AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿಗೆ ಇಳಿದ ಅಕ್ಷಯ್ ಕುಮಾರ್ ಸಿನಿಮಾ ಕಲೆಕ್ಷನ್; ಹೀನಾಯ ಸೋಲು

Bade Miyan Chote Miyan 2nd Day Collection: ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ದೊಡ್ಡ ಜಯ ಕಾಣುವ ನಿರೀಕ್ಷೆಯನ್ನು ಅವರು ಇಟ್ಟುಕೊಂಡಿದ್ದರು. ಈ ಸಿನಿಮಾ ಕಮಾಲ್ ಮಾಡಲಿದೆ ಎಂದು ಭಾವಿಸಲಾಗಿತ್ತು. ನಾನಾ ವೇದಿಕೆಗಳಲ್ಲಿ ಸಿನಿಮಾದ ಪ್ರಚಾರ ಮಾಡಲಾಗಿತ್ತು. ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ಗೆಲ್ಲಲು ವಿಫಲವಾಗಿದೆ.

ಒಂದಂಕಿಗೆ ಇಳಿದ ಅಕ್ಷಯ್ ಕುಮಾರ್ ಸಿನಿಮಾ ಕಲೆಕ್ಷನ್; ಹೀನಾಯ ಸೋಲು
ಬಡೇ ಮಿಯಾ ಚೋಟೆ ಮಿಯಾ ತಂಡ
ರಾಜೇಶ್ ದುಗ್ಗುಮನೆ
|

Updated on: Apr 13, 2024 | 8:58 AM

Share

ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ದೊಡ್ಡ ಮಟ್ಟದ ಗಳಿಕೆ ಮಾಡಲಿದೆ ಎಂದು ಊಹಿಸಲಾಗಿತ್ತು. ಆದರೆ, ಈ ಊಹೆ ತಪ್ಪಾಗಿದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಎರಡನೇ ದಿನದ ಗಳಿಕೆ ಒಂದಂಕಿಗೆ ಇಳಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 100 ಕೋಟಿ ರೂಪಾಯಿ ಆಗೋದು ಅನುಮಾನ ಎನ್ನಲಾಗುತ್ತಿದೆ. ಬಾಕ್ಸ್ ಆಫೀಸ್ ಪಂಡಿತರು ಇದನ್ನು ಹೀನಾಯ ಸೋಲು ಎಂದು ಘೋಷಿಸಿದ್ದಾರೆ.

ಅಕ್ಷಯ್ ಕುಮಾರ್ ಸತತ ಸೋಲು ಕಾಣುತ್ತಿದ್ದಾರೆ. ‘ಸೂರ್ಯವಂಶಿ’ ಬಳಿಕ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ದೊಡ್ಡ ಜಯ ಕಾಣುವ ನಿರೀಕ್ಷೆಯನ್ನು ಅವರು ಇಟ್ಟುಕೊಂಡಿದ್ದರು. ಈ ಸಿನಿಮಾ ಕಮಾಲ್ ಮಾಡಲಿದೆ ಎಂದು ಭಾವಿಸಲಾಗಿತ್ತು. ನಾನಾ ವೇದಿಕೆಗಳಲ್ಲಿ ಸಿನಿಮಾದ ಪ್ರಚಾರ ಮಾಡಲಾಗಿತ್ತು. ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ಗೆಲ್ಲಲು ವಿಫಲವಾಗಿದೆ.

ಮೊದಲ ದಿನ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ 15.65 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಏಪ್ರಿಲ್ 12) ಕೇವಲ 7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ 22.65 ಕೋಟಿ ರೂಪಾಯಿ ಗಳಿಕೆ ಆಗಿದೆ. ಇಂದು (ಏಪ್ರಿಲ್ 13) ಹಾಗೂ ನಾಳೆ (ಏಪ್ರಿಲ್ 14) ಸಿನಿಮಾ ದೊಡ್ಡ ಮೊತ್ತ ಕಲೆಕ್ಷನ್ ಮಾಡಿದರೂ ಸೋಮವಾರದಿಂದ ಕಲೆಕ್ಷನ್ ಕಡಿಮೆ ಆಗಲಿದೆ.

ಇದನ್ನೂ ಓದಿ:  ಮೊದಲ ದಿನದ ಕಲೆಕ್ಷನ್​ನಲ್ಲಿ ಮುಗ್ಗರಿಸಿದ ಅಕ್ಷಯ್ ಕುಮಾರ್ ಸಿನಿಮಾ; ಮತ್ತೊಂದು ಸೋಲು? 

ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಪೃಥ್ವಿರಾಜ್​ ಸುಕುಮಾರನ್ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಇಷ್ಟು ದೊಡ್ಡ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ತೂಕ ಕಳೆದುಕೊಂಡಿದೆ ಎಂದು ಅನೇಕರು ಅಭಿಯಾವನ್ನು ಅನೇಕರು ಹೊರ ಹಾಕಿದ್ದಾರೆ. ಈದ್ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್​ಗೆ ತೆರಳುತ್ತಾರೆ. ಹೀಗಾಗಿ, ದೊಡ್ಡ ಬಜೆಟ್ ಸಿನಿಮಾಗಳು ಈ ಸಂದರ್ಭದಲ್ಲಿ ರಿಲೀಸ್ ಆಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ