AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊದಿದ ಕಣ್ಣು, ಅದರ ಮೇಲೆ ಬ್ಯಾಂಡೇಜ್​; ಬಾದ್​ಶಾಗೆ ಏನಾಯ್ತು?

Badshah Health: ಪ್ರಸಿದ್ಧ ಬಾಲಿವುಡ್ ರ‍್ಯಾಪರ್ ಬಾದ್‌ಶಾ ಅವರ ಊದಿಕೊಂಡ ಕಣ್ಣಿನ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವರು ಇದನ್ನು ಅವರ ಹೊಸ ಹಾಡು ‘ಕೊಕೇನ್’ನ ಪ್ರಚಾರದ ಉದ್ದೇಶ ಎಂದು ಅನುಮಾನಿಸುತ್ತಿದ್ದಾರೆ.

ಊದಿದ ಕಣ್ಣು, ಅದರ ಮೇಲೆ ಬ್ಯಾಂಡೇಜ್​; ಬಾದ್​ಶಾಗೆ ಏನಾಯ್ತು?
ಬಾದ್​ಶಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Sep 25, 2025 | 8:11 AM

Share

ಸೆಲೆಬ್ರಿಟಿಗಳು ಯಾವಾಗಲೂ ತಮ್ಮ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾ ಮೂಲಕ ವಿವಿಧ ಅಪ್​​ಡೇಟ್ ನೀಡುತ್ತಾ ಇರುತ್ತಾರೆ. ಈಗ ಪ್ರಸಿದ್ಧ ಬಾಲಿವುಡ್ ಗಾಯಕ ಮತ್ತು ರ‍್ಯಾಪರ್ ಬಾದ್‌ಶಾ (Badsha) ಹಂಚಿಕೊಂಡಿರುವ ಫೋಟೋವೊಂದು ಅವರ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದು ಅವರ ಆರೋಗ್ಯದ ಬಗ್ಗೆ ಪ್ರಶ್ನೆ ಎತ್ತುವಂತೆ ಮಾಡಿದೆ. ಈ ಫೋಟೋಗಳಲ್ಲಿ ಬಾದ್‌ಶಾ ಅವರ ಒಂದು ಕಣ್ಣು ಸ್ಪಷ್ಟವಾಗಿ ಊದಿಕೊಂಡಿದೆ. ಅಭಿಮಾನಿಗಳು ಅವರಿಗೆ ನಿಖರವಾಗಿ ಏನಾಯಿತು ಎಂದು ನಿರಂತರವಾಗಿ ಕೇಳುತ್ತಿದ್ದಾರೆ.

ರ‍್ಯಾಪರ್ ಬಾದ್‌ಶಾ ಪ್ರಸ್ತುತ ತಮ್ಮ ಹೊಸ ಹಾಡಿನ ‘ಕೊಕೇನ್’ಗಾಗಿ ಸುದ್ದಿಯಲ್ಲಿದ್ದಾರೆ, ಆದರೆ ಅವರ ಫೋಟೋ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಅವರು ತಮ್ಮ ಕಣ್ಣುಗಳಿಗೆ ಬಟ್ಟೆ ಕಟ್ಟಿಕೊಂಡು ಮುಖ ಸಂಪೂರ್ಣವಾಗಿ ಊದಿಕೊಂಡಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವರು ಗಂಭೀರವಾಗಿ ಗಾಯಗೊಂಡಿರುವಂತೆ ತೋರುತ್ತಿದೆ. ಆದರೆ ಅವರ ಮೇಲೆ ಹಲ್ಲೆ ನಡೆದಿದೆಯೇ ಅಥವಾ ಅದು ಅಪಘಾತವೇ? ಎಲ್ಲರೂ ಇದರ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾ ಇದ್ದಾರೆ. ಅಭಿಮಾನಿಗಳು ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ
Image
ಮುತ್ತುರಾಜ್ ಹೆಸರು ಬದಲಾಗಿದ್ದು ಅಣ್ಣಾವ್ರಿಗೇ ಗೊತ್ತಿರಲಿಲ್ಲ
Image
ರಿಂಗ್ ಕೊಡಿಸಲು ರಮ್ಯಾ ಜೊತೆ ಜ್ಯುವೆಲರಿ ಶಾಪ್​ಗೆ ಹೋದ ವಿನಯ್;ಇದೆ ಟ್ವಿಸ್ಟ್
Image
‘ಬಿಗ್ ಬಾಸ್ 12’ರ ನಾಲ್ಕು ಸ್ಪರ್ಧಿಗಳ ಹೆಸರು ಶನಿವಾರವೇ ರಿವೀಲ್?
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ

ಇನ್ನೂ ಕೆಲವರಿಗೆ ಬಾದ್​​ಶಾ ಮೇಲೆ ಅನುಮಾನ ಬಂದಿದೆ. ಹೀಗಾಗಿ, ಕೆಲವರು ಇದು ಪ್ರಚಾರದ ಸಾಹಸ ಎಂದು ಅನುಮಾನಿಸುತ್ತಾ ಇದ್ದಾರೆ. ಇದು ಹೊಸ ಹಾಡಿನ ಭಾಗ ಅಥವಾ ವೀಡಿಯೊ ಚಿತ್ರೀಕರಣದ ಭಾಗ ಎಂದು ನಂಬಿದ್ದಾರೆ.\

View this post on Instagram

A post shared by BADSHAH (@badboyshah)

ಬಾದ್‌ಶಾ ಫೋಟೋ ಪೋಸ್ಟ್ ಮಾಡಿ ‘ಬ್ಯಾಡ್ಸ್ ಆಫ್ ಬಾಲಿವುಡ್’ ಮತ್ತು ‘ಕೊಕೇನ್’ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿದ್ದಾರೆ. ಬಹುಶಃ ಈ ಸರಣಿಯ ಪ್ರಚಾರಕ್ಕೆ ಮತ್ತು ತಮ್ಮ ಹಾಡಿನ ಪ್ರಚಾರಕ್ಕೆ ಅವರು ಈ ರೀತಿ ಮಾಡಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ, ರ್ಯಾಪರ್ ಬಾದ್​ಶಾ ವಿರುದ್ಧ ಪ್ರಕರಣ

ಒಬ್ಬ ಬಳಕೆದಾರರು ತಮಾಷೆಯಾಗಿ, ‘ಮನೋಜ್ ಪಹ್ವಾ ಸರ್ ನಿಮ್ಮನ್ನು ಹೊಡೆದಿದ್ದಾರಾ?’ ಎಂದು ಕೇಳಿದರು. ‘ಬ್ಯಾಡ್ಸ್ ಆಫ್ ಬಾಲಿವುಡ್​’ ನೋಡಿದವರಿಗೆ ಈ ಕಮೆಂಟ್ ಅರ್ಥವಾಗಲಿದೆ. ಕೆಲವರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಕೆಲವರು ಬೇಗ ಗುಣಮುಖರಾಗಿ, ಆರೈಕೆ ಮಾಡಿಕೊಳ್ಳಿ ಎಂದು ಕೇಳುತ್ತಿದ್ದಾರೆ. ಬಾದ್‌ಶಾ ಅವರ ಈ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:10 am, Thu, 25 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ