AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal: ‘ಪಠಾಣ್​’ ಚಿತ್ರದ ಪ್ರಚಾರಕ್ಕೆ ಭಜರಂಗ ದಳ ಅಡ್ಡಿ; ಚಿತ್ರಮಂದಿರಕ್ಕೆ ನುಗ್ಗಿ ದಾಂಧಲೆ

Pathaan Movie | Bajrang Dal: ‘ಪಠಾಣ್’ ಚಿತ್ರ ಜನವರಿ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರವನ್ನು ರಿಲೀಸ್ ಮಾಡಬಾರದು ಎಂದು ಗುಜರಾತ್​ನ ಭಜರಂಗ ದಳದ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

Bajrang Dal: ‘ಪಠಾಣ್​’ ಚಿತ್ರದ ಪ್ರಚಾರಕ್ಕೆ ಭಜರಂಗ ದಳ ಅಡ್ಡಿ; ಚಿತ್ರಮಂದಿರಕ್ಕೆ ನುಗ್ಗಿ ದಾಂಧಲೆ
ಭಜರಂಗ ದಳದ ಕಾರ್ಯಕರ್ತರ ದಾಂಧಲೆ, ಶಾರುಖ್​ ಖಾನ್​
TV9 Web
| Edited By: |

Updated on: Jan 05, 2023 | 2:59 PM

Share

ಶಾರುಖ್​ ಖಾನ್​ (Shah Rukh Khan) ಅಭಿನಯದ ‘ಪಠಾಣ್​’ ಸಿನಿಮಾ ಬಿಡುಗಡೆಗೆ ಹತ್ತಿರವಾಗುತ್ತಿದ್ದಂತೆಯೇ ವಿರೋಧದ ಕಾವು ಕೂಡ ಹೆಚ್ಚಾಗುತ್ತಿದೆ. ಹಿಂದೂ ಪರ ಸಂಘಟನೆಗಳು ಈ ಸಿನಿಮಾದ ವಿರುದ್ಧ ತಿರುಗಿಬಿದ್ದಿವೆ. ಈ ಚಿತ್ರದ ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದಾಗಿನಿಂದ ಕಾಂಟ್ರವರ್ಸಿ ಜೋರಾಗಿದೆ. ಈಗ ಭಜರಂಗ ದಳ (Bajrang Dal) ಕಾರ್ಯಕರ್ತರು ‘ಪಠಾಣ್​’ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಗುಜರಾತ್​ನಲ್ಲಿ ನಡೆದಿದೆ. ಚಿತ್ರಮಂದಿರವೊಂದರಲ್ಲಿ ‘ಪಠಾಣ್​’ (Pathaan Movie) ಚಿತ್ರದ ಪೋಸ್ಟರ್​ ಮತ್ತು ಸ್ಟ್ಯಾಂಡಿಗಳನ್ನು ಹಾಕಲಾಗಿತ್ತು. ಅದನ್ನು ಕಿತ್ತು ಹಾಕುವ ಮೂಲಕ ಭಜರಂಗ ದಳದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

‘ಪಠಾಣ್’ ಸಿನಿಮಾ ಜನವರಿ 25ರಂದು ಬಿಡುಗಡೆ ಆಗಲಿದೆ. ಆದರೆ ಈ ಚಿತ್ರವನ್ನು ರಿಲೀಸ್ ಮಾಡಬಾರದು ಎಂದು ಭಜರಂಗ ದಳದ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ‘ಸನಾತನ ಧರ್ಮ ವಿರೋಧಿ ಶಾರುಖ್​ ಖಾನ್ ಹಾಗೂ ಟುಕ್ಡೆ ಟುಕ್ಡೆ ಗ್ಯಾಂಗ್​ನ ದೀಪಿಕಾ ಪಡುಕೋಣೆ ನಟಿಸಿದ ಸಿನಿಮಾವನ್ನು ಪ್ರದರ್ಶನ ಮಾಡಲು ಬಿಡುವುದಿಲ್ಲ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Shah Rukh Khan: ಎಷ್ಟೇ ವಿರೋಧ ಬಂದ್ರೂ ಜಗ್ಗದ ಶಾರುಖ್​ ಖಾನ್​; ‘ಪಠಾಣ್​’ ಟೈಟಲ್​ ಬದಲಾಗಬೇಕು ಎಂದವರಿಗೆ ಇಲ್ಲಿದೆ ಉತ್ತರ

‘ಮಲ್ಟಿಪ್ಲೆಕ್ಸ್​ನವರಿಗೆ ವಾರ್ನಿಂಗ್​ ನೀಡಿದ್ದೇವೆ. ಒಂದು ವೇಳೆ ಸಿನಿಮಾ ರಿಲೀಸ್​ ಮಾಡಿದರೆ ಭಜರಂಗ ದಳವು ತನ್ನ ವರಸೆ ತೋರಿಸಬೇಕಾಗುತ್ತದೆ’ ಎಂದು ಬೆದರಿಕೆಯೊಂದಿಗೆ ಈ ವಿಡಿಯೋವನ್ನ ಭಜರಂಗ ದಳದ ಕಾರ್ಯಕರ್ತರು ಹಂಚಿಕೊಂಡಿದ್ದಾರೆ. ಇದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ: Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

ಮಲ್ಟಿಪ್ಲೆಕ್ಸ್​ನಲ್ಲಿ ಹಾಕಲಾಗಿದ್ದ ‘ಪಠಾಣ್​’ ಚಿತ್ರದ ಪೋಸ್ಟರ್​ಗಳನ್ನು ಕಿತ್ತು ಎಸೆಯಲಾಗಿದೆ. ‘ಜೈ ಶ್ರೀರಾಮ್​’ ಎಂದು ಘೋಷಣೆ ಕೂಗುತ್ತ ಗಲಾಟೆ ಮಾಡಲಾಗಿದೆ. ದಾಂಧಲೆ ತಡೆಯಲು ಅಲ್ಲಿನ ಸಿಬ್ಬಂದಿ ಪ್ರಯತ್ನ ನಡೆಸಿದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ವಿರೋಧ ಇದೇ ರೀತಿ ಮುಂದುವರಿದರೆ ಚಿತ್ರದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ, ಈ ರೀತಿ ದಾಂಧಲೆ ನಡೆಸಿದ್ದರ ಬಗ್ಗೆ ಟೀಕೆ ಕೂಡ ವ್ಯಕ್ತವಾಗುತ್ತಿದೆ.

ಬದಲಾಗಿಲ್ಲ ‘ಪಠಾಣ್​’ ಟೈಟಲ್​:

‘ಪಠಾಣ್​’ ಸಿನಿಮಾದ ಟೈಟಲ್​ ಬದಲಾಗಬೇಕು ಎಂದು ಒಂದು ವರ್ಗದ ಜನರು ಒತ್ತಡ ಹೇರಿದ್ದರು. ಆದರೆ ಶೀರ್ಷಿಕೆ ಬದಲಾಯಿಸಲು ಚಿತ್ರತಂಡ ಸಿದ್ಧವಿಲ್ಲ. ಚಿತ್ರದ ಟೈಟಲ್​ ‘ಪಠಾಣ್​’ ಎಂದೇ ಇರಲಿದೆ ಎಂಬುದು ಖಚಿತವಾಗಿದೆ. ಆದಷ್ಟು ಬೇಗ ಟ್ರೇಲರ್​ ಬಿಡುಗಡೆ ಮಾಡಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಶಾರುಖ್​ ಖಾನ್​ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ಜಾನ್​ ಅಬ್ರಾಹಂ ಕೂಡ ‘ಪಠಾಣ್​’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಖ್ಯಾತ ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಿಂದಿ ಮಾತ್ರವಲ್ಲದೇ ತಮಿಳು ಮತ್ತು ತೆಲುಗಿನಲ್ಲೂ ‘ಪಠಾಣ್​’ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!