AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra: ಮಹಾಕಾಳೇಶ್ವರ ದೇಗುಲಕ್ಕೆ ರಣಬೀರ್​ ಕಪೂರ್​ ಬಂದಿದ್ದಕ್ಕೆ ಬಜರಂಗ ದಳದ ಪ್ರತಿಭಟನೆ; ನಟನ ತಪ್ಪೇನು?

Ranbir Kapoor: ‘ಬ್ರಹಾಸ್ತ್ರ’ ಸಿನಿಮಾ ಸೆಪ್ಟೆಂಬರ್ 9ರಂದು ಬಿಡುಗಡೆ ಆಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆಕಾಣುತ್ತಿದೆ. ರಣಬೀರ್ ಕಪೂರ್, ಆಲಿಯಾ ಭಟ್​ ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

Brahmastra: ಮಹಾಕಾಳೇಶ್ವರ ದೇಗುಲಕ್ಕೆ ರಣಬೀರ್​ ಕಪೂರ್​ ಬಂದಿದ್ದಕ್ಕೆ ಬಜರಂಗ ದಳದ ಪ್ರತಿಭಟನೆ; ನಟನ ತಪ್ಪೇನು?
ಅಯಾನ್​, ಆಲಿಯಾ, ರಣಬೀರ್​
TV9 Web
| Edited By: |

Updated on:Sep 07, 2022 | 12:25 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ (Ranbir Kapoor) ಅವರು ಈ ವರ್ಷ ದೊಡ್ಡ ಸೋಲು ಅನುಭವಿಸಿದ್ದಾರೆ. ಅವರ ನಟಿಸಿದ್ದ ‘ಶಂಷೇರಾ’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಆ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಗೆಲ್ಲಲಿಲ್ಲ. ಈಗ ಅವರು ‘ಬ್ರಹ್ಮಾಸ್ತ್ರ’ (Brahmastra) ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ರಿಲೀಸ್​ಗೂ ಮುನ್ನವೇ ಅವರಿಗೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಸಿನಿಮಾ ಬಿಡುಗಡೆಯ ಹೊಸ್ತಿನಲ್ಲಿ ಅವರು ಉಜ್ಜಯಿನಿ ಮಹಾಕಾಳೇಶ್ವರ (Mahakal Temple) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅದನ್ನು ವಿರೋಧಿಸಿ ದೇಗುಲದ ಹೊರಗೆ ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅದರ ಪರಿಣಾಮವಾಗಿ, ರಣಬೀರ್​ ಕಪೂರ್​ ಅವರು ತಕ್ಷಣಕ್ಕೆ ಆ ಸ್ಥಳದಿಂದ ಹೊರಡಬೇಕಾಯಿತು. ಅವರ ಜೊತೆ ನಟಿ ಆಲಿಯಾ ಭಟ್​ ಹಾಗೂ ನಿರ್ದೇಶಕ ಅಯಾನ್​ ಮುಖರ್ಜಿ ಕೂಡ ಇದ್ದರು.

‘ಬ್ರಹಾಸ್ತ್ರ’ ಸಿನಿಮಾದ ಟ್ರೇಲರ್​ ಬಿಡುಗಡೆ ಆದಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ದೇವಸ್ಥಾನದ ಒಳಗೆ ಶೂ ಧರಿಸಿ ಹೀರೋ ಎಂಟ್ರಿ ನೀಡುವಂತಹ ದೃಶ್ಯ ಟ್ರೇಲರ್​ನಲ್ಲಿ ಕಾಣಿಸಿತ್ತು. ಅದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ಆರೋಪಿಸಲಾಗುತ್ತು. ಅದಕ್ಕೆ ನಿರ್ದೇಶಕ ಅಯಾನ್​ ಮುಖರ್ಜಿ ಸಮಜಾಯಿಸಿ ನೀಡಿದ್ದರಾದರೂ ಅದರಿಂದ ಯಾರಿಗೂ ಸಮಾಧಾನ ಆಗಲಿಲ್ಲ.

ರಣಬೀರ್ ಕಪೂರ್​ ಅವರು ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದನ್ನು ತಾವು ವಿರೋಧಿಸಿರುವುದು ಯಾಕೆ ಎಂದು ಬಜರಂಗ ದಳದವರು ತಿಳಿಸಿದ್ದಾರೆ. ‘ಕೆಲವೇ ದಿನಗಳ ಹಿಂದೆ ರಣಬೀರ್​ ಕಪೂರ್​ ಅವರು ಮಾಂಸಾಹಾರದ ಬಗ್ಗೆ ಮಾತನಾಡುತ್ತ ತಮಗೆ ಚಿಕನ್​, ಮಟನ್​ ಹಾಗೂ ಗೋಮಾಂಸ ಇಷ್ಟ ಎಂದು ಹೇಳಿದ್ದರು. ಹಾಗಾಗಿ ಅವರು ಮಹಾಕಾಳೇಶ್ವರ ದೇವರನ್ನು ಆರಾಧಿಸಲು ನಾವು ಬಿಡುವುದಿಲ್ಲ’ ಎಂದು ಬಜರಂಗ ದಳದ ಮುಖಂಡ ಅಂಕಿತ್​ ಚೌಬೇ ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?
Image
ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

‘ಬ್ರಹಾಸ್ತ್ರ’ ಸಿನಿಮಾ ಸೆಪ್ಟೆಂಬರ್ 9ರಂದು ಬಿಡುಗಡೆ ಆಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆಕಾಣುತ್ತಿದೆ. ಹಿಂದಿ ಮಾತ್ರವಲ್ಲದೇ ಕನ್ನಡ, ತೆಲುಗು, ಮಲಯಾಳಂ, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣಲಿದೆ. ಅಮಿತಾಭ್​ ಬಚ್ಚನ್​, ನಾಗಾರ್ಜುನ ಮುಂತಾದ ಘಟಾನುಘಟಿ ಕಲಾವಿದರು ಕೂಡ ಇದರಲ್ಲಿ ನಟಿಸಿದ್ದಾರೆ.

ಕಳಪೆ ಗ್ರಾಫಿಕ್ಸ್​ ಕಾರಣದಿಂದಾಗಿ ‘ಬ್ರಹ್ಮಾಸ್ತ್ರ’ ಚಿತ್ರದ ಟ್ರೇಲರ್​ ಅನ್ನು ಬಿಡುಗಡೆ ಜನರು ಟ್ರೋಲ್​ ಮಾಡಿದ್ದಾರೆ. ಇಡೀ ಸಿನಿಮಾ ಕೂಡ ಅದೇ ರೀತಿ ಇದ್ದರೆ ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡುವುದು ಕಷ್ಟ ಆಗುತ್ತದೆ. 3ಡಿ ಅವತರಣಿಕೆಯಲ್ಲೂ ಈ ಸಿನಿಮಾ ಮೂಡಿಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:25 pm, Wed, 7 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ