AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?
ಆರ್​ಆರ್​ಆರ್​ ತಂಡ
TV9 Web
| Edited By: |

Updated on: Dec 20, 2021 | 3:58 PM

Share

2015ರಲ್ಲಿ ಸಲ್ಮಾನ್​ ಖಾನ್​ ನಟಿಸಿದ ‘ಬಜರಂಗಿ ಭಾಯಿಜಾನ್​’ ಸಿನಿಮಾ ಸೂಪರ್​ ಹಿಟ್​ ಆಯಿತು. ಅದಕ್ಕೆ ನಿರ್ದೇಶನ ಮಾಡಿದವರು ಕಬೀರ್​ ಖಾನ್​. ಕಥೆ ಬರೆದವರು ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​. ರಾಜಮೌಳಿ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂಬುದು ವಿಜಯೇಂದ್ರ ಪ್ರಸಾದ್​ ಅವರ ಆಸೆ ಆಗಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ‘ಬಜರಂಗಿ ಭಾಯಿಜಾನ್​ 2’ ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಈ ಚಿತ್ರವನ್ನು ರಾಜಮೌಳಿ ನಿರ್ದೇಶನ ಮಾಡುತ್ತಾರಾ ಎನ್ನುವ ಪ್ರಶ್ನೆ ಕಾಡಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಸಲ್ಮಾನ್​ ಖಾನ್​ ‘ಬಜರಂಗಿ ಭಾಯಿಜಾನ್​ 2’ ಮಾಡುವ ವಿಚಾರ ಬಿಚ್ಚಿಟ್ಟರು.

2015ರಲ್ಲಿ ‘ಬಜರಂಗಿ ಭಾಯಿಜಾನ್’ ತೆರೆಗೆ ಬಂದಿತ್ತು. ಆರು ವರ್ಷದ ಪಾಕಿಸ್ತಾನಿ ಹುಡುಗಿ ಭಾರತದಲ್ಲಿ ಕಳೆದು ಹೋಗುತ್ತಾಳೆ. ಆಕೆಯನ್ನು ಮರಳಿ ಪಾಕಿಸ್ತಾನಕ್ಕೆ ತಲುಪಿಸುವ ಕಥೆ ಸಿನಿಮಾದಲ್ಲಿದೆ. ಈಗ ಹೊಸ ಕಥೆಯೊಂದಿಗೆ ‘ಬಜರಂಗಿ ಭಾಯಿಜಾನ್​ 2’ ಸಿನಿಮಾ ಬರುತ್ತಿದೆ. ​ಈ ಬಗ್ಗೆ ಮಾತನಾಡಿರುವ ಸಲ್ಮಾನ್​ ಖಾನ್​, ‘ರಾಜಮೌಳಿ ಮತ್ತು ಅವರ ತಂದೆಯೊಂದಿಗೆ ನಾನು ಒಳ್ಳೆಯ ಸಂಬಂಧವನ್ನು ಹೊಂದಿದ್ದೇನೆ. ವಿಜಯೇಂದ್ರ ಪ್ರಸಾದ್​ ಅವರು ‘ಬಜರಂಗಿ ಭಾಯಿಜಾನ್’ಗೆ ಕಥೆ ಬರೆದಿದ್ದರು. ಶೀಘ್ರದಲ್ಲೇ ನಾವು ಇದರ ಎರಡನೇ ಭಾಗಕ್ಕಾಗಿ ಮತ್ತೆ ಒಟ್ಟಿಗೆ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.

ಸೂಕ್ತವಲ್ಲದ ಸಮಯದಲ್ಲಿ ವಿಜಯೇಂದ್ರ ಪ್ರಸಾದ್​ ಅವರು ರಾಜಮೌಳಿಗೆ ‘ಬಜರಂಗಿ ಭಾಯಿ​ಜಾನ್’​ ಚಿತ್ರದ ಕಥೆ ಹೇಳಿದ್ದರು. ಆ ಸಂದರ್ಭದಲ್ಲಿ ರಾಜಮೌಳಿ ‘ಬಾಹುಬಲಿ’ ಚಿತ್ರದಲ್ಲಿನ ಯುದ್ಧದ ಸನ್ನಿವೇಶದ ಶೂಟಿಂಗ್​ ಮಾಡುತ್ತಿದ್ದರು. ಹೀಗಾಗಿ, ‘ಬಜರಂಗಿ ಭಾಯಿಜಾನ್’​ ಕಥೆಯ ಕಡೆಗೆ ರಾಜಮೌಳಿಗೆ ಗಮನ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಇದನ್ನು ರಾಜಮೌಳಿ ನಿರ್ದೇಶನ ಮಾಡಿರಲಿಲ್ಲ. ಈಗ ಪಾರ್ಟ್​ 2 ಸಿದ್ಧಗೊಳ್ಳುತ್ತಿದ್ದು, ರಾಜಮೌಳಿ ನಿರ್ದೇಶನ ಸಿನಿಮಾಗೆ ಇರಲಿದೆಯೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಅದಕ್ಕೆ, ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

ಓಟಿಟಿಯಲ್ಲಿ ನೋಡಬಹುದು ‘ಭಜರಂಗಿ 2’ ಸಿನಿಮಾ; ಶಿವರಾಜ್​ಕುಮಾರ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?