊದಲ ದಿನದ ಕಲೆಕ್ಷನ್​ನಲ್ಲಿ ಮುಗ್ಗರಿಸಿದ ಅಕ್ಷಯ್ ಕುಮಾರ್ ಸಿನಿಮಾ; ಮತ್ತೊಂದು ಸೋಲು? 

ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಪೃಥ್ವಿರಾಜ್​ ಸುಕುಮಾರನ್ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಇಷ್ಟು ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ತೂಕ ಕಳೆದುಕೊಂಡಿದೆ ಎಂದು ಅನೇಕರು ಅಭಿಯಾವನ್ನು ಅನೇಕರು ಹೊರ ಹಾಕಿದ್ದಾರೆ. ಈದ್ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್​ಗೆ ತೆರಳುತ್ತಾರೆ. ಹೀಗಾಗಿ, ದೊಡ್ಡ ಬಜೆಟ್ ಸಿನಿಮಾಗಳು ಈ ಸಂದರ್ಭದಲ್ಲಿ ರಿಲೀಸ್ ಆಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ